ಕೇಂದ್ರ ಸಚಿವ ಕಿರಣ್ ರಿಜಿಜು 
ಕ್ರೀಡೆ

ಕಬಡ್ಡಿ ಆಟಗಾರರು ಪಾಕಿಸ್ತಾನಕ್ಕೆ ಹೋಗಲು ಅನುಮತಿ ನೀಡಲ್ಲ- ಕಿರಣ್ ರಿಜಿಜು

ವಿಶ್ವ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ಪ್ರಯಾಣಿಸಲು ಯಾವುದೇ ಭಾರತೀಯ ಆಟಗಾರರಿಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ

ನವದೆಹಲಿ: ವಿಶ್ವ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ಪ್ರಯಾಣಿಸಲು ಯಾವುದೇ ಭಾರತೀಯ ಆಟಗಾರರಿಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ

ಪಾಕಿಸ್ತಾನಕ್ಕೆ ತೆರಳಲು ಯಾವುದೇ ಕಬಡ್ಡಿ ಆಟಗಾರರಿಗೆ ಅನುಮತಿ ನೀಡಲ್ಲ. ವೀಸಾ ನೀಡುವುದು ದೇಶದ ಸಾರ್ವಭೌಮ ಹಕ್ಕು, ವೀಸಾ ನೀಡುವಲ್ಲಿ ನಮಗೆ ಯಾವುದೇ ಪಾತ್ರವಿಲ್ಲ ಎಂದು ಎಎನ್ ಐ ಸುದ್ದಿಸಂಸ್ಥೆಗೆ ರಿಜಿಜು ತಿಳಿಸಿದ್ದಾರೆ.

 ಪಾಕಿಸ್ತಾನ ಭೇಟಿ ಅಥವಾ ರದ್ದತಿ ಬಗ್ಗೆ ಮಾಹಿತಿ ನೀಡಲಾಗಿದೆಯೇ ಎಂಬ ಬಗ್ಗೆ ಕಬಡಿ ಪೆಡರೇಷನ್ ನೊಂದಿಗೆ ಮಾತುಕತೆ ನಡೆಸುತ್ತೇನೆ. ವೀಸಾಗೆ ಸಂಬಂಧಿಸಿದಂತೆ ನಮಗೆ ಯಾವುದೇ ಪಾತ್ರವಿಲ್ಲ, ಆದರೆ, ದೇಶದ ಹೆಸರಿನಲ್ಲಿ ಆಟವಾಡುವುದು ಅಥವಾ ಭಾರತದ ಧ್ವಜವನ್ನು ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು ಎಂದು ರಿಜಿಜು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ್ದ ಭಾರತೀಯ ಅಮೆಚೂರು ಕಬಡ್ಡಿ ಫೆಡರೇಷನ್ ಆಡಳಿತಗಾರ ನ್ಯಾಯಮೂರ್ತಿ ಎಸ್ ಪಿ ಗಾರ್ಗ್, ಪಾಕಿಸ್ತಾನದಲ್ಲಿ ಪಂದ್ಯವಾಡಲು ಯಾವುದೇ ಕಬ್ಬಡಿ ತಂಡಕ್ಕೆ ಅನುಮತಿ ನೀಡಿಲ್ಲ. ಆದಾಗ್ಯೂ, ಪ್ರಯಾಣ ಬೆಳೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ಪಾಕಿಸ್ತಾನಕ್ಕೆ ಹೋಗಲಿರುವ ಯಾವುದೇ ಕಬಡ್ಡಿ ತಂಡದ ಬಗ್ಗೆ ಭಾರತೀಯ ಅಮೆಚೂರು ಕಬಡ್ಡಿ ಫೆಡರೇಷನ್ ಯಾವುದೇ ಮಾಹಿತಿ ನೀಡಿಲ್ಲ. ಪಾಕಿಸ್ತಾನದಲ್ಲಿ ಪಂದ್ಯವಾಡಲು ಯಾವುದೇ ತಂಡಕ್ಕೂ ಅವಕಾಶ ನೀಡಿಲ್ಲ. ಮಾಹಿತಿ ಕೇಳಿದ ಬಳಿಕವಷ್ಟೇ ಈ ವಿಚಾರ ನಮಗೆ ತಿಳಿಯಿತು. ಇಂತಹ ಯಾವುದೇ ರೀತಿಯ ಚಟುವಟಿಕೆಗಳನ್ನು ಎಫ್ ಕೆಐ ಬೆಂಬಲಿಸಲ್ಲ, ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗಾರ್ಗ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕದ ಕಡಿವಾಣ: 4 ಭಾರತೀಯ ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ