ಅಮಿತ್ ಪಂಗೊಲ್ 
ಕ್ರೀಡೆ

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಅಮೀತ್, ಪೂಜಾಗೆ ಬಂಗಾರ

ಏಷ್ಯನ್ ಕ್ರೀಡಾಕೂಟದ ಸ್ವರ್ಣ ಪದಕ ವಿಜೇತ ಅಮಿತ್ ಪಂಗಲ್ ಹಾಗೂ ಪೂಜಾ ರಾಣಿ ಅವರು ಬ್ಯಾಂಕಾಕ್ ನಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು...

ನವದೆಹಲಿ: ಏಷ್ಯನ್ ಕ್ರೀಡಾಕೂಟದ ಸ್ವರ್ಣ ಪದಕ ವಿಜೇತ ಅಮಿತ್ ಪಂಗಲ್ ಹಾಗೂ ಪೂಜಾ ರಾಣಿ ಅವರು ಬ್ಯಾಂಕಾಕ್ ನಲ್ಲಿ ನಡೆಯುತ್ತಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದು ಬಂಗಾರದ ಸಾಧನೆ ಮಾಡಿದ್ದಾರೆ. 
ಭಾರತದ ಆರು ಬಾಕ್ಸರ್ ಗಳು ಫೈನಲ್ ಗೆ ಅರ್ಹತೆ ಪಡೆದುಕೊಂಡಿದ್ದರು.ಅಮಿತ್ 52 ಕೆ.ಜಿ ಹಾಗೂ ಪೂಜಾ 51 ಕೆ.ಜಿ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ. ಸಿಮರ್ನ್ ಜೀತ್ ಕೌರ್ (64 ಕೆ.ಜಿ), ರಾಷ್ಟ್ರೀಯ ಚಾಂಪಿಯನ್ ದೀಪಕ್ ಸಿಂಗ್ (49 ಕೆ.ಜಿ), ಕವೀಂದ್ರ ಸಿಂಗ್ ಬಿಷ್ಟ (56 ಕೆ.ಜಿ) ಹಾಗೂ ಆಶೀಶ್ ಕುಮಾರ್ (75 ಕೆ.ಜಿ) ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ನಿರಾಸೆ ಅನುಭವಿಸಿ ಬೆಳ್ಳಿ ತಮ್ಮದಾಗಿಸಿಕೊಂಡರು. 
ಭಾರತ ಈವರೆಗೆ ಟೂರ್ನಿಯಲ್ಲಿ ಎರಡು ಚಿನ್ನ, ನಾಲ್ಕು ಬೆಳ್ಳಿ, ಏಳು ಕಂಚಿನ ಪಕಗಳೊಂದಿಗೆ ಒಟ್ಟು 13 ಪದಕ ಗೆದ್ದಿದೆ. ಪುರುಷರ ವಿಭಾಗದಲ್ಲಿ ಒಂದು ಬಂಗಾರ, ಮೂರು ಬೆಳ್ಳಿ, ಮೂರು ಕಂಚು ಜಯಿಸಿದರೆ, ಮಹಿಳಾ ವಿಭಾಗದಲ್ಲಿ ಒಂದು ಚಿನ್ನ, ಒಂದು ಬೆಳ್ಳಿ, ನಾಲ್ಕು ಕಂಚು ಪಡೆದಿದೆ. ಪುರುಷ ವಿಭಾಗದಲ್ಲಿ ಬಾಕ್ಸರ್ ಗಳು ದಶಕದ ಸಾಧನೆ ಅಳಿಸಿ ಹಾಕಿದ್ದಾರೆ. 2009ರಲ್ಲಿ ಭಾರತೀಯ ಬಾಕ್ಸರ್ ಗಳು ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚಿನ ಪದಕ ಗೆದ್ದಿದ್ದರು.     
ಕಳೆದ ವರ್ಷ ಅಮಿತ್‌ ಪಂಗಲ್‌ ಅವರು ಏಷ್ಯನ್‌ ಕ್ರೀಡಾಕೂಟದಲ್ಲಿ ಕೊರಿಯಾದ ಕಿಮ್‌ ಇಂಕ್ಯೂ ಅವರನ್ನು ಮಣಿಸಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದರು. ಇದರೊಂದಿಗೆ ಅವರು ಆ ವರ್ಷದಲ್ಲಿ ಎರಡು ಚಿನ್ನದ ಪದಕ ಗೆದ್ದಿದ್ದರು.
23ರ ಪ್ರಾಯದ ಅಮಿತ್‌ ಪಂಗಲ್‌ ಅವರು 49 ಕೆ.ಜಿ ಸ್ಪರ್ಧೆಯಿಂದ ಇದೇ ಮೊದಲ ಬಾರಿಗೆ 52 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸಿ ಅಂದುಕೊಂಡಂತೆ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಇದಕ್ಕೂ ಮೊದಲು ಅವರು ಕಳೆದ ಫೆಬ್ರವರಿಯಲ್ಲಿ ಸ್ಟ್ರಾಂಡ್ಜಾ ಮೆಮೋರಿಯಲ್ ಟೂರ್ನಿಯಲ್ಲಿ ಚಿನ್ನದ ಪದಕ ಜಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?