ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ: ಕತಾರ್ ವಿರುದ್ಧ ಭಾರತಕ್ಕೆಗೋಲುರಹಿತ ಡ್ರಾ 
ಕ್ರೀಡೆ

ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ: ಕತಾರ್ ವಿರುದ್ಧ ಭಾರತಕ್ಕೆಗೋಲುರಹಿತ ಡ್ರಾ

ಗುರುಪ್ರೀತ್‌ ಸಿಂಗ್ ಸಂಧು ಅವರ ದಿಟ್ಟ ರಕ್ಷಣಾತ್ಮಕ ಗೋಲ್‌ ಕೀಪರ್‌ ಕೌಶಲ್ಯದಿಂದ ಏಷ್ಯನ್‌ ಚಾಂಪಿಯನ್ಸ್‌ ಕತಾರ್‌ ವಿರುದ್ಧ ಭಾರತ ತಂಡ ಫಿಫಾ ವಿಶ್ವಕಪ್‌ ಅರ್ಹತಾ ಸುತ್ತಿನ ಎರಡನೇ ಪಂದ್ಯದಲ್ಲಿ ಡ್ರಾ ಸಾಧಿಸಿತು. ಆ ಮೂಲಕ 'ಇ' ಗುಂಪಿನ ಅಂಕಪಟ್ಟಿಯಲ್ಲಿ ಭಾರತ ಮೊದಲನೇ ಅಂಕ ಪಡೆಯಿತು.

ದೋಹಾ: ಗುರುಪ್ರೀತ್‌ ಸಿಂಗ್ ಸಂಧು ಅವರ ದಿಟ್ಟ ರಕ್ಷಣಾತ್ಮಕ ಗೋಲ್‌ ಕೀಪರ್‌ ಕೌಶಲ್ಯದಿಂದ ಏಷ್ಯನ್‌ ಚಾಂಪಿಯನ್ಸ್‌ ಕತಾರ್‌ ವಿರುದ್ಧ ಭಾರತ ತಂಡ ಫಿಫಾ ವಿಶ್ವಕಪ್‌ ಅರ್ಹತಾ ಸುತ್ತಿನ ಎರಡನೇ ಪಂದ್ಯದಲ್ಲಿ ಡ್ರಾ ಸಾಧಿಸಿತು. ಆ ಮೂಲಕ 'ಇ' ಗುಂಪಿನ ಅಂಕಪಟ್ಟಿಯಲ್ಲಿ ಭಾರತ ಮೊದಲನೇ ಅಂಕ ಪಡೆಯಿತು.

ಮಂಗಳವಾರ ತಡರಾತ್ರಿ ನಡೆದ ಅರ್ಹತಾ ಸುತ್ತಿನ ಎರಡನೇ ಪಂದ್ಯದಲ್ಲಿ ಸಮಬಲದ ಹೋರಾಟ ನಡೆಸಿದ ಭಾರತ ಹಾಗೂ ಕತಾರ್‌ ತಂಡಗಳು 0-0 ಅಂತರದಲ್ಲಿ ಡ್ರಾಗೆ ತಪ್ತಿಪಟ್ಟುಕೊಂಡವು.

ಅನಾರೋಗ್ಯದಿಂದ ಬಳಲುತ್ತಿದ್ದ ನಿಯಮಿತ ನಾಯಕ ಸುನೀಲ್‌ ಚೆಟ್ರಿ ಅನುಪಸ್ಥತಿಯಲ್ಲಿ ಗೋಲ್‌ ಕೀಪರ್‌ ಗುರುಪ್ರೀತ್‌ ಸಿಂಗ್‌ ಸಂಧು ತಂಡವನ್ನು ಮುನ್ನಡೆಸಿದರು. 103ನೇ ಶ್ರೇಯಾಂಕದ ಭಾರತ 62ನೇ ಸ್ಥಾನ ಹೊಂದಿರುವ ಕತಾರ್‌ಗಿಂತ 41 ಶ್ರೇಯಾಂಕ ಕೆಳಗೆ ಇದೆ. 

ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಬೆಂಗಳೂರು ಎಫ್ ಸಿ ನಾಯಕ ಗುರುಪ್ರೀತ್ ಪಂದ್ಯದ ಪ್ರಾರಂಭದಿಂದಲೂ ಎದುರಾಳಿಗಳಿಗೆ ಗೋಲು ಗಳಿಸಿಕೊಳ್ಲದಂತೆ ಪ್ರಬಲ ವಿರೋಧ ಒಡ್ಡಿ ಗಮನ ಸೆಳೆದಿದ್ದಾರೆ. 

ಪಂದ್ಯವು ಒಂದೂ ಗೋಲುಗಳಿಲ್ಲದೆ ಡ್ರಾದಲ್ಲಿ ಅಂತ್ಯವಾಗುತ್ತಲೇ ಟೀಂ ಇಂಡಿಯಾ ಮಾತ್ರ ತಾವು ಗೆಲುವು ಸಾಧಿಸಿದ ರೀತಿಯಲ್ಲಿ ಸಂಭ್ರಮಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!

ರಾಮ ಜನ್ಮಭೂಮಿ ಚಳವಳಿಯ ಪ್ರಮುಖ ನಾಯಕ ರಾಮವಿಲಾಸ್ ವೇದಾಂತಿ ವಿಧಿವಶ!

'ಎಲ್ಲಾ ಬಂದ್ ಆಗ್ಬೇಕು': ಜೈಲಿನಲ್ಲಿ ನಟ ದರ್ಶನ್- DGP ಮುಖಾಮುಖಿ, ಬೆವರಿಳಿಸಿದ ಅಲೋಕ್ ಕುಮಾರ್!

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!

BCCI ಶಾಕ್: ರೋ-ಕೋ ಮಾತ್ರವಲ್ಲ.. ಟೀಂ ಇಂಡಿಯಾದ ಎಲ್ಲ ಆಟಗಾರರಿಗೂ 'ವಿಜಯ್ ಹಜಾರೆ' ಕಡ್ಡಾಯ!

SCROLL FOR NEXT