ಸಂಗ್ರಹ ಚಿತ್ರ 
ಕ್ರೀಡೆ

ವಿಶ್ವ ಚಾಂಪಿಯನ್ ಪಿ.ವಿ.ಸಿಂಧುಗೆ ನಗದು ಬಹುಮಾನ ಘೋಷಿಸಿದ ಬಿ.ಎಸ್.ಯಡಿಯೂರಪ್ಪ

ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಪಡೆದ ಭಾರತೀಯ ಆಟಗಾರ್ತಿ ಪಿ.ವಿ.ಸಿಂಧು ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು: ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಪಡೆದ ಭಾರತೀಯ ಆಟಗಾರ್ತಿ ಪಿ.ವಿ.ಸಿಂಧು ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬಂಗಾರದ ‌ಪದಕ ಗೆದ್ದ ಪಿ.ವಿ.ಸಿಂಧು ಅವರಿಗೆ ರಾಜ್ಯ ಸರ್ಕಾರ ಐದು ಲಕ್ಷ ರೂ ಬಹುಮಾನ ನೀಡಲಿದೆ ಎಂದು ಬಿ.ಎಸ್.ಯಡಿಯೂರಪ್ಪ ನವದೆಹಲಿಯಲ್ಲಿ ಪ್ರಕಟಿಸಿದರು.

ತೆಲಂಗಾಣ ರಾಜ್ಯಪಾಲ ಇಎಸ್‍ಎಲ್‍ ನರಸಿಂಹನ್ ಅವರು ಸಿಂಧು ಅವರು ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ ಶಿಪ್‍ನಲ್ಲಿ ಚಿನ್ನದ ಪದಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರ ಐತಿಹಾಸಿಕ ಸಾಧನೆಗೆ ದೇಶ ಹೆಮ್ಮೆ ಪಡುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ವಿಶ್ವ ವಿಜೇತೆ ಪಿವಿ ಸಿಂಧುಗೆ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ 20 ಲಕ್ಷ ರೂ ಘೋಷಣೆ ಮಾಡಿದ್ದು, ಸಾಯಿ ಪ್ರಣೀತ್ ಗೆ ಐದು ಲಕ್ಷ ರೂ ಘೋಷಣೆ ಮಾಡಿದೆ. 

ಇನ್ನು ಕರ್ನಾಟಕದ ಬಹುತೇಕ ಪ್ರದೇಶಗಳು ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ತಮ್ಮ  ಅಸ್ಥಿತ್ವವನ್ನೇ ಕಳೆದುಕೊಂಡಿರುವ ಪ್ರವಾಹ ಪೀಡಿತ ಸಂತ್ರಸ್ಥರು ನೆರವಿಗಾಗಿ ಅಂಗಲಾಚುತ್ತಿರುವ ಈ ಸಂದರ್ಭದಲ್ಲಿ ಸಿಎಂ ಬಿಎಸ್ ವೈ ಪಿವಿ ಸಿಂಧುಗೆ ನಗದು ಬಹುಮಾನ ಘೋಷಣೆ ಮಾಡಿರುವುದು ಹಲವು ಚರ್ಚೆ ಹುಟ್ಟುಹಾಕಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!