ಕಿರಣ್ ರಿಜಿಜು 
ಕ್ರೀಡೆ

ಕ್ರೀಡಾ ಪ್ರಶಸ್ತಿಗಳ ಮೊತ್ತದಲ್ಲಿ ಭಾರೀ ಏರಿಕೆ

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಕ್ರೀಡಾ ದಿನವಾದ ಆಗಸ್ಟ್ 29 ರ ಶನಿವಾರದಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಮೊತ್ತವನ್ನು ಏರಿಕೆ ಮಾಡಿದ್ದಾರೆ.

ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಕ್ರೀಡಾ ದಿನವಾದ ಆಗಸ್ಟ್ 29 ರ ಶನಿವಾರದಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಮೊತ್ತವನ್ನು ಏರಿಕೆ ಮಾಡಿದ್ದಾರೆ.

ಇದರ ಅಡಿಯಲ್ಲಿ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ವಿಜೇತರಿಗೆ 25 ಲಕ್ಷ ರೂ. ಮತ್ತು ಅರ್ಜುನ ಪ್ರಶಸ್ತಿ ವಿಜೇತರಿಗೆ 15 ಲಕ್ಷ ರೂ. ನೀಡಲಾಗುವುದು.

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಏಳು ವಿಭಾಗಗಳಲ್ಲಿ ನಾಲ್ಕು ವಿಭಾಗಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಕ್ರೀಡಾ ಸಚಿವರು ಹೇಳಿದ್ದಾರೆ.

ಖೇಲ್ ರತ್ನ ವಿಜೇತರಿಗೆ ಏಳುವರೆ ಲಕ್ಷ ರೂಪಾಯಿಗಳ ಬದಲು 25 ಲಕ್ಷ ರೂ., ಅರ್ಜುನ ಪ್ರಶಸ್ತಿ ಪುರಸ್ಕೃತರಿಗೆ ಐದು ಲಕ್ಷ ರೂಪಾಯಿಗಳ ಬದಲು 15 ಲಕ್ಷ ರೂ. ನೀಡಲು ನಿರ್ಧರಿಸಲಾಗಿದೆ.

ಜೀವಮಾನ ಸಾಧನೆಗೆಯಾಗಿ ನೀಡಲಾಗುವ ದ್ರೋಣಚಾರ್ಯ ಪ್ರಶಸ್ತಿ ಮೊತ್ತವನ್ನು 5 ಲಕ್ಷದಿಂದ 15 ಲಕ್ಷ ಹಾಗೂ ದ್ರೋಣಚಾರ್ಯ ಪ್ರಶಸ್ತಿಗೆ ಮೊತ್ತವನ್ನು 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಧ್ಯಾನ್‍ಚಂದ್ ಪ್ರಶಸ್ತಿ ಪುರಸ್ಕøತರಿಗೆ ಕೊಡುತ್ತಿದ್ದ 5 ಲಕ್ಷ ಬದಲಿಗೆ 10 ಲಕ್ಷ ನೀಡಲಾಗುತ್ತಿದೆ.

ಹೊಸ ನಿಯಮ ಪ್ರಸಕ್ತ ವರ್ಷದಿಂದಲೇ ಜಾರಿಯಾಗಲಿದೆ ಎಂದು ಕೇಂದ್ರ ಕ್ರೀಡಾಮಂತ್ರಿ ಕಿರಣ್ ರಿಜಿಜು ತಿಳಿಸಿದ್ದಾರೆ. ಒಟ್ಟು ಏಳು ವಿಭಾಗಗಳಲ್ಲಿ ಕೇಂದ್ರ ಸರ್ಕಾರ ಕೊಡಮಾಡುತ್ತಿದ್ದ ಪ್ರಶಸ್ತಿಗಳ ನಗದು ಮೊತ್ತವನ್ನು ಈ ವರ್ಷದಿಂದಲೇ ಅನ್ವಯವಾಗುವಂತೆ ಹೆಚ್ಚಳ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT