ಕಿರಣ್ ರಿಜಿಜು 
ಕ್ರೀಡೆ

ಕ್ರೀಡಾ ಪ್ರಶಸ್ತಿಗಳ ಮೊತ್ತದಲ್ಲಿ ಭಾರೀ ಏರಿಕೆ

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಕ್ರೀಡಾ ದಿನವಾದ ಆಗಸ್ಟ್ 29 ರ ಶನಿವಾರದಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಮೊತ್ತವನ್ನು ಏರಿಕೆ ಮಾಡಿದ್ದಾರೆ.

ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಕ್ರೀಡಾ ದಿನವಾದ ಆಗಸ್ಟ್ 29 ರ ಶನಿವಾರದಂದು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಮೊತ್ತವನ್ನು ಏರಿಕೆ ಮಾಡಿದ್ದಾರೆ.

ಇದರ ಅಡಿಯಲ್ಲಿ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ವಿಜೇತರಿಗೆ 25 ಲಕ್ಷ ರೂ. ಮತ್ತು ಅರ್ಜುನ ಪ್ರಶಸ್ತಿ ವಿಜೇತರಿಗೆ 15 ಲಕ್ಷ ರೂ. ನೀಡಲಾಗುವುದು.

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಏಳು ವಿಭಾಗಗಳಲ್ಲಿ ನಾಲ್ಕು ವಿಭಾಗಗಳ ಬಹುಮಾನದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಕ್ರೀಡಾ ಸಚಿವರು ಹೇಳಿದ್ದಾರೆ.

ಖೇಲ್ ರತ್ನ ವಿಜೇತರಿಗೆ ಏಳುವರೆ ಲಕ್ಷ ರೂಪಾಯಿಗಳ ಬದಲು 25 ಲಕ್ಷ ರೂ., ಅರ್ಜುನ ಪ್ರಶಸ್ತಿ ಪುರಸ್ಕೃತರಿಗೆ ಐದು ಲಕ್ಷ ರೂಪಾಯಿಗಳ ಬದಲು 15 ಲಕ್ಷ ರೂ. ನೀಡಲು ನಿರ್ಧರಿಸಲಾಗಿದೆ.

ಜೀವಮಾನ ಸಾಧನೆಗೆಯಾಗಿ ನೀಡಲಾಗುವ ದ್ರೋಣಚಾರ್ಯ ಪ್ರಶಸ್ತಿ ಮೊತ್ತವನ್ನು 5 ಲಕ್ಷದಿಂದ 15 ಲಕ್ಷ ಹಾಗೂ ದ್ರೋಣಚಾರ್ಯ ಪ್ರಶಸ್ತಿಗೆ ಮೊತ್ತವನ್ನು 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಧ್ಯಾನ್‍ಚಂದ್ ಪ್ರಶಸ್ತಿ ಪುರಸ್ಕøತರಿಗೆ ಕೊಡುತ್ತಿದ್ದ 5 ಲಕ್ಷ ಬದಲಿಗೆ 10 ಲಕ್ಷ ನೀಡಲಾಗುತ್ತಿದೆ.

ಹೊಸ ನಿಯಮ ಪ್ರಸಕ್ತ ವರ್ಷದಿಂದಲೇ ಜಾರಿಯಾಗಲಿದೆ ಎಂದು ಕೇಂದ್ರ ಕ್ರೀಡಾಮಂತ್ರಿ ಕಿರಣ್ ರಿಜಿಜು ತಿಳಿಸಿದ್ದಾರೆ. ಒಟ್ಟು ಏಳು ವಿಭಾಗಗಳಲ್ಲಿ ಕೇಂದ್ರ ಸರ್ಕಾರ ಕೊಡಮಾಡುತ್ತಿದ್ದ ಪ್ರಶಸ್ತಿಗಳ ನಗದು ಮೊತ್ತವನ್ನು ಈ ವರ್ಷದಿಂದಲೇ ಅನ್ವಯವಾಗುವಂತೆ ಹೆಚ್ಚಳ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT