ಗೆದ್ದ ಚಿನ್ನದ ಪದಕವನ್ನು ಅಭಿನಂದನ್ ಗೆ ಸಮರ್ಪಿಸಿದ ಭಜರಂಗ್ 
ಕ್ರೀಡೆ

ಗೆದ್ದ ಚಿನ್ನದ ಪದಕವನ್ನು ಅಭಿನಂದನ್ ಗೆ ಸಮರ್ಪಿಸಿದ ಭಜರಂಗ್

ಭಾರತದ ಪ್ರಸಿದ್ಧ ಕುಸ್ತಿ ಪಟು ಭಜರಂಗ್ ಪುನಿಯಾ ಬಲ್ಗೇರಿಯಾದಲ್ಲಿ ನಡೆಯುತ್ತಿರುವ ಬಲ್ಗೆರಿಯಾ ಕುಸ್ತಿ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

ನವದೆಹಲಿ: ಭಾರತದ ಪ್ರಸಿದ್ಧ ಕುಸ್ತಿ ಪಟು ಭಜರಂಗ್ ಪುನಿಯಾ ಬಲ್ಗೇರಿಯಾದಲ್ಲಿ ನಡೆಯುತ್ತಿರುವ ಬಲ್ಗೆರಿಯಾ ಕುಸ್ತಿ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಅವರು ತಾವು ಜಯಿಸಿದ ಈ ಚಿನ್ನದ ಪದಕವನ್ನು ಭಾರತೀಯರೆಲ್ಲರ ಮನಗೆದ್ದ ವೀರಯೋಧ ವಿಂಗ್ ಕಮಾಂಡರ್ ಅಭಿನಂದನ್ ಅವರಿಗೆ ಸಮರ್ಪಿಸಿದ್ದಾರೆ.
ಬಲ್ಗೇರಿಯಾ ಕುಸ್ತಿ ಪಂದ್ಯಾವಳಿಯ 65 ಕೆಜಿ ವಿಭಾಗದಲ್ಲಿ ಭಾರತದ ಭಜರಂಗ್ ಅಮೆರಿಕಾದ ಜೋರ್ಡನ್ ಒಲಿವೇರ್ ಅವರನ್ನು ಮಣಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
"ವಿಂಗ್ ಕಮಾಂಡರ್ ಅಭಿನಂದನ್ ಪಾಕ್ ನಿಂದ ಸುರಕ್ಷಿತ ಆಗಿ ಭಾರತಕ್ಕೆ ಮರಳಿದ್ದಾರೆ. ಭಾರತದ ಕೆಚ್ಚೆದೆಯ ಈ ವೀರಯೋಧನ ಸ್ಪೂರ್ತಿಯಿಂದಲೇ ನಾನಿಂದು ಚಿನ್ನದ ಪದಕ ಗೆದ್ದಿದೇನೆ. ಹೀಗಾಗಿ ನಾನಿದನ್ನು ಅವರಿಗೆ ಸರ್ಪಿಸಲು ಬಯಸಿದ್ದೇನೆ " ಎಂದು ಅವರು ಹೇಳಿದ್ದಾರೆ.
ಅಲ್ಲದೆ "ಅಭಿನಂದನ್ ಅವರ ದೇಶಸೇವೆಗೆ ಯಾವ ಎಣೆಯಿಲ್ಲ. ಅವರನ್ನು ನಾನೂ ಸಹ ಒಮ್ಮೆ ಭೇಟಿಯಾಗಬೇಕು, ಕೈ ಕುಲಕಬೇಕು ಎನ್ನುವುದು ನನ್ನ ಬಯಕೆ" ಎಂದೆನ್ನುವ ಮೂಲಕ ಭಜರಂಗ್ ತಮ್ಮ ಮನದಾಳದ ಮಾತನ್ನು ಹೊರಹಾಕಿದ್ದಾರೆ.
ಭಜರಂಗ್ ಪುನಿಯಾ ಒಲಂಪಿಕ್, ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ದೇಶದ ಹೆಮ್ಮೆಯ ಕ್ರೀಡಾಪಟು ಎನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT