ಹಿಮಾದಾಸ್, ಮುಹಮ್ಮದ್ ಅನಾಸ್ 
ಕ್ರೀಡೆ

ಹದಿನೈದು ದಿನಗಳಲ್ಲಿ 4ನೇ ಸ್ವರ್ಣ ಗೆದ್ದ ಹಿಮಾದಾಸ್, ಅನಾಸ್‌ಗೆ ಅಗ್ರ ಸ್ಥಾನ

ಚಿನ್ನದ ಬೇಟೆ ಮುಂದುವರಿಸಿರುವ ಭಾರತದ ವೇಗದ ಓಟಗಾರ್ತಿ ಹಿಮಾ ದಾಸ್‌ ಅವರು ಬುಧವಾರ ನಡೆದ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್‌ನಲ್ಲಿ ಮತ್ತೊಂದು ಚಿನ್ನದ ಪದಕ ತನ್ನ ಖಾತೆಗೆ ಸೇರ್ಪಡೆ ಮಾಡಿಕೊಂಡಿದ್ದಾರೆ.

ನವದೆಹಲಿ: ಚಿನ್ನದ ಬೇಟೆ ಮುಂದುವರಿಸಿರುವ ಭಾರತದ ವೇಗದ ಓಟಗಾರ್ತಿ ಹಿಮಾ ದಾಸ್‌ ಅವರು ಬುಧವಾರ ನಡೆದ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್‌ನಲ್ಲಿ ಮತ್ತೊಂದು ಚಿನ್ನದ ಪದಕ ತನ್ನ ಖಾತೆಗೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಆ ಮೂಲಕ ಕೇವಲ 15 ದಿನಗಳ ಅಂತರದಲ್ಲಿ ಹಿಮಾದಾಸ್‌ ನಾಲ್ಕನೇ ಸ್ವರ್ಣ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಜೆಕ್‌ ಗಣರಾಜ್ಯದಲ್ಲಿ ನಡೆಯುತ್ತಿರುವ ಟ್ಯಾಬರ್ ಅಥ್ಲೆಟಿಕ್ಸ್ ಮೀಟ್‌ನ 200ಮೀ. ಓಟವನ್ನು ಭಾರತದ ಹಿಮಾ ದಾಸ್‌ ಅವರು 23.25 ಸೆಕೆಂಡ್‌ಗಳಲ್ಲಿ ಪೂರ್ಣಗೊಳಿಸುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಭಾರತದ ಮತ್ತೊಬ್ಬ ಓಟಗಾರ್ತಿ ವಿಸ್ಮಯ ಅವರು 200 ಮೀ ಅಂತರವನ್ನು 23.43 ಸೆಕೆಂಡ್‌ಗಳಲ್ಲಿ ಕ್ರಮಿಸುವ ಮೂಲಕ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ.
ಇನ್ನು ಪುರುಷರ ವಿಭಾಗದಲ್ಲಿ ಭಾರತದ ಮೊಹಮ್ಮದ್ ಅನಾಸ್‌ ಅವರು 400ಮೀ ಓಟವನ್ನು 45.40 ಸೆಕೆಂಡ್‌ಗಳಲ್ಲಿ ಪೂರ್ಣಗೊಳಿಸುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.  ಜುಲೈ 13 ರಂದು ಅನಾಸ್‌ ಕ್ಲಾಡ್ನೊ ಸ್ಪರ್ಧೆಯಲ್ಲೂ 400 ಮೀ. ಓಟವನ್ನು 45.21 ಸೆಕೆಂಡ್‌ಗಳಲ್ಲಿ ಮುಗಿಸಿ ಚಿನ್ನ ಗೆದ್ದಿದ್ದರು. ಇದೀಗ ಅವರು ಎರಡನೇ ಸ್ವರ್ಣ ಪದಕಕ್ಕೆ ಭಾಜನರಾಗಿದ್ದಾರೆ.
ಜುಲೈ 2 ರಿಂದ ಇದುವರೆಗೂ ಹಿಮಾದಾಸ್‌ ಒಟ್ಟು ನಾಲ್ಕು ಚಿನ್ನದ ಪದಕ ಗೆದ್ದಿದ್ದಾರೆ. ಯುರೋಪ್‌ನಲ್ಲಿ ನಡೆದಿದ್ದ ಸ್ಪರ್ಧೆಯಲ್ಲಿ ಮೊದಲ ಚಿನ್ನ ತಮ್ಮದಾಗಿಸಿಕೊಂಡಿದ್ದರು. ಇದೀಗ ಅವರು 200 ಮೀ ಓಟವನ್ನು 23.25 ಅಂತರದಲ್ಲಿ ಮುಗಿಸುವ ಮೂಲಕ ಮೊದಲ ಸ್ಪರ್ಧೆಯ ಓಟದ ಸಮಯವನ್ನು ಇನ್ನಷ್ಟು ಉತ್ತಮಪಡಿಸಿಕೊಂಡಿದ್ದಾರೆ. ಈ ಕುರಿತು ಹಿಮಾ ದಾಸ್ ಟ್ವಿಟ್‌ ಮಾಡಿದ್ದಾರೆ.
ಜುಲೈ 2ರಂದು ಪೊಲೆಂಡ್‌ನಲ್ಲಿ ನಡೆದಿದ್ದ ಪೊಜ್ನಾನ್‌ ಅಥ್ಲೆಟಿಕ್ಸ್‌ ಪ್ರಿಕ್ಸ್‌ನಲ್ಲಿ ಹಿಮಾದಾಸ್‌ ಅವರು 23.65 ಸೆಕೆಂಡ್‌ಗಳಲ್ಲಿ ಓಟವನ್ನು ಮುಗಿಸಿ ಮೊದಲ ಚಿನ್ನ ಗೆದ್ದಿದ್ದರು. ನಂತರ, ಜುಲೈ 8 ರಂದು ಕುಟ್ನೊ ಅಥ್ಲೆಟಿಕ್ಸ್‌ ಮೀಟ್‌ನಲ್ಲಿ ಅಸ್ಸಾಂ ಓಟಗಾರ್ತಿ 23.97 ಸೆಕೆಂಡ್‌ಗಳಲ್ಲಿ ಕ್ರಮಿಸಿ ಎರಡನೇ ಚಿನ್ನ ತಮ್ಮದಾಗಿಸಿಕೊಂಡಿದ್ದರು. ಜತೆಗೆ, ಕೇರಳ ಓಟಗಾರ್ತಿ ವಿಸ್ಮಯ ಅವರು 24.06 ಸೆಕೆಂಡ್‌ಗಳಲ್ಲಿ ಕ್ರಮಿಸಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದರು. 
ಜುಲೈ 13 ರಂದು ಝೆಕ್‌ ಗಣರಾಜ್ಯದ ಕ್ಲಾಡ್ನೊ ಅಥ್ಲೆಟಿಕ್ಸ್‌ಮೀಟ್‌ನಲ್ಲಿ 200 ಮೀ ಸ್ಪರ್ಧೆಯಲ್ಲಿ 23.43 ಸೆಕೆಂಡ್‌ಗಳಲ್ಲಿ ಪೂರ್ಣಗೊಳಿಸುವ ಮೂಲಕ ಮೂರನೇ ಚಿನ್ನದ ಪದಕ ಗೆದ್ದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT