ಸಂಗ್ರಹ ಚಿತ್ರ 
ಕ್ರೀಡೆ

ರಸ್ತೆ ಅಪಘಾತದಲ್ಲಿ ಈಜು ಪಟು ಸಾವು

ಭಾರತದ ಖ್ಯಾತ ಈಜುಪಟು ತಮಿಳುನಾಡು ಮೂಲದ ಎಂ.ಬಿ.ಬಾಲಕೃಷ್ಣನ್ ಅವರು ಮಂಗಳವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈ: ಭಾರತದ ಖ್ಯಾತ ಈಜುಪಟು ತಮಿಳುನಾಡು ಮೂಲದ ಎಂ.ಬಿ.ಬಾಲಕೃಷ್ಣನ್ ಅವರು ಮಂಗಳವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಢಾಕಾ ಏಷ್ಯನ್ ಕ್ರೀಡಾಕೂಟದಲ್ಲಿ ಬಂಗಾರ ಸೇರಿದಂತೆ, ರಾಷ್ಟ್ರೀಯ ಚಾಂಪಿಯನ್ ಶಿಪ್ ಗಳಲ್ಲಿ ಸಾಧನೆ ಮಾಡಿರುವ ಅನುಭವಿ ಈಜು ಪಟು ಎಂ.ಬಿ.ಬಾಲಕೃಷ್ಣನ್ ಅವರು ಮಂಗಳವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 29 ವರ್ಷದ ಬ್ಯಾಕ್ ಸ್ಟ್ರೋಕ್ ನುರಿತ ಈಜು ಪಟು, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅರುಂಬಕ್ಕಂ ನಲ್ಲಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.  
ಬುಲೆಟ್ ಚಲಾಯಿಸುತ್ತಿದ್ದ ಬಾಲಕೃಷ್ಣನ್ ಅವರು ಅರುಂಬಕ್ಕಂನಲ್ಲಿನ ಜಯಲಕ್ಷ್ಮೀ ಎಂಬಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಬೈಕ್ ನಲ್ಲಿ ಬರುತ್ತಿದ್ದ ಬಾಲಕೃಷ್ಣನ್ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸದಲ್ಲಿ ದ್ವಿಚಕ್ರ ವಾಹನದ ನಿಯಂತ್ರಣ ತಪ್ಪಿ ನೇರವಾಗಿ ಲಾರಿ ಚಕ್ರಕ್ಕೆ ಸಿಕ್ಕಿ ಮೃತ ಪಟ್ಟಿದ್ದಾರೆ. ಮೃತ ದೇಹವನ್ನು ಕಿಲ್ಪಾಕ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಬಾಲಕೃಷ್ಣನ್ ಅವರು ಗಿಂಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಅಮೆರಿಕದಲ್ಲಿ ಎಂ.ಎಸ್ ಪೂರ್ಣಗೊಳಿಸಿದ್ದು, ಅಲ್ಲಿಯೇ ಕೆಲಸ ಮಾಡುತ್ತಿದ್ದರು. ರಜಾ ಸಮಯದಲ್ಲಿ ಸ್ವಗ್ರಾಮಕ್ಕೆ ಬಂದ ಅವರು ಪಾಲಕರೊಂದಿಗೆ ಸಮಯ ಕಳೆಯುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT