ಕೆ.ಶ್ರೀಕಾಂತ್, ಸಮೀರ್ ವರ್ಮಾ 
ಕ್ರೀಡೆ

ಜಪಾನ್ ಓಪನ್: ಶ್ರೀಕಾಂತ್, ಸಮೀರ್ ವರ್ಮಾ ಔಟ್, ಸಿಂಧೂ, ಪ್ರಣಯ್ ಗೆ ಮುನ್ನಡೆ

ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್‌ ಆಟಗಾರ ಕಿಡಂಬಿ ಶ್ರೀಕಾಂತ್‌ ಅವರ 2019ರ ವೈಫಲ್ಯ ಮುಂದುವರಿದಿದ್ದು, ಇಲ್ಲಿ ನಡೆಯುತ್ತಿರುವ ಜಪಾನ್ ಓಪನ್‌ ಮೊದಲ ಸುತ್ತಿನಲ್ಲಿಯೇ....

ಟೋಕಿಯೋ: ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್‌ ಆಟಗಾರ ಕಿಡಂಬಿ ಶ್ರೀಕಾಂತ್‌ ಅವರ 2019ರ ವೈಫಲ್ಯ ಮುಂದುವರಿದಿದ್ದು, ಇಲ್ಲಿ ನಡೆಯುತ್ತಿರುವ ಜಪಾನ್ ಓಪನ್‌ ಮೊದಲ ಸುತ್ತಿನಲ್ಲಿಯೇ ಭಾರತದ ಮತ್ತೊಬ್ಬ ಆಟಗಾರ ಎಚ್‌.ಎಸ್‌ ಪ್ರಣಯ್‌ ವಿರುದ್ಧ ಸೋಲು ಅನುಭವಿಸಿದರು.
55 ನಿಮಿಷಗಳ ಕಾಲ ನಡೆದ ಪುರುಷರ ಸಿಂಗಲ್ಸ್‌ ಪಂದ್ಯದಲ್ಲಿ ಎಚ್‌.ಎಸ್‌ ಪ್ರಣಯ್‌ ಅವರು ಮೊದಲ ಸೆಟ್‌ನಲ್ಲಿ ಸೋಲು ಅನುಭವಿಸಿದರೂ ಬಳಿಕ ಪುಟಿದೆದ್ದು 13-21, 21-11, 22-20 ಅಂತರದಲ್ಲಿ ಕಿಡಂಬಿ ಶ್ರೀಕಾಂತ್‌ ವಿರುದ್ಧ ಗೆದ್ದು ಎರಡನೇ ಸುತ್ತಿಗೆ ಪ್ರವೇಶ ಮಾಡಿದರು.
ಎಂಟನೇ ಶ್ರೇಯಾಂಕದ ಶ್ರೀಕಾಂತ್‌ ಅವರು ಅಂದುಕೊಂಡಂತೆ ಮೊದಲನೇ ಸೆಟ್‌ನಲ್ಲಿ 21-13 ಅಂತರದಲ್ಲಿ ಎಚ್‌.ಎಸ್‌ ಪ್ರಣಯ್‌ ಅವರನ್ನು ಮಣಿಸಿದರು. ನಂತರ, ಎರಡನೇ ಸೆಟ್‌ ಹಾಗೂ ಮೂರನೇ ಸೆಟ್‌ನಲ್ಲಿ ಎಚ್ಚೆತ್ತುಕೊಂಡ ಪ್ರಣಯ್‌ 21-11, 22-20 ಅಂತರದಲ್ಲಿ ಪಂದ್ಯವನ್ನು ತನ್ನದಾಗಿಸಿಕೊಂಡರು. 
ಮತ್ತೊಂದು ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಡೆನ್ಮಾರ್ಕ್‌ನ ಆಂಡರ್ಸ್ ಆಂಟನ್‌ಸೆನ್‌ ಹಾಗೂ ಭಾರತದ ಸಮೀರ್ ವರ್ಮಾ ಎದುರಾಗಿದ್ದು ಇಲ್ಲಿಯೂ ಭಾರತೀಯ ಆಟಗಾರರು ನಿರಾಶೆ ಮೂಡಿಸಿದ್ದಾರೆ.  46 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ  ಸಮೀರ್ ವರ್ಮಾ  17-21 12-21 ಸೆಟ್ ಗಳಿಂದ ಸೋಲುಂಡರು. 
ಮಿಶ್ರ ಡಬಲ್ಸ್ ನಲ್ಲಿ ಸಹ  ಪ್ರಣವ್ ಜೆರ್ರಿ ಚೋಪ್ರಾ ಮತ್ತು ಸಿಕ್ಕಿ ರೆಡ್ಡಿ ಜೋಡಿ ಚೀನಾದ ಜೋಡಿ ಎದುರಿಗೆ  11-21, 14-21 ಸೆಟ್ ಗಳಿಂದ ಸೋತಿದೆ.
ಸಿಂಧೂ ಶುಭಾರಂಭ

ಬುಧವಾರ ನಡೆದ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ಸಿಂಧು 21-9, 21-17 ರಿಂದ ಚೀನಾದ ಹನ್ ಯು ವಿರುದ್ಧ 37 ನಿಮಿಷಗಳ ಕಾದಾಟದಲ್ಲಿ ಜಯ ಸಾಧಿಸಿ, ಎರಡನೇ ಸುತ್ತು ಪ್ರವೇಶಿಸಿದರು. ಈ ಮೂಲಕ ಹನ್ ಯು ವಿರುದ್ಧ ಸಿಂಧು ತಮ್ಮ ಅಜೇಯ ಓಟವನ್ನು ಮುಂದುವರೆಸಿದ್ದಾರೆ.

ಮೊದಲ ಗೇಮ್ ನಲ್ಲಿ ಆರಂಭದಿಂದಲೂ ಅಂಕದ ಬೇಟೆಯಲ್ಲಿ ಮುನ್ನಡೆ ಸಾಧಿಸಿದ್ದ ಸಿಂಧು ಅವರು, ಹಿಂದೆ ಬೀಳಲಿಲ್ಲ. ಭರ್ಜರಿ ಪ್ರದರ್ಶನ ನೀಡಿದ ಸಿಂಧು, ಅಂಕಗಳಿಸಿ ಮುಂದೆ ಸಾಗಿದರು. ಎರಡನೇ ಗೇಮ್ ನಲ್ಲಿ ಸಿಂಧು ಅವರಿಗೆ ಕೊಂಚ ಪ್ರತಿರೋಧ ಒಡ್ಡಿದ ಹನ್ ಯು ಅವರು, ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ, ತಾಳ್ಮೆ ಕಳೆದುಕೊಳ್ಳದೆ ಆಡಿದ ಸಿಂಧು ಅರ್ಹ ಗೆಲುವು ದಾಖಲಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT