ಸುಮಿತ್‌ ನಗಾಲ್‌ ಪ್ರಜ್ಞೇಶ್‌ ಗುಣೇಶ್ವರನ್‌ 
ಕ್ರೀಡೆ

ಎಟಿಪಿ ಚಾಲೆಂಜರ್‌: ಸುಮಿತ್‌ ನಗಾಲ್‌, ಪ್ರಜ್ಞೇಶ್‌ ಸೆಮಿಫೈನಲ್‌ಗೆ ಎಂಟ್ರಿ

ಗೆಲುವಿನ ಲಯ ಮುಂದುವರಿಸಿರುವ ಆರನೇ ಶ್ರೇಯಾಂಕ ಭಾರತದ ಆಟಗಾರ ಸುಮಿತ್‌ ನಗಾಲ್‌ ಬಂಜಾ ಲುಕಾ (ಬೋಸ್ನಿಯಾ ಮತ್ತು ಹರ್ಜೆಗೋವಿನಾ)ದಲ್ಲಿ ನಡೆಯುತ್ತಿರುವ ಎಟಿಪಿ ಚಾಲೆಂಜರ್‌ ಟೂರ್ನಿಯ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಸೆಮಿಫೈನಲ್‌ ತಲುಪಿದ್ದಾರೆ.

ನವದೆಹಲಿ: ಗೆಲುವಿನ ಲಯ ಮುಂದುವರಿಸಿರುವ ಆರನೇ ಶ್ರೇಯಾಂಕ ಭಾರತದ ಆಟಗಾರ ಸುಮಿತ್‌ ನಗಾಲ್‌ ಬಂಜಾ ಲುಕಾ (ಬೋಸ್ನಿಯಾ ಮತ್ತು ಹರ್ಜೆಗೋವಿನಾ)ದಲ್ಲಿ ನಡೆಯುತ್ತಿರುವ ಎಟಿಪಿ ಚಾಲೆಂಜರ್‌ ಟೂರ್ನಿಯ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಸೆಮಿಫೈನಲ್‌ ತಲುಪಿದ್ದಾರೆ.

ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಸುಮಿತ್‌ ನಗಾಲ್ 6-2, 7-5 ನೇರ ಸೆಟ್‌ಗಳ ಅಂತರದಲ್ಲಿ ಅರ್ಜೆಂಟೀನಾದ ಫೆಡೆರಿಕೊ ಕೊರಿಯಾ ವಿರುದ್ಧ ಗೆದ್ದು ಅಂತಿಮ ನಾಲ್ಕರ ಘಟ್ಟಕ್ಕೆ ಲಗ್ಗೆ ಇಟ್ಟರು.

ಇತ್ತೀಚಿಗಷ್ಟೆ ಯುಎಸ್‌ ಓಪನ್‌ ಚೊಚ್ಚಲ ಪ್ರವೇಶ ಮಾಡಿದ್ದ ಭಾರತದ ಆಟಗಾರ ರೋಜರ್‌ ಫೆಡರರ್‌ ವಿರುದ್ಧ ಮೊದಲ ಸೆಟ್‌ ಗೆದ್ದು ನಂತರ ಪಂದ್ಯದಲ್ಲಿ ಸೋಲು ಅನುಭವಿಸಿದ್ದರು. ಇದೇ ವಿಶ್ವಾಸದಲ್ಲಿರುವ ಹರಿಯಾಣದ ಸುಮಿತ್‌ ನಗಾಲ್‌ ಸೆಮಿಫೈನಲ್‌ ಕಾದಾಟದಲ್ಲಿ ಐದನೇ ಶ್ರೇಯಾಂಕದ ಸ್ಲೋವಾಕಿಯಾದ ಫಿಲಿಪ್‌ ಹೊರಾಸ್ಕಿ ವಿರುದ್ಧ ಸೆಣಸಲಿದ್ದಾರೆ.

ಇನ್ನೊಂದೆಡೆ ಭಾರತದ ಅಗ್ರ ಶ್ರೇಯಾಂಕಿತ ಆಟಗಾರ ಪ್ರಜ್ಞೇಶ್‌ ಗುಣೇಶ್ವರನ್‌ ಅವರು ಚೀನಾದ ಶಾಂಘೈನಲ್ಲಿ ನಡೆಯುತ್ತಿರುವ ಎಟಿಪಿ ಚಾಲೆಂಜರ್‌ ಟೆನಿಸ್‌ ಟೂರ್ನಿಯ ಪುರುಷರ ಸೆಮಿಫೈನಲ್‌ಗೆ ಪ್ರವೇಶ ಮಾಡಿದ್ದಾರೆ.

88 ನಿಮಿಷಗಳ ಕಾಲ ನಡೆದ ಕ್ವಾರ್ಟರ್‌ ಫೈನಲ್‌ ಹಣಾಹಣಿಯಲ್ಲಿ ಪಾರಮ್ಯೆ ಮೆರೆಡ ಪ್ರಜ್ಞೇಶ್‌ ಗುಣೇಶ್ವರನ್‌ 6-4, 6-4 ನೇರ ಸೆಟ್‌ಗಳ ಅಂತರದಲ್ಲಿ ಜಪಾನ್‌ನ ಹಿರೋಕಿ ಮೊರಿಯಾ ವಿರುದ್ಧ ಗೆದ್ದು ಅಂತಿಮ ನಾಲ್ಕರ ಘಟ್ಟಕ್ಕೆ ಲಗ್ಗೆ ಇಟ್ಟಿದ್ದಾರೆ.

ಚೆನ್ನೈ ಆಟಗಾರ ಎಂಟು ಏಸ್‌ ಅಂಕಗಳೊಂದಿಗೆ ಎರಡು ಬಾರಿ ಡಬಲ್ಸ್‌ ಫಾಲ್ಟ್‌ ಮಾಡಿದರೆ, ಎದುರಾಳಿ ಆಟಗಾರ ಮೊರಿಯಾ ಅವರು ಐದು ಏಸ್ ಅಂಕಗಳನ್ನು ಗೆದ್ದು ಒಂದೇ-ಒಂದು ಡಬಲ್ಸ್‌ ಫಾಲ್ಟ್‌ ಮಾಡಿದರು. ಸೆಮಿಫೈನಲ್‌ ಹಣಾಹಣಿಯಲ್ಲಿ ನಾಲ್ಕನೇ ಶ್ರೇಯಾಂಕದ ಜಪಾನ್‌ನ ಯಸುತಕಾ ಉಚಿಯಾಮಾ ವಿರುದ್ಧ ಪ್ರಜ್ಞೇಶ್‌ ಸೆಣಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT