ದ್ಯುತಿ ಚಾಂದ್ 
ಕ್ರೀಡೆ

ಹಣಕ್ಕಾಗಿ ಅಕ್ಕನಿಂದ ಬ್ಲ್ಯಾಕ್‌ಮೇಲ್, 'ಸಲಿಂಗಿ' ಎಂದು ಹೇಳಿಕೊಳ್ಳಲು ಅದೇ ಕಾರಣ: ದ್ಯುತಿ ಚಾಂದ್‌

: 'ನಾನು ಸಲಿಂಗಿ' ಎಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದ ಭಾರತದ ವೇಗದ ಓಟಗಾರ್ತಿ ದ್ಯುತಿ ಚಾಂದ್‌, ನಾನು ಈ ರೀತಿ ಹೇಳಲು ಕಾರಣ ಏನೆಂಬುದನ್ನು ..

ಭುವನೇಶ್ವರ್: 'ನಾನು ಸಲಿಂಗಿ' ಎಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದ ಭಾರತದ ವೇಗದ ಓಟಗಾರ್ತಿ ದ್ಯುತಿ ಚಾಂದ್‌, ನಾನು ಈ ರೀತಿ ಹೇಳಲು ಕಾರಣ ಏನೆಂಬುದನ್ನು ಬಹಿರಂಗಪಡಿಸಿದ್ದಾರೆ. 
ತಾನು ಸಲಿಂಗಿಯೆಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದಕ್ಕೆ ತನ್ನ ಸಹೋದರಿಯ ಮಾನಸಿಕ ಕಿರುಕುಳ ಕಾರಣ. ತನ್ನ ಸಹೋದರಿ ಸರಸ್ವತಿ ತನ್ನಲ್ಲಿ 25 ಲಕ್ಷ ರೂ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಳು ಎಂದು ದ್ಯುತಿ ಚಾಂದ್‌ ದೂರಿದ್ದಾರೆ.
'ಕಳೆದ ಮೂರು ವರ್ಷಗಳಿಂದ ನಾನು ನಮ್ಮ ಗ್ರಾಮದ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದೇನೆ. ಈ ವಿಚಾರ ನನ್ನ ಅಕ್ಕನಿಗೆ ಗೊತ್ತಿತ್ತು. ಹಣ ಕೊಡು ಇಲ್ಲ, ಈ ವಿಚಾರವನ್ನು ಬಹಿರಂಗಪಡಿಸುತ್ತೇನೆ ಎಂದು ಮಾನಸಿಕ ಕಿರುಕುಳ ನೀಡುತ್ತಿದ್ದಳು. ಹೀಗಾಗಿ ನಾನೇ ಈ ಸಂಗತಿಯನ್ನು ಹೇಳಿಕೊಳ್ಳಬೇಕಾಯಿತು" ಎಂದು ದ್ಯುತಿ ಚಾಂದ್‌ ಸ್ಪಷ್ಟನೆ ನೀಡಿದ್ದಾರೆ. 
ದ್ಯುತಿ ಚಾಂದ್‌ ದೂರಿರುವ ಸಹೋದರಿ ಸರಸ್ವತಿ ಚಾಂದ್ ಕೂಡ ಅಥ್ಲೀಟ್. ಏಷ್ಯನ್ ಕ್ರೀಡಾಕೂಟದಲ್ಲಿ ಸರಸ್ವತಿ ಕೂಡ ಪದಕ ಜಯಿಸಿದ್ದರು. ಎರಡು ದಿನಗಳ ಹಿಂದೆ ದ್ಯುತಿ ಚಾಂದ್‌ ತಾಯಿ ಅಖುಜಿ ಅವರು "ತನ್ನ ಮಗಳು ಸಲಿಂಗ ಕಾಮಿಯಲ್ಲ. ಇದನ್ನು ನಾನು ನಂಬುವುದಿಲ್ಲ ಎಂದು ಹೇಳಿದ್ದರು. ಸದ್ಯ 2020ರ ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿರುವ ದ್ಯುತಿ ಚಾಂದ್‌ ಅಭ್ಯಾಸದಲ್ಲಿ ತಲ್ಲೀನರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT