ಕೇಂದ್ರ ಸಚಿವ ಕಿರಣ್ ರಿಜಿಜು 
ಕ್ರೀಡೆ

ಕಬಡ್ಡಿ ಆಟಗಾರರು ಪಾಕಿಸ್ತಾನಕ್ಕೆ ಹೋಗಲು ಅನುಮತಿ ನೀಡಲ್ಲ- ಕಿರಣ್ ರಿಜಿಜು

ವಿಶ್ವ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ಪ್ರಯಾಣಿಸಲು ಯಾವುದೇ ಭಾರತೀಯ ಆಟಗಾರರಿಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ

ನವದೆಹಲಿ: ವಿಶ್ವ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ಪ್ರಯಾಣಿಸಲು ಯಾವುದೇ ಭಾರತೀಯ ಆಟಗಾರರಿಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ

ಪಾಕಿಸ್ತಾನಕ್ಕೆ ತೆರಳಲು ಯಾವುದೇ ಕಬಡ್ಡಿ ಆಟಗಾರರಿಗೆ ಅನುಮತಿ ನೀಡಲ್ಲ. ವೀಸಾ ನೀಡುವುದು ದೇಶದ ಸಾರ್ವಭೌಮ ಹಕ್ಕು, ವೀಸಾ ನೀಡುವಲ್ಲಿ ನಮಗೆ ಯಾವುದೇ ಪಾತ್ರವಿಲ್ಲ ಎಂದು ಎಎನ್ ಐ ಸುದ್ದಿಸಂಸ್ಥೆಗೆ ರಿಜಿಜು ತಿಳಿಸಿದ್ದಾರೆ.

 ಪಾಕಿಸ್ತಾನ ಭೇಟಿ ಅಥವಾ ರದ್ದತಿ ಬಗ್ಗೆ ಮಾಹಿತಿ ನೀಡಲಾಗಿದೆಯೇ ಎಂಬ ಬಗ್ಗೆ ಕಬಡಿ ಪೆಡರೇಷನ್ ನೊಂದಿಗೆ ಮಾತುಕತೆ ನಡೆಸುತ್ತೇನೆ. ವೀಸಾಗೆ ಸಂಬಂಧಿಸಿದಂತೆ ನಮಗೆ ಯಾವುದೇ ಪಾತ್ರವಿಲ್ಲ, ಆದರೆ, ದೇಶದ ಹೆಸರಿನಲ್ಲಿ ಆಟವಾಡುವುದು ಅಥವಾ ಭಾರತದ ಧ್ವಜವನ್ನು ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದು ಎಂದು ರಿಜಿಜು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ್ದ ಭಾರತೀಯ ಅಮೆಚೂರು ಕಬಡ್ಡಿ ಫೆಡರೇಷನ್ ಆಡಳಿತಗಾರ ನ್ಯಾಯಮೂರ್ತಿ ಎಸ್ ಪಿ ಗಾರ್ಗ್, ಪಾಕಿಸ್ತಾನದಲ್ಲಿ ಪಂದ್ಯವಾಡಲು ಯಾವುದೇ ಕಬ್ಬಡಿ ತಂಡಕ್ಕೆ ಅನುಮತಿ ನೀಡಿಲ್ಲ. ಆದಾಗ್ಯೂ, ಪ್ರಯಾಣ ಬೆಳೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ಪಾಕಿಸ್ತಾನಕ್ಕೆ ಹೋಗಲಿರುವ ಯಾವುದೇ ಕಬಡ್ಡಿ ತಂಡದ ಬಗ್ಗೆ ಭಾರತೀಯ ಅಮೆಚೂರು ಕಬಡ್ಡಿ ಫೆಡರೇಷನ್ ಯಾವುದೇ ಮಾಹಿತಿ ನೀಡಿಲ್ಲ. ಪಾಕಿಸ್ತಾನದಲ್ಲಿ ಪಂದ್ಯವಾಡಲು ಯಾವುದೇ ತಂಡಕ್ಕೂ ಅವಕಾಶ ನೀಡಿಲ್ಲ. ಮಾಹಿತಿ ಕೇಳಿದ ಬಳಿಕವಷ್ಟೇ ಈ ವಿಚಾರ ನಮಗೆ ತಿಳಿಯಿತು. ಇಂತಹ ಯಾವುದೇ ರೀತಿಯ ಚಟುವಟಿಕೆಗಳನ್ನು ಎಫ್ ಕೆಐ ಬೆಂಬಲಿಸಲ್ಲ, ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗಾರ್ಗ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT