ಗೋಲು ಗಳಿಸಿದ ಸಂಭ್ರಮದಲ್ಲಿ ಸುನೀಲ್ ಛೇಟ್ರಿ ಮತ್ತಿತರರು 
ಕ್ರೀಡೆ

ಎಎಫ್ ಸಿ ಏಷ್ಯನ್ ಕಪ್: ಥಾಯ್ಲೆಂಡ್ ವಿರುದ್ಧ ಭಾರತ ಭರ್ಜರಿ ಗೆಲುವು

ಎಎಫ್ ಸಿ ಏಷ್ಯನ್ ಕಪ್ ನಲ್ಲಿ ಭಾರತೀಯ ಗೋಲ್ ಮಷಿನ್ ಸುನೀಲ್ ಛೆಟ್ರಿ ಅವರ ಭರ್ಜರಿ ಆಟದ ನೆರವಿನೊಂದಿಗೆ ಭಾರತ...

ಅಬುಧಾಬಿ: ಎಎಫ್ ಸಿ ಏಷ್ಯನ್ ಕಪ್ ನಲ್ಲಿ ಭಾರತೀಯ ಗೋಲ್ ಮಷಿನ್ ಸುನೀಲ್ ಛೆಟ್ರಿ ಅವರ ಭರ್ಜರಿ ಆಟದ ನೆರವಿನೊಂದಿಗೆ ಭಾರತ, ಥಾಯ್ಲೆಂಡ್ ವಿರುದ್ಧ 4-1 ಗೋಲುಗಳಿಂದ ಜಯಗಳಿಸಿದೆ. 
ಇಂದು ನಡೆದ ಎ ಗುಂಪಿನ ಮೊದಲ ಪಂದ್ಯದಲ್ಲಿ ಬೆಂಗಳೂರು ಎಫ್​ಸಿ ಆಟಗಾರ ಸುನೀಲ್ ಛೆಟ್ರಿ ಅವರು ಎರಡು ಗೋಲು ಗಳಿಸಿದರು. ಭವಿಷ್ಯದ ಉಜ್ವಲ ಪ್ರತಿಭೆ ಎನ್ನಲಾದ ಅನಿರುದ್ಧ್ ಥಾಪಾ ಹಾಗೂ ಜೇಜೇ ಲಾಲ್​ ಪೆಖ್ಲುವಾ ಅವರು ಮತ್ತೆರಡು ಗೋಲು ಗಳಿಸಿ ತಂಡಕ್ಕೆ ಗೆಲುವು ತಂದಿತ್ತರು.
ಜಿದ್ದಾಜಿದ್ದಿನ ಪಂದ್ಯದಲ್ಲಿ ಛೆಟ್ರಿ 27ನೇ ನಿಮಿಷದಲ್ಲಿ ಪಡೆದ ಪೆನಾಲ್ಟಿ ಅವಕಾಶದಿಂದ ಗೋಲುಗಳಿಸುವ ಮೂಲಕ ತಂಡಕ್ಕೆ ಮೊದಲ ಮುನ್ನಡೆ ತಂದುಕೊಟ್ಟರು. ಆದರೆ ಆ ಖುಷಿ ಉಳಿದದ್ದು ಕೇವಲ 6 ನಿಮಿಷ ಮಾತ್ರ. ಥಾಯ್ಲೆಂಡ್ ತಂಡ 33ನೇ ನಿಮಿಷದಲ್ಲಿ ಗೋಲು ಗಳಿಸಿ ಸಮಬಲ ಸಾಧಿಸಿತು. ಆದರೆ, ದ್ವಿತೀಯಾರ್ಧದಲ್ಲಿ ಭಾರತೀಯರು ಹೆಚ್ಚು ಆಕ್ರಮಣಕಾರಿಯಾಗಿ ಆಡಿದರು. ಎರಡನೇ ಅವಧಿಯ ಎರಡನೇ ನಿಮಿಷದಲ್ಲೇ ಸುನೀಲ್ ಛೆಟ್ರಿ ಗೋಲು ಗಳಿಸಿದರು. 
ಭಾರತ ಇರುವ ಎ ಗುಂಪಿನಲ್ಲಿ ನಡೆದ ಮತ್ತೊಂದು ಪಂದ್ಯದಲ್ಲಿ ಯುಎಇ ಮತ್ತು ಬಹ್ರೇನ್ ತಂಡಗಳು 1-1ರಿಂದ ಸಮಬಲ ಸಾಧಿಸಿದವು. ಜನವರಿ 10ರಂದು ನಡೆಯುವ ಎರಡನೇ ಸುತ್ತಿನಲ್ಲಿ ಪ್ರಬಲ ಯುಎಇ ತಂಡವನ್ನು ಭಾರತ ಎದುರಿಸಲಿದೆ. ಈ ಪಂದ್ಯದಲ್ಲಿ ಭಾರತವೇನಾದರೂ ಗೆಲುವು ಸಾಧಿಸಿದರೆ ನಾಕೌಟ್ ಪ್ರವೇಶ ಖಚಿತವಾಗಲಿದೆ. ಮೂರನೇ ಸುತ್ತಿನ ಪಂದ್ಯವು ಜನವರಿ 14ರಂದು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT