ಬೈಚುಂಗ್ ಭುಟಿಯಾ-ಸಂಗ್ರಹ ಚಿತ್ರ 
ಕ್ರೀಡೆ

ಲಾಕ್ ಡೌನ್ ವೇಳೆ ಮನೆ ಖಾಲಿ ಮಾಡಿಸಿದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ ಬೈಚುಂಗ್ ಭುಟಿಯಾ

ಲಾಕ್ ಡೌನ್ ಸಮಯದಲ್ಲಿ ಬಾಡಿಗೆದಾರನನ್ನು ಮನೆಯಿಂದ ಹೊರಹಾಕಿದ್ದಕ್ಕಾಗಿ ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೋಲ್ಕತ್ತಾ: ಲಾಕ್ ಡೌನ್ ಸಮಯದಲ್ಲಿ ಬಾಡಿಗೆದಾರನನ್ನು ಮನೆಯಿಂದ ಹೊರಹಾಕಿದ್ದಕ್ಕಾಗಿ ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಿಕ್ಕಿಂ ನಿವಾಸಿ ಅಥಿನಾ ಲಿಂಬುಗೆ ಲಘು ಜ್ವರ ಬಂತು, ನಂತರ ಆಕೆಯ ಮನೆಮಾಲೀಕರು ಮನೆಯನ್ನು ಖಾಲಿ ಮಾಡುವಂತೆ ಕೇಳಿಕೊಂಡರು. ಅಥಿನಾ ಯಾರ ಸಹಾಯವಿಲ್ಲದೆ ಮೂರರಿಂದ ನಾಲ್ಕು ಗಂಟೆಗಳ ಕಾಲ ಅಲೆದಾಡಿದಳು. ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ, ಭುಟಿಯಾ  ತನ್ನ ಸ್ನೇಹಿತರೊಂದಿಗೆ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. 

ಬಾಲಕಿಗೆ ಸರಳ ಜ್ವರ ಇದ್ದು, ಅವಳಿಗೆ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಮನೆ ಮಾಲೀಕರು ಮನೆ ಬಾಡಿಗೆಗೆ ಕೊಡಲು ನಿರಾಕರಿಸಿದರು.ಭೂಟಿಯಾ ಮತ್ತು ಅವನ ಸ್ನೇಹಿತರು ಬಾಲಕಿಗೆ ವೈದ್ಯಕೀಯ ನೆರವು ನೀಡಿ ಹೋಟೆಲ್‌ನಲ್ಲಿ ತಂಗಲು ವ್ಯವಸ್ಥೆ ಮಾಡಿದ್ದರು. ಹುಡುಗಿ  ಚೇತರಿಸಿಕೊಂಡ ನಂತರ, ತಮ್ಮ ಬಾಡಿಗೆ ಮನೆಗೆ ತೆರಳಿದಾಗ ಮಾಲೀಕರು ಅವಳಿಗೆ ಮನೆಗೆ ಹೋಗಲು ಅನುಮತಿ ನೀಡಲಿಲ್ಲ. 

ಈ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಭುಟಿಯಾ, 'ಇಂತಹ ಕಷ್ಟದ ಸಮಯದಲ್ಲೂ ಜನರು ಪರಸ್ಪರ ಸಹಾಯ ಮಾಡದಿರುವುದು ದುರದೃಷ್ಟಕರ. ಈ ಹುಡುಗಿ ಸಿಕ್ಕಿಂನಿಂದ ಬಂದಿದ್ದು, ಸಾಕಷ್ಟು ನೋವು ಅನುಭವಿಸಿದ್ದಾರೆ. ನಾನು ಪೊಲೀಸರನ್ನು ಸಂಪರ್ಕಿಸಿದ್ದೇನೆ. ಅವಳಿಗೆ  ನ್ಯಾಯ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!