ಕೇಂದ್ರ ಸಚಿವ ಕಿರಣ್ ರಿಜಿಜು 
ಕ್ರೀಡೆ

ಕಬಡ್ಡಿ ಆಟಗಾರರು ಪಾಕಿಸ್ತಾನಕ್ಕೆ ಹೋಗಲು ಅನುಮತಿ ನೀಡಲ್ಲ- ಕಿರಣ್ ರಿಜಿಜು

ವಿಶ್ವ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ಪ್ರಯಾಣಿಸಲು ಯಾವುದೇ ಭಾರತೀಯ ಆಟಗಾರರಿಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ

ನವದೆಹಲಿ: ವಿಶ್ವ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ಪ್ರಯಾಣಿಸಲು ಯಾವುದೇ ಭಾರತೀಯ ಆಟಗಾರರಿಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ

ಪಾಕಿಸ್ತಾನಕ್ಕೆ ತೆರಳಲು ಯಾವುದೇ ಕಬಡ್ಡಿ ಆಟಗಾರರಿಗೆ ಅನುಮತಿ ನೀಡಲ್ಲ. ವೀಸಾ ನೀಡುವುದು ದೇಶದ ಸಾರ್ವಭೌಮ ಹಕ್ಕು, ವೀಸಾ ನೀಡುವಲ್ಲಿ ನಮಗೆ ಯಾವುದೇ ಪಾತ್ರವಿಲ್ಲ ಎಂದು ಎಎನ್ ಐ ಸುದ್ದಿಸಂಸ್ಥೆಗೆ ರಿಜಿಜು ತಿಳಿಸಿದ್ದಾರೆ.

 ಪಾಕಿಸ್ತಾನ ಭೇಟಿ ಅಥವಾ ರದ್ದತಿ ಬಗ್ಗೆ ಮಾಹಿತಿ ನೀಡಲಾಗಿದೆಯೇ ಎಂಬ ಬಗ್ಗೆ ಕಬಡಿ ಪೆಡರೇಷನ್ ನೊಂದಿಗೆ ಮಾತುಕತೆ ನಡೆಸುತ್ತೇನೆ. ವೀಸಾಗೆ ಸಂಬಂಧಿಸಿದಂತೆ ನಮಗೆ ಯಾವುದೇ ಪಾತ್ರವಿಲ್ಲ, ಆದರೆ, ದೇಶದ ಹೆಸರಿನಲ್ಲಿ ಆಟವಾಡುವುದು ಅಥವಾ ಭಾರತದ ಧ್ವಜವನ್ನು ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು ಎಂದು ರಿಜಿಜು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ್ದ ಭಾರತೀಯ ಅಮೆಚೂರು ಕಬಡ್ಡಿ ಫೆಡರೇಷನ್ ಆಡಳಿತಗಾರ ನ್ಯಾಯಮೂರ್ತಿ ಎಸ್ ಪಿ ಗಾರ್ಗ್, ಪಾಕಿಸ್ತಾನದಲ್ಲಿ ಪಂದ್ಯವಾಡಲು ಯಾವುದೇ ಕಬ್ಬಡಿ ತಂಡಕ್ಕೆ ಅನುಮತಿ ನೀಡಿಲ್ಲ. ಆದಾಗ್ಯೂ, ಪ್ರಯಾಣ ಬೆಳೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ಪಾಕಿಸ್ತಾನಕ್ಕೆ ಹೋಗಲಿರುವ ಯಾವುದೇ ಕಬಡ್ಡಿ ತಂಡದ ಬಗ್ಗೆ ಭಾರತೀಯ ಅಮೆಚೂರು ಕಬಡ್ಡಿ ಫೆಡರೇಷನ್ ಯಾವುದೇ ಮಾಹಿತಿ ನೀಡಿಲ್ಲ. ಪಾಕಿಸ್ತಾನದಲ್ಲಿ ಪಂದ್ಯವಾಡಲು ಯಾವುದೇ ತಂಡಕ್ಕೂ ಅವಕಾಶ ನೀಡಿಲ್ಲ. ಮಾಹಿತಿ ಕೇಳಿದ ಬಳಿಕವಷ್ಟೇ ಈ ವಿಚಾರ ನಮಗೆ ತಿಳಿಯಿತು. ಇಂತಹ ಯಾವುದೇ ರೀತಿಯ ಚಟುವಟಿಕೆಗಳನ್ನು ಎಫ್ ಕೆಐ ಬೆಂಬಲಿಸಲ್ಲ, ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗಾರ್ಗ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT