ಪಿವಿ ಸಿಂಧು-ಸಾಯಿ ಪ್ರಣೀತ್ 
ಕ್ರೀಡೆ

ಬಿಡಬ್ಲ್ಯೂಎಫ್ ಬ್ಯಾಡ್ಮಿಂಟನ್: ಪಿವಿ ಸಿಂಧು ಸೆಮೀಸ್‌ಗೆ, ಇತಿಹಾಸ ಬರೆದ ಸಾಯಿ ಪ್ರಣಿತ್

ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಸಾಧನೆ ಮಾಡಿರುವ ಪಿವಿ ಸಿಂಧು ಹಾಗೂ ಸಾಯಿ ಪ್ರಣಿತ್ ಅವರು ಇಲ್ಲಿ ನಡೆದಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಕ್ವಾರ್ಟರ್ ಫೈನಲ್ಸ್ ನಲ್ಲಿ ಜಯ ಸಾಧಿಸಿದ್ದಾರೆ.

ಬಾಸೆಲ್(ಸ್ವಿಟ್ಜರ್ಲೆಂಡ್): ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಸಾಧನೆ ಮಾಡಿರುವ ಪಿವಿ ಸಿಂಧು ಹಾಗೂ ಸಾಯಿ ಪ್ರಣಿತ್ ಅವರು ಇಲ್ಲಿ ನಡೆದಿರುವ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಕ್ವಾರ್ಟರ್ ಫೈನಲ್ಸ್ ನಲ್ಲಿ ಜಯ ಸಾಧಿಸಿದ್ದಾರೆ.  
  
ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ಸಿಂಧು 12-21, 23-21, 21-19 ರಿಂದ ಚೈನಿಸ್ ತೈಪಿಯ ತೈ ಜು ವಿಂಗ್ ವಿರುದ್ಧ ಒಂದು ಗಂಟೆ 11 ನಿಮಿಷದ ಕಾದಾಟದಲ್ಲಿ ಜಯ ಸಾಧಿಸಿದರು. ಈ ಆಟಗಾರ್ತಿಯರು ಒಟ್ಟು 15 ಬಾರಿ ಮುಖಾಮುಖಿಯಾಗಿದ್ದು, ಸಿಂಧು ಐದನೇ ಗೆಲುವು ದಾಖಲಿಸಿದರು. ಈ ಮೂಲಕ ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಐದನೇ ಪದಕವನ್ನು ಖಚಿತ ಪಡಿಸಿಕೊಂಡಿದ್ದಾರೆ. 
  
ಪುರುಷರ ಸಿಂಗಲ್ಸ್ ನಲ್ಲಿ ಬಿ.ಸಾಯಿ ಪ್ರಣೀತ್ ಅವರು 24-22, 21-14 ರಿಂದ ಇಂಡೋನೇಷ್ಯಾದ ಜೋನಾಥನ್ ಕ್ರೆಸ್ಟ್ ಅವರನ್ನು 51 ನಿಮಿಷಗಳ ಕಾದಾಟದಲ್ಲಿ ಮಣಿಸಿದರು. 1983ರಲ್ಲಿ ಪ್ರಕಾಶ್ ಪಡುಕೋಣೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಕಂಚು ಪಡೆದು ಬೀಗಿದ್ದರು. 36 ವರ್ಷಗಳ ಬಳಿಕ ಭಾರತದ ಮತ್ತೋರ್ವ ಬ್ಯಾಡ್ಮಿಂಟನ್ ಆಟಗಾರ, ಪದಕ ಖಾತರಿ ಪಡಿಸಿಕೊಂಡಿದ್ದಾರೆ. 
  
ಮೊದಲ ಗೇಮ್ ನಲ್ಲಿ ಸಿಂಧು ನಿರಾಸೆ ಅನುಭವಿಸಿದರು. ಎರಡನೇ ಗೇಮ್ ನಲ್ಲಿ ಎಚ್ಚರಿಕೆಯ ಆಟವನ್ನು ಆಡಿದರು. ನಿರ್ಣಾಯಕ ಗೇಮ್ ನಲ್ಲಿ ಮೊದಲಿನಿಂದಲೂ ಎದುರಾಳಿ ಆಟಗಾರ್ತಿಗೆ ತೀವ್ರ ಪೈಪೋಟಿ ನೀಡಿದ ಸಿಂಧು ಅಂಕ ಬೇಟೆಯಲ್ಲಿ ಮುನ್ನಡೆ ಸಾಧಿಸಿದರು. ಮೊದಲಾವಧಿಯಲ್ಲಿ ತೈ ಜು ಅಂಕಗಳಿಕೆಯಲ್ಲಿ ಮುಂದಿದ್ದರು. ಎರಡನೇ ಅವಧಿಯಲ್ಲಿ ಅಮೋಘ ಗ್ಯಾಪ್ ಶಾಟ್ ಹಾಗೂ ಸರ್ವ್ ಗಳನ್ನು ಮಾಡಿದ ಸಿಂಧು, ಶ್ರೇಷ್ಠ ಪ್ರದರ್ಶನ ನೀಡಿ ಗೇಮ್ ಗೆದ್ದರು. 
  
ಮೂರನೇ ಗೇಮ್ ನ ಆರಂಭದಿಂದಲೂ ಹಿನ್ನಡೆ ಅನುಭವಿಸಿದ್ದ ಸಿಂಧು, ಒತ್ತಡಕ್ಕೆ ಒಳಗಾಗದೆ ಆಡಿದರು. ಫಲವಾಗಿ 14-14, 15-15, 17-17 ಹಾಗೂ 19-19 ರಿಂದ ಸಮಬಲದಲ್ಲಿ ಸಾಗುತ್ತಿದ್ದ ಪಂದ್ಯದ ಕೊನೆಯಲ್ಲಿ ಸತತ ಅಂಕಗಳನ್ನು ಕಲೆ ಹಾಕಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT