ತಮಿಳ್ ತಲೈವಾಸ್ ಮಣಿಸಿದ ಬೆಂಗಳೂರು ಬುಲ್ಸ್ 
ಕ್ರೀಡೆ

ಪ್ರೊಕಬಡ್ಡಿ ಲೀಗ್ 2019: ತಮಿಳ್ ತಲೈವಾಸ್ ಸೋಲಿನ ಪಾಠ ಮಾಡಿದ ಬೆಂಗಳೂರು ಬುಲ್ಸ್!

ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಶನಿವಾರದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ಮತ್ತೆ ಘರ್ಜಿಸಿದ್ದು, ತಮಿಳ್ ತಲೈವಾಸ್ ತಂಡವನ್ನು ಅವರ ತವರಿನಲ್ಲೇ ಮಣಿಸುವ ಮೂಲಕ ಟೂರ್ನಿಯಲ್ಲಿ ಮತ್ತೊಂದು ಗೆಲುವಿನ ನಗೆ ಬೀರಿದ್ದಾರೆ.

ತವರಿನಲ್ಲೇ ಬೆಂಗಳೂರು ವಿರುದ್ಧ ತಲೆಬಾಗಿದ ತಮಿಳ್ ತಲೈವಾಸ್, 32-21 ಅಂಕಗಳ ಅಂತರದ ಭರ್ಜರಿ ಜಯ

ಚೆನ್ನೈ: ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಶನಿವಾರದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ಮತ್ತೆ ಘರ್ಜಿಸಿದ್ದು, ತಮಿಳ್ ತಲೈವಾಸ್ ತಂಡವನ್ನು ಅವರ ತವರಿನಲ್ಲೇ ಮಣಿಸುವ ಮೂಲಕ ಟೂರ್ನಿಯಲ್ಲಿ ಮತ್ತೊಂದು ಗೆಲುವಿನ ನಗೆ ಬೀರಿದ್ದಾರೆ.

ಸಾಂಪ್ರದಾಯಿಕ ಎದುರಾಳಿ ತಮಿಲ್ ತಲೈವಾಸ್ ವಿರುದ್ಧದ ಹೋರಾಟದಲ್ಲಿ ಬೆಂಗಳೂರು ಬುಲ್ಸ್ ತಂಡ 32-21 ಅಂಕಗಳ ಮೂಲಕ  ಭರ್ಜರಿ ಗೆಲುವು ಸಾಧಿಸಿತು. ಇದರೊಂದಿಗೆ ಹಾಲಿ ಚಾಂಪಿಯನ್ ಬೆಂಗಳೂರು ಈ ಬಾರಿಯೂ ಪ್ರಶಸ್ತಿ ಗೆಲ್ಲೋ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.

ಇನ್ನು ಮೊದಲಾರ್ಧದಲ್ಲೇ ಅಬ್ಬರಿಸಿದ ಬೆಂಗಳೂರು ತಂಡದ ಆಟಗಾರರು ಕೇವಲ ಆರಂಭಿಕ 5 ನಿಮಷದಲ್ಲಿ ಅಂಕ ಬಾಚಿಕೊಂಡರೆ, ಇತ್ತ ತಮಿಳ್ ತಲೈವಾಸ್ ಒಂದೂ ಅಂಕವನ್ನು ಗಳಿಸಲಿಲ್ಲ. 7-0 ಮುನ್ನಡೆ ಸಾಧಿಸಿದ ಬೆಂಗಳೂರು 6ನೇ ನಿಮಿಷದಲ್ಲಿ ತಮಿಳ್ ತಲೈವಾಸ್ ತಂಡವನ್ನು ಆಲೌಟ್ ಮಾಡಿತು. ಈ ಮೂಲಕ 10-1 ಅಂಕಗಳ ಮುನ್ನಡೆ ಪಡೆದುಕೊಂಡಿತು. ಮೊದಲಾರ್ಧದ ಅಂತ್ಯದ ವೇಳೆಗೆ ತಮಿಳ್ ತಲೈವಾಸ್ ಚುರುಕಿನ ಆಟವಾಡಿತು.

ಅಷ್ಟರಲ್ಲೇ ಬೆಂಗಳೂರು ಭಾರಿ ಮುನ್ನಡೆ ಪಡೆದುಕೊಂಡಿತ್ತು. ಹೀಗಾಗಿ ಬುಲ್ಸ್ 17-10 ಅಂಕದೊಂದಿಗೆ ಮೊದಲಾರ್ಧ ಅಂತ್ಯಗೊಳಿಸಿತು. ಇನ್ನು ದ್ವಿತೀಯಾರ್ಧದಲ್ಲಿ ಬೆಂಗಳೂರು ಹೋರಾಟ ಮುಂದುವರಿಸಿತು. ಇತ್ತ ತಮಿಳ್ ತಲೈವಾಸ್ ಮುನ್ನಡೆಗಾಗಿ ಹರಸಾಹಸ ಪಟ್ಟರೂ ಆ ತಂಡದ ಯೋಜನೆಗಳು ಯಾವುದೂ ಕೈಗೂಡಲಿಲ್ಲ. ಪಂದ್ಯ ಮುಕ್ತಾಯದ ವೇಳೆ ಬೆಂಗಳೂರುು 32-21 ಅಂಕಗಳಿಂದ ಮುನ್ನಡೆ ಸಾಧಿಸಿತ್ತು. ಆ ಮೂಲಕ ಟೂರ್ನಿಯಲ್ಲಿ ಮತ್ತೊಂದು ಗೆಲುವು ಸಾಧಿಸಿ ಟೂರ್ನಿಯಲ್ಲಿ ತನ್ನ ಗೆಲುವಿನ ನಾಗಾಲೋಟ ಮುಂದುವರೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT