ಕಿಡಂಬಿ ಶ್ರೀಕಾಂತ್ 
ಕ್ರೀಡೆ

ಹಾಂಕಾಂಗ್ ಓಪನ್: ಸೆಮಿಫೈನಲ್‌ಗೆ ಕಿಡಂಬಿ ಶ್ರೀಕಾಂತ್

ಗೆಲುವಿನ ಲಯ ಮುಂದುವರಿಸಿರುವ ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರು ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯ ಪುರುಷರ ಸಿಂಗಲ್ಸ್‌ ನಲ್ಲಿ ಸೆಮಿಫೈನಲ್ಸ್‌ ತಲುಪಿದ್ದಾರೆ. 

ಹಾಂಕಾಂಗ್: ಗೆಲುವಿನ ಲಯ ಮುಂದುವರಿಸಿರುವ ಭಾರತದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರು ಇಲ್ಲಿ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯ ಪುರುಷರ ಸಿಂಗಲ್ಸ್‌ ನಲ್ಲಿ ಸೆಮಿಫೈನಲ್ಸ್‌ ತಲುಪಿದ್ದಾರೆ.

ಶುಕ್ರವಾರ ನಡೆದ ಪುರುಷರ ಸಿಂಗಲ್ಸ್‌ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಕಿಡಂಬಿ ಶ್ರೀಕಾಂತ್ ಮೊದಲನೇ ಸೆಟ್‌ನಲ್ಲಿ 21-13 ಅಂತರದಲ್ಲಿ ಚೀನಾದ ಚೆನ್ ಲಾಂಗ್ ವಿರುದ್ಧ ಜಯ ಸಾಧಿಸಿದ್ದರು. ಈ ವೇಳೆ ಚೀನಾ ಆಟಗಾರ ಗಾಯದಿಂದಾಗಿ ಪಂದ್ಯವನ್ನು ವಿಥ್‌ಡ್ರಾ ಮಾಡಿಕೊಂಡರು ಇದರ ಲಾಭ ಪಡೆದ ಕಿಡಂಬಿ ಅಂತಿಮ ನಾಲ್ಕರ ಘಟ್ಟಕ್ಕೆೆ ಲಗ್ಗೆ  ಇಟ್ಟಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಹಾಂಕಾಂಗ್ ಓಪನ್ ಟೂರ್ನಿಯಲ್ಲಿ ಕಿಡಂಬಿ ಶ್ರೀಕಾಂತ್ ಅವರಿಗೆ ಅದೃಷ್ಟ ಚೆನ್ನಾಗಿದೆ. ಟೂರ್ನಿಯ ಮೊದಲನೇ ಸುತ್ತಿನಲ್ಲೇ ವಿಶ್ವದ ಅಗ್ರ ಶ್ರೇಯಾಂಕಿತ ಕೆಂಟೊ ಮೊಮೊಟಾ ಅವರ ವಿರುದ್ಧ ಸೆಣಸಬೇಕಾಗಿತ್ತು. ಆದರೆ, ಅವರು ಅನಿರೀಕ್ಷಿತವಾಗಿ ಹಾಂಕಾಂಗ್ ವಿಥ್‌ಡ್ರಾ ಮಾಡಿಕೊಂಡಿದ್ದರು. ಇದರ ಲಾಭ ಪಡೆದ ಶ್ರೀಕಾಂತ್ ಎರಡನೇ ಸುತ್ತಿಗೆ ಪ್ರವೇಶ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT