ಕಶ್ಯಪ್-ಪಿವಿ ಸಿಂಧು 
ಕ್ರೀಡೆ

ಕೊರಿಯಾ ಓಪನ್: ಕಶ್ಯಪ್‌ಗೆ ಜಯ, ಪಿವಿ ಸಿಂಧು, ಪ್ರಣೀತ್, ಸೈನಾಗೆ ಸೋಲು

ಕೊರಿಯಾ ಓಪನ್ ಟೂರ್ನಿಯಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬಂಗಾರದ ಸಾಧನೆ ಮಾಡಿರುವ ಪಿ.ವಿ.ಸಿಂಧು, ಬಿ.ಸಾಯಿ ಪ್ರಣೀತ್ ಹಾಗೂ ಸೈನಾ ನೆಹ್ವಾಲ್ ನಿರಾಸೆ ಅನುಭವಿಸಿದ್ದು ಕಶ್ಯಪ್ ಭಾರತದ ಭರವಸೆಯಾಗಿ ಉಳಿದಿದ್ದಾರೆ.

ನವದೆಹಲಿ: ಕೊರಿಯಾ ಓಪನ್ ಟೂರ್ನಿಯಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬಂಗಾರದ ಸಾಧನೆ ಮಾಡಿರುವ ಪಿ.ವಿ.ಸಿಂಧು, ಬಿ.ಸಾಯಿ ಪ್ರಣೀತ್ ಹಾಗೂ ಸೈನಾ ನೆಹ್ವಾಲ್ ನಿರಾಸೆ ಅನುಭವಿಸಿದ್ದು ಕಶ್ಯಪ್ ಭಾರತದ ಭರವಸೆಯಾಗಿ ಉಳಿದಿದ್ದಾರೆ.

ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಸಾಧನೆ ಮಾಡಿರುವ ಸಿಂಧು 21-7, 22-24, 21-15 ರಿಂದ ಬಿವಾನ್ ಜೆಂಗ್ ವಿರುದ್ಧ  ಸೋಲು ಕಂಡರು.

ಮೊದಲ ಗೇಮ್ ನಲ್ಲಿ ಉತ್ತಮವಾಗಿ ಆಡಿದ ಸಿಂಧು ಗೆಲುವು ದಾಖಲಿಸಿದರು. ಎರಡನೇ ಗೇಮ್ ನಲ್ಲಿ ಉಭಯ ಆಟಗಾರ್ತಿ ಭರ್ಜರಿ ಪ್ರದರ್ಶನ ನೀಡಿ ಗಮನ ಸೆಳೆದರು. ಅಂತಿಮವಾಗಿ ಎರಡು ಗೇಮ್ ಪಾಯಿಂಟ್ ಕಲೆ ಹಾಕಿದ ಬಿವಾನ್ ಜೆಂಗ್ ಗೆಲವು ಸಾಧಿಸಿದರು. ಮೂರನೇ ಗೇಮ್ ನಲ್ಲೂ ಸಿಂಧು ಅಂಕ ಕಲೆ ಹಾಕುವಲ್ಲಿ ಹಿನ್ನಡೆ ಅನುಭವಿಸಿದರು.

ಕೊರಿಯಾ ಓಪನ್: ಸೈನಾಗೆ ನಿರಾಸೆ, ಕಶ್ಯಪ್‌ಗೆ ಜಯ!
ಲಂಡನ್ ಒಲಿಂಪಿಕ್ಸ್ ನಲ್ಲಿ ಕಂಚಿನ ಸಾಧನೆ ಮಾಡಿರುವ ಭಾರತದ ಸೈನಾ ನೆಹ್ವಾಲ್ ಕೊರಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೊದಲ ಸುತ್ತಿನಲ್ಲೇ ನಿರಾಸೆ ಅನುಭವಿಸಿದ್ದಾರೆ. 

ಮಾಜಿ ನಂಬರ್ ಒನ್ ಆಟಗಾರ್ತಿ ಸೈನಾ 21-19, 18-21, 8-1 ರಿಂದ ಕೊರಿಯಾದ ಕಿಮ್ ಗಾ ಯುವಾನ್ ವಿರುದ್ಧ ನಿರಾಸೆ ಅನುಭವಿಸಿದರು. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಸೈನಾ ಮೂರನೇ ಗೇಮ್ ನ್ನು ಅರ್ಧಕ್ಕೆ ಬಿಟ್ಟು ಹೊರ ನಡೆದರು. ಇದರಿಂದ ಕೊರಿಯಾ ಆಟಗಾರ್ತಿ ಕೈ ಮೇಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT