ಸುಮಿತ್‌ ನಗಾಲ್‌ ಪ್ರಜ್ಞೇಶ್‌ ಗುಣೇಶ್ವರನ್‌ 
ಕ್ರೀಡೆ

ಎಟಿಪಿ ಚಾಲೆಂಜರ್‌: ಸುಮಿತ್‌ ನಗಾಲ್‌, ಪ್ರಜ್ಞೇಶ್‌ ಸೆಮಿಫೈನಲ್‌ಗೆ ಎಂಟ್ರಿ

ಗೆಲುವಿನ ಲಯ ಮುಂದುವರಿಸಿರುವ ಆರನೇ ಶ್ರೇಯಾಂಕ ಭಾರತದ ಆಟಗಾರ ಸುಮಿತ್‌ ನಗಾಲ್‌ ಬಂಜಾ ಲುಕಾ (ಬೋಸ್ನಿಯಾ ಮತ್ತು ಹರ್ಜೆಗೋವಿನಾ)ದಲ್ಲಿ ನಡೆಯುತ್ತಿರುವ ಎಟಿಪಿ ಚಾಲೆಂಜರ್‌ ಟೂರ್ನಿಯ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಸೆಮಿಫೈನಲ್‌ ತಲುಪಿದ್ದಾರೆ.

ನವದೆಹಲಿ: ಗೆಲುವಿನ ಲಯ ಮುಂದುವರಿಸಿರುವ ಆರನೇ ಶ್ರೇಯಾಂಕ ಭಾರತದ ಆಟಗಾರ ಸುಮಿತ್‌ ನಗಾಲ್‌ ಬಂಜಾ ಲುಕಾ (ಬೋಸ್ನಿಯಾ ಮತ್ತು ಹರ್ಜೆಗೋವಿನಾ)ದಲ್ಲಿ ನಡೆಯುತ್ತಿರುವ ಎಟಿಪಿ ಚಾಲೆಂಜರ್‌ ಟೂರ್ನಿಯ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಸೆಮಿಫೈನಲ್‌ ತಲುಪಿದ್ದಾರೆ.

ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಸುಮಿತ್‌ ನಗಾಲ್ 6-2, 7-5 ನೇರ ಸೆಟ್‌ಗಳ ಅಂತರದಲ್ಲಿ ಅರ್ಜೆಂಟೀನಾದ ಫೆಡೆರಿಕೊ ಕೊರಿಯಾ ವಿರುದ್ಧ ಗೆದ್ದು ಅಂತಿಮ ನಾಲ್ಕರ ಘಟ್ಟಕ್ಕೆ ಲಗ್ಗೆ ಇಟ್ಟರು.

ಇತ್ತೀಚಿಗಷ್ಟೆ ಯುಎಸ್‌ ಓಪನ್‌ ಚೊಚ್ಚಲ ಪ್ರವೇಶ ಮಾಡಿದ್ದ ಭಾರತದ ಆಟಗಾರ ರೋಜರ್‌ ಫೆಡರರ್‌ ವಿರುದ್ಧ ಮೊದಲ ಸೆಟ್‌ ಗೆದ್ದು ನಂತರ ಪಂದ್ಯದಲ್ಲಿ ಸೋಲು ಅನುಭವಿಸಿದ್ದರು. ಇದೇ ವಿಶ್ವಾಸದಲ್ಲಿರುವ ಹರಿಯಾಣದ ಸುಮಿತ್‌ ನಗಾಲ್‌ ಸೆಮಿಫೈನಲ್‌ ಕಾದಾಟದಲ್ಲಿ ಐದನೇ ಶ್ರೇಯಾಂಕದ ಸ್ಲೋವಾಕಿಯಾದ ಫಿಲಿಪ್‌ ಹೊರಾಸ್ಕಿ ವಿರುದ್ಧ ಸೆಣಸಲಿದ್ದಾರೆ.

ಇನ್ನೊಂದೆಡೆ ಭಾರತದ ಅಗ್ರ ಶ್ರೇಯಾಂಕಿತ ಆಟಗಾರ ಪ್ರಜ್ಞೇಶ್‌ ಗುಣೇಶ್ವರನ್‌ ಅವರು ಚೀನಾದ ಶಾಂಘೈನಲ್ಲಿ ನಡೆಯುತ್ತಿರುವ ಎಟಿಪಿ ಚಾಲೆಂಜರ್‌ ಟೆನಿಸ್‌ ಟೂರ್ನಿಯ ಪುರುಷರ ಸೆಮಿಫೈನಲ್‌ಗೆ ಪ್ರವೇಶ ಮಾಡಿದ್ದಾರೆ.

88 ನಿಮಿಷಗಳ ಕಾಲ ನಡೆದ ಕ್ವಾರ್ಟರ್‌ ಫೈನಲ್‌ ಹಣಾಹಣಿಯಲ್ಲಿ ಪಾರಮ್ಯೆ ಮೆರೆಡ ಪ್ರಜ್ಞೇಶ್‌ ಗುಣೇಶ್ವರನ್‌ 6-4, 6-4 ನೇರ ಸೆಟ್‌ಗಳ ಅಂತರದಲ್ಲಿ ಜಪಾನ್‌ನ ಹಿರೋಕಿ ಮೊರಿಯಾ ವಿರುದ್ಧ ಗೆದ್ದು ಅಂತಿಮ ನಾಲ್ಕರ ಘಟ್ಟಕ್ಕೆ ಲಗ್ಗೆ ಇಟ್ಟಿದ್ದಾರೆ.

ಚೆನ್ನೈ ಆಟಗಾರ ಎಂಟು ಏಸ್‌ ಅಂಕಗಳೊಂದಿಗೆ ಎರಡು ಬಾರಿ ಡಬಲ್ಸ್‌ ಫಾಲ್ಟ್‌ ಮಾಡಿದರೆ, ಎದುರಾಳಿ ಆಟಗಾರ ಮೊರಿಯಾ ಅವರು ಐದು ಏಸ್ ಅಂಕಗಳನ್ನು ಗೆದ್ದು ಒಂದೇ-ಒಂದು ಡಬಲ್ಸ್‌ ಫಾಲ್ಟ್‌ ಮಾಡಿದರು. ಸೆಮಿಫೈನಲ್‌ ಹಣಾಹಣಿಯಲ್ಲಿ ನಾಲ್ಕನೇ ಶ್ರೇಯಾಂಕದ ಜಪಾನ್‌ನ ಯಸುತಕಾ ಉಚಿಯಾಮಾ ವಿರುದ್ಧ ಪ್ರಜ್ಞೇಶ್‌ ಸೆಣಸಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT