ಸಂಗ್ರಹ ಚಿತ್ರ 
ಕ್ರೀಡೆ

ಅತ್ಯಾಚಾರ ಪ್ರಕರಣ: ಪೋರ್ಚುಗಲ್ ಫುಟ್ಬಾಲ್ ಸೂಪರ್ ಸ್ಟಾರ್ ರೊನಾಲ್ಡೋ ವಿರುದ್ಧ ಅರೆಸ್ಟ್ ವಾರಂಟ್?

ಮಾಡೆಲ್ ಮೇಲಿನ ಅತ್ಯಾಚಾರ ಪ್ರಕರಣಕ್ಕ ಸಂಬಂಧಿಸಿದಂತೆ ಪೋರ್ಚುಗಲ್ ಫುಟ್ಬಾಲ್ ಸೂಪರ್ ಸ್ಟಾರ್ ರೊನಾಲ್ಡೋ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ವಾಷಿಂಗ್ಟನ್: ಮಾಡೆಲ್ ಮೇಲಿನ ಅತ್ಯಾಚಾರ ಪ್ರಕರಣಕ್ಕ ಸಂಬಂಧಿಸಿದಂತೆ ಪೋರ್ಚುಗಲ್ ಫುಟ್ಬಾಲ್ ಸೂಪರ್ ಸ್ಟಾರ್ ರೊನಾಲ್ಡೋ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ವಾಲ್ ಸ್ಟ್ರೀಟ್ ಜರ್ನಲ್ ಪತ್ರಿಕೆ ವರದಿ ಮಾಡಿದ್ದು, 2009 ರಲ್ಲಿ ನಡೆದ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಶ್ವದ ನಂಬರ್​ 1 ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ವಿರುದ್ಧ ಅರೆಸ್ಟ್​ ವಾರೆಂಟ್​ ಜಾರಿ ಮಾಡಲಾಗಿದೆ ಎಂದು ಹೇಳಿದೆ. ಅಮೆರಿಕದ ರೂಪದರ್ಶಿ ಕ್ಯಾಥರಿನ್ ಮಯೊರ್ಗಾ ಅವರ ಮೇಲೆ ರೊನಾಲ್ಜೋ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ರೊನಾಲ್ಡೋ ಅವರ ಡಿಎನ್ ಎ ಸಂಗ್ರಹಕ್ಕಾಗಿ ಅವರ ವಿರುದ್ಧ ಲಾಸ್ ವೇಗಾಸ್ ಪೊಲೀಸರ ವಾರೆಂಟ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.
2009 ರಲ್ಲಿ ಹೊಟೇಲ್​ ರೂಮ್​ ಒಂದರಲ್ಲಿ ಕ್ರಿಸ್ಟಿಯಾನೊ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಅಲ್ಲದೆ ಈ ಸುದ್ದಿಯನ್ನು ಬಹಿರಂಗಪಡಿಸದಂತೆ 2.7 ಕೋಟಿ ರೂ ಹಣದ ಆಮಿಷ ಒಡ್ಡಿದ್ದರು ಎಂದು ಕ್ಯಾಥರಿನ್ ಕಳೆದ ಅಕ್ಟೋಬರ್​ನಲ್ಲಿ ಗಂಭೀರ ಆರೋಪ ಮಾಡಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ಕೊಂಡಿದ್ದ ಲಾಸ್ ವೇಗಾಸ್ ಪೊಲೀಸರು, ರೊನಾಲ್ಡೋಗೆ ಡಿಎನ್​ಎ ಸ್ಯಾಂಪಲ್ ನೀಡುವಂತೆ ತಿಳಿಸಿದ್ದರು. ಆದರೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದ ರೊನಾಲ್ಡೊ ಪೊಲೀಸರಿಗೆ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ದೂರಿಗೆ ಸಂಬಂಧಿಸಿದಂತೆ ಸಹಕರಿಸದ ಕಾರಣ ರೊನಾಲ್ಡೊ ವಿರುದ್ಧ ಲಾಸ್​ ವೇಗಾಸ್ ಪೊಲೀಸರು ವಾರೆಂಟ್​ ಜಾರಿ ಮಾಡಿದ್ದಾರೆ. ಈ ಸಂಬಂಧ ವಾರೆಂಟ್ ಪ್ರತಿಯನ್ನು ಲಾಸ್ ವೇಗಾಸ್ ಪೊಲೀಸರು ಇಟಲಿ ನ್ಯಾಯಾಲಯಕ್ಕೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಸದ್ಯ ಜ್ಯುವೆಂಟಸ್‌ ಕ್ಲಬ್​ ಪರ ಆಡುತ್ತಿರುವ ಆಕ್ರಮಣಕಾರಿ ಫುಟ್​ಬಾಲರ್​ಕ್ರಿಸ್ಟಿಯಾನೊ ರೊನಾಲ್ಡೊ ಇತ್ತೀಚೆಗಷ್ಟೇ ವರ್ಷದ ಶ್ರೇಷ್ಠ ಫ‌ುಟ್‌ಬಾಲಿಗ ಗ್ಲೋಬ್‌ ಸಾಕರ್‌ ಪ್ರಶಸ್ತಿ ಯನ್ನು ತಮ್ಮದಾಗಿಸಿಕೊಂಡಿದ್ದರು. ವಿಶ್ವವಿಖ್ಯಾತ ಆಟಗಾರ ಅರ್ಜೆಂಟೀನಾದ ಲಿಯೊನೆಲ್‌ ಮೆಸ್ಸಿಯನ್ನು ಹಿಂದಿಕ್ಕಿ ಕ್ರಿಸ್ಟಿಯಾನೊ ಪ್ರಶಸ್ತಿ ಗೆಲ್ಲುವ ಮೂಲಕ ಹೊಸ ಫುಟ್​ಬಾಲ್​ ವರ್ಷವನ್ನು ಭರ್ಜರಿಯಾಗಿ ಆರಂಭಿಸಿದ್ದರು. ಆದರೆ ಅಷ್ಟರಲ್ಲೇ ರೊನಾಲ್ಡೋಗೆ ವರ್ಷದ ಮೊದಲ ಸಂಕಷ್ಟ ಎದುರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT