ಸಾಯಿ ಪ್ರಣೀತ್‌ 
ಕ್ರೀಡೆ

ಜಪಾನ್ ಓಪನ್: ಸಾಯಿ ಪ್ರಣೀತ್ ಶುಭಾರಂಭ, ಸಿಂಧೂ, ಶ್ರೀಕಾಂತ್ ಗೆ ನಾಳೆ ಅದೃಷ್ಟ ಪರೀಕ್ಷೆ

ಭಾರತದ ಸಾಯಿ ಪ್ರಣೀತ್‌ ಅವರು ಇಂದಿನಿಂದ ಇಲ್ಲಿ ಆರಂಭವಾಗಿರುವ ಬಿಡಬ್ಲ್ಯುಎಫ್‌ ವಿಶ್ವ ಸೂಪರ್‌ 750 ಟೂರ್ನಿ ಜಪಾನ್‌ ಓಪನ್‌ ಮೊದಲ ಸುತ್ತಿನಲ್ಲಿ ಗೆದ್ದು ಶುಭಾರಂಭ ಮಾಡಿದ್ದಾರೆ.

ಟೋಕಿಯೋ: ಭಾರತದ ಸಾಯಿ ಪ್ರಣೀತ್‌ ಅವರು ಇಂದಿನಿಂದ ಇಲ್ಲಿ ಆರಂಭವಾಗಿರುವ ಬಿಡಬ್ಲ್ಯುಎಫ್‌ ವಿಶ್ವ ಸೂಪರ್‌ 750 ಟೂರ್ನಿ ಜಪಾನ್‌ ಓಪನ್‌ ಮೊದಲ ಸುತ್ತಿನಲ್ಲಿ ಗೆದ್ದು ಶುಭಾರಂಭ ಮಾಡಿದ್ದಾರೆ.
42 ನಿಮಿಷಗಳ ಕಾಲ ನಡೆದ ಪುರುಷರ ಸಿಂಗಲ್ಸ್‌ ಹಣಾಹಣಿಯ ಮೊದಲ ಸುತ್ತಿನ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಭಾರತದ ಸಾಯಿ ಪ್ರಣೀತ್‌ ಅವರು 21-17, 21-13 ನೇರ ಸೆಟ್‌ಗಳಿಂದ ಜಪಾನ್‌ನ ಕೆಂಟಾ ನಿಶಿಮೋಟಾ ಅವರನ್ನು ಮಣಿಸಿ ಎರಡನೇ ಸುತ್ತಿಗೆ ಪ್ರವೇಶ ಮಾಡಿದ್ದಾರೆ. ಸೋಲಿನಿಂದಾಗಿ ವಿಶ್ವದ 10ನೇ ಶ್ರೇಯಾಂಕದ ಜಪಾನ್‌ ಆಟಗಾರ ಸೋಲಿನಿಂದ ತೀವ್ರ ಆಘಾತಕ್ಕೆ ಒಳಗಾದರು.
ಮೊದಲ ಸೆಟ್‌ನಿಂದಲೇ ಪ್ರಾಬಲ್ಯ ಮೆರೆದ 23ನೇ ಶ್ರೇಯಾಂಕಿತ ಸಾಯಿ ಪ್ರಣೀತ್‌ ಅಂದುಕೊಂಡಂತೆ ಮುನ್ನಡೆ ಗಳಿಸುತ್ತ ಸಾಗಿದರು. ಭಾರತೀಯ ಆಟಗಾರ ಆಕ್ರಮಣಕಾರಿ ಆಟದ ಎದುರು ಸ್ಥಳೀಯ ಆಟಗಾರ ಮಂಕಾದರು. ಇದರ ಫಲವಾಗಿ ಸಾಯಿ ಪ್ರಣೀತ್‌ 21-17 ಅಂತರದಲ್ಲಿ ಮೊದಲ ಗೇಮ್‌ ಅನ್ನು ತನ್ನದಾಗಿಸಿಕೊಂಡರು. 
ಇನ್ನು ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ, ಎಸ್. ರಾಂಕಿರೆಡ್ಡಿಮತ್ತು ಅಶ್ವಿನಿ ಪೊನ್ನಪ್ಪ ಮೊದಲ ಪಂದ್ಯ ಗೆದ್ದು ಶುಭಾರಂಬ ಮಾಡಿದ್ದಾರೆ. ಜರ್ಮನಿಯ ಮಾರ್ವಿನ್ ಸೀಡೆಲ್ ಮತ್ತು ಲಿಂಡಾ ಎಫ್ಲರ್ ಅವ ವಿರುದ್ಧ 1-14 31-19 ನೇರ ಸೆಟ್ ಗಳಿಂದ ಅವರು ಜಯ ಸಾಧಿಸಿದ್ದಾರೆ. ಆದಾಗ್ಯೂ, ಪುರುಷರ ಡಬಲ್ಸ್ ಜೋಡಿ ಮನು ಅತ್ರಿ ಮತ್ತು ಸುಮೀತ್ ಬಿ ರೆಡ್ಡಿ ಮೊದಲ ಸುತ್ತಿನಲ್ಲೇ ಪರಾಜಿತವಾಗಿ ಕ್ರೀಡಾಕೂಟದಿಂದ ಹೊರನಡೆದಿದೆ.
ಬುಧವಾರ ಭಾರತದ ಸ್ತಾರ್ ಆಟಗಾರರಾದ ಪಿವಿ ಸಿಂಧೂ ಹಾಗೂ ಕಿಡಂಬಿ ಶ್ರೀಕಾಂತ್ ಕ್ರಮವಾಗಿ ಮಹಿಳಾ ಮತ್ತು ಪುರುಷರ ಸಿಂಗಲ್ಸ್‌ನಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ.ಐದನೇ ಶ್ರೇಯಾಂಕದಲ್ಲಿರುವ ಸಿಂಧು ಚೀನಾದ ಯು ಹಾನ್ ಅವರನ್ನು ಎದುರಿಸಲಿದ್ದರೆ, ಶ್ರೀಕಾಂತ್ ತಮ್ಮದೇ ದೇಶದ ಎಚ್ ಎಸ್ ಪ್ರಣೋಯ್ ಅವರೊಡನೆ ಹೋರಾಡಲಿದ್ದಾರೆ. 
ಈ ನಡುವೆ ಗಾಯದ ಸಮಸ್ಯೆಯ ಕಾರಣ ಇನ್ನೋರ್ವ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಕ್ರೀಡಾಕೂಟದಿಂದ ದೂರ ಉಳಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT