ಭಾರತದ ಆಟಗಾರರು 
ಕ್ರೀಡೆ

ಫುಟ್ಬಾಲ್ : ಓಮನ್ ವಿರುದ್ಧ ಭಾರತಕ್ಕೆ 1-0 ಅಂತರದಲ್ಲಿ ಸೋಲು

ಕಠಿಣ ಹೋರಾಟದ ನಡುವೆಯೂ ಭಾರತ ಫುಟ್ಬಾಲ್ ತಂಡ ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯದಲ್ಲಿ ಬಲಿಷ್ಠ  ಓಮನ್ ವಿರುದ್ಧ ಸೋಲು ಅನುಭವಿಸಿತು. ಇದರೊಂದಿಗೆ ವಿಶ್ವಕಪ್ ಅರ್ಹತೆ ಪಡೆಯುವ ಸುನೀಲ್ ಚೆಟ್ರಿ ಪಡೆಯ ಹಾದಿಗೆ ಕೊಡಲಿಪೆಟ್ಟು ಬಿದ್ದಂತಾಗಿದೆ.

ಮಸ್ಕತ್ :  ಕಠಿಣ ಹೋರಾಟದ ನಡುವೆಯೂ ಭಾರತ ಫುಟ್ಬಾಲ್ ತಂಡ ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯದಲ್ಲಿ ಬಲಿಷ್ಠ  ಓಮನ್ ವಿರುದ್ಧ ಸೋಲು ಅನುಭವಿಸಿತು. ಇದರೊಂದಿಗೆ ವಿಶ್ವಕಪ್ ಅರ್ಹತೆ ಪಡೆಯುವ ಸುನೀಲ್ ಚೆಟ್ರಿ ಪಡೆಯ ಹಾದಿಗೆ ಕೊಡಲಿಪೆಟ್ಟು ಬಿದ್ದಂತಾಗಿದೆ.

ಇಲ್ಲಿನ ಸುಲ್ತಾನ್ ಕ್ರೀಡಾ ಸಂಕೀರ್ಣದಲ್ಲಿ ನಡೆದ ಪಂದ್ಯದಲ್ಲಿ ಅಲ್ ಘಸ್ಸಾನಿ (33ನೇ ನಿ.) ಗಳಿಸಿದ ಏಕೈಕ ಗೋಲಿನ ಸಹಾಯದಿಂದ ಓಮನ್ ತಂಡ 1-0 ಅಂತರದಲ್ಲಿ ಭಾರತದ ವಿರುದ್ಧ ಗೆಲುವಿನ ನಗೆ ಬೀರಿತು. ಗೆಲುವಿನೊಂದಿಗೆ ಓಮನ್ ತನ್ನ ಖಾತೆಗೆ ಮೂರು ಅಂಕಗಳನ್ನು ಪಡೆಯಿತು. 

ಒಟ್ಟಾರೆ 12 ಅಂಕಗಳೊಂದಿಗೆ ಓಮನ್ ‘ಇ ’ ಗುಂಪಿನ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಗಟ್ಟಿ ಮಾಡಿಕೊಂಡಿತು. ಅಗ್ರ ಸ್ಥಾನದಲ್ಲಿ 13 ಅಂಕಗಳೊಂದಿಗೆ ಕತಾರ್ ಇದೆ. ಕೇವಲ ಮೂರು ಅಂಕಗಳೊಂದಿಗೆ ಭಾರತ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಪಂದ್ಯದ ಆರಂಭದಿಂದಲೂ ಉಭಯ ತಂಡಗಳ ನಡುವೆ ಭಾರಿ ಕಾದಾಟ ನಡೆದಿತ್ತು. ಇದರ ನಡುವೆ 24ನೇ ನಿಮಿಷದಲ್ಲಿ ಭಾರತದ ಆದಿಲ್ ಖಾನ್ ತಪ್ಪು ಎಸಗಿದ್ದರಿಂದ ಮ್ಯಾಚ್ ರೆಫರಿಯಿಂದ ಹಳದಿ ಕಾರ್ಡ್ ಪಡೆದುಕೊಂಡರು. ನಂತರ, ಚೆಂಡಿನ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ಓಮನ್ ಮೊದಲ ಅವಧಿಯಲ್ಲಿ ಗೋಲಿನ ಖಾತೆ ತೆರೆಯುವಲ್ಲಿ ಯಶಸ್ವಿಯಾಯಿತು.

 33ನೇ ನಿಮಿಷದಲ್ಲಿ ಭಾರತ ರಕ್ಷಣಾ ವಿಭಾಗದಲ್ಲಿ  ಮಾಡಿದ ತಪ್ಪುಗಳನ್ನು ಸದುಪಯೋಗಪಡಿಸಿಕೊಂಡ ಎದುರಾಳಿ ತಂಡದ ಅಲ್ ಘಸ್ಸಾನಿ ಅವರು ಓಮನ್‌ಗೆ ಮೊದಲನೇ ಗೋಲು ತಂದುಕೊಟ್ಟರು. ಇದರೊಂದಿಗೆ ಮೊದಲನೇ ಅವಧಿಯಲ್ಲಿ ಓಮನ್ 1-0 ಮುನ್ನಡೆಯೊಂದಿಗೆ ಗೆಲುವು ಸಾಧಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT