ಅಮಿತ್ ಪಂಗೊಲ್ 
ಕ್ರೀಡೆ

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಅಮೀತ್, ಪೂಜಾಗೆ ಬಂಗಾರ

ಏಷ್ಯನ್ ಕ್ರೀಡಾಕೂಟದ ಸ್ವರ್ಣ ಪದಕ ವಿಜೇತ ಅಮಿತ್ ಪಂಗಲ್ ಹಾಗೂ ಪೂಜಾ ರಾಣಿ ಅವರು ಬ್ಯಾಂಕಾಕ್ ನಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು...

ನವದೆಹಲಿ: ಏಷ್ಯನ್ ಕ್ರೀಡಾಕೂಟದ ಸ್ವರ್ಣ ಪದಕ ವಿಜೇತ ಅಮಿತ್ ಪಂಗಲ್ ಹಾಗೂ ಪೂಜಾ ರಾಣಿ ಅವರು ಬ್ಯಾಂಕಾಕ್ ನಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು ಬಂಗಾರದ ಸಾಧನೆ ಮಾಡಿದ್ದಾರೆ. 
ಭಾರತದ ಆರು ಬಾಕ್ಸರ್ ಗಳು ಫೈನಲ್ ಗೆ ಅರ್ಹತೆ ಪಡೆದುಕೊಂಡಿದ್ದರು.ಅಮಿತ್ 52 ಕೆ.ಜಿ ಹಾಗೂ ಪೂಜಾ 51 ಕೆ.ಜಿ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ. ಸಿಮರ್ನ್ ಜೀತ್ ಕೌರ್ (64 ಕೆ.ಜಿ), ರಾಷ್ಟ್ರೀಯ ಚಾಂಪಿಯನ್ ದೀಪಕ್ ಸಿಂಗ್ (49 ಕೆ.ಜಿ), ಕವೀಂದ್ರ ಸಿಂಗ್ ಬಿಷ್ಟ (56 ಕೆ.ಜಿ) ಹಾಗೂ ಆಶೀಶ್ ಕುಮಾರ್ (75 ಕೆ.ಜಿ) ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ನಿರಾಸೆ ಅನುಭವಿಸಿ ಬೆಳ್ಳಿ ತಮ್ಮದಾಗಿಸಿಕೊಂಡರು. 
ಭಾರತ ಈವರೆಗೆ ಟೂರ್ನಿಯಲ್ಲಿ ಎರಡು ಚಿನ್ನ, ನಾಲ್ಕು ಬೆಳ್ಳಿ, ಏಳು ಕಂಚಿನ ಪಕಗಳೊಂದಿಗೆ ಒಟ್ಟು 13 ಪದಕ ಗೆದ್ದಿದೆ. ಪುರುಷರ ವಿಭಾಗದಲ್ಲಿ ಒಂದು ಬಂಗಾರ, ಮೂರು ಬೆಳ್ಳಿ, ಮೂರು ಕಂಚು ಜಯಿಸಿದರೆ, ಮಹಿಳಾ ವಿಭಾಗದಲ್ಲಿ ಒಂದು ಚಿನ್ನ, ಒಂದು ಬೆಳ್ಳಿ, ನಾಲ್ಕು ಕಂಚು ಪಡೆದಿದೆ. ಪುರುಷ ವಿಭಾಗದಲ್ಲಿ ಬಾಕ್ಸರ್ ಗಳು ದಶಕದ ಸಾಧನೆ ಅಳಿಸಿ ಹಾಕಿದ್ದಾರೆ. 2009ರಲ್ಲಿ ಭಾರತೀಯ ಬಾಕ್ಸರ್ ಗಳು ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚಿನ ಪದಕ ಗೆದ್ದಿದ್ದರು.     
ಕಳೆದ ವರ್ಷ ಅಮಿತ್‌ ಪಂಗಲ್‌ ಅವರು ಏಷ್ಯನ್‌ ಕ್ರೀಡಾಕೂಟದಲ್ಲಿ ಕೊರಿಯಾದ ಕಿಮ್‌ ಇಂಕ್ಯೂ ಅವರನ್ನು ಮಣಿಸಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದರು. ಇದರೊಂದಿಗೆ ಅವರು ಆ ವರ್ಷದಲ್ಲಿ ಎರಡು ಚಿನ್ನದ ಪದಕ ಗೆದ್ದಿದ್ದರು.
23ರ ಪ್ರಾಯದ ಅಮಿತ್‌ ಪಂಗಲ್‌ ಅವರು 49 ಕೆ.ಜಿ ಸ್ಪರ್ಧೆಯಿಂದ ಇದೇ ಮೊದಲ ಬಾರಿಗೆ 52 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸಿ ಅಂದುಕೊಂಡಂತೆ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಇದಕ್ಕೂ ಮೊದಲು ಅವರು ಕಳೆದ ಫೆಬ್ರವರಿಯಲ್ಲಿ ಸ್ಟ್ರಾಂಡ್ಜಾ ಮೆಮೋರಿಯಲ್ ಟೂರ್ನಿಯಲ್ಲಿ ಚಿನ್ನದ ಪದಕ ಜಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT