ಸಂಗ್ರಹ ಚಿತ್ರ 
ಕ್ರೀಡೆ

ವಿಶ್ವ ಚಾಂಪಿಯನ್ ಪಿ.ವಿ.ಸಿಂಧುಗೆ ನಗದು ಬಹುಮಾನ ಘೋಷಿಸಿದ ಬಿ.ಎಸ್.ಯಡಿಯೂರಪ್ಪ

ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಪಡೆದ ಭಾರತೀಯ ಆಟಗಾರ್ತಿ ಪಿ.ವಿ.ಸಿಂಧು ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು: ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಪಡೆದ ಭಾರತೀಯ ಆಟಗಾರ್ತಿ ಪಿ.ವಿ.ಸಿಂಧು ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬಂಗಾರದ ‌ಪದಕ ಗೆದ್ದ ಪಿ.ವಿ.ಸಿಂಧು ಅವರಿಗೆ ರಾಜ್ಯ ಸರ್ಕಾರ ಐದು ಲಕ್ಷ ರೂ ಬಹುಮಾನ ನೀಡಲಿದೆ ಎಂದು ಬಿ.ಎಸ್.ಯಡಿಯೂರಪ್ಪ ನವದೆಹಲಿಯಲ್ಲಿ ಪ್ರಕಟಿಸಿದರು.

ತೆಲಂಗಾಣ ರಾಜ್ಯಪಾಲ ಇಎಸ್‍ಎಲ್‍ ನರಸಿಂಹನ್ ಅವರು ಸಿಂಧು ಅವರು ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ ಶಿಪ್‍ನಲ್ಲಿ ಚಿನ್ನದ ಪದಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರ ಐತಿಹಾಸಿಕ ಸಾಧನೆಗೆ ದೇಶ ಹೆಮ್ಮೆ ಪಡುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ವಿಶ್ವ ವಿಜೇತೆ ಪಿವಿ ಸಿಂಧುಗೆ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ 20 ಲಕ್ಷ ರೂ ಘೋಷಣೆ ಮಾಡಿದ್ದು, ಸಾಯಿ ಪ್ರಣೀತ್ ಗೆ ಐದು ಲಕ್ಷ ರೂ ಘೋಷಣೆ ಮಾಡಿದೆ. 

ಇನ್ನು ಕರ್ನಾಟಕದ ಬಹುತೇಕ ಪ್ರದೇಶಗಳು ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ತಮ್ಮ  ಅಸ್ಥಿತ್ವವನ್ನೇ ಕಳೆದುಕೊಂಡಿರುವ ಪ್ರವಾಹ ಪೀಡಿತ ಸಂತ್ರಸ್ಥರು ನೆರವಿಗಾಗಿ ಅಂಗಲಾಚುತ್ತಿರುವ ಈ ಸಂದರ್ಭದಲ್ಲಿ ಸಿಎಂ ಬಿಎಸ್ ವೈ ಪಿವಿ ಸಿಂಧುಗೆ ನಗದು ಬಹುಮಾನ ಘೋಷಣೆ ಮಾಡಿರುವುದು ಹಲವು ಚರ್ಚೆ ಹುಟ್ಟುಹಾಕಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT