ಸಾಂದರ್ಭಿಕ ಚಿತ್ರ 
ಕ್ರೀಡೆ

ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ, ಆತನ ಸ್ನೇಹಿತ ಗುಂಡಿಗೆ ಬಲಿ

ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಅವರ ತವರು ನಗರವಾದ ಪಟಿಯಾಲದಲ್ಲಿ ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ ಹಾಗೂ ಆತನ ಸ್ನೇಹಿತ ಗುಂಡಿಗೆ ಬಲಿಯಾಗಿದ್ದಾರೆ.

ಚಂಡೀಗಢ: ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಅವರ ತವರು ನಗರವಾದ ಪಟಿಯಾಲದಲ್ಲಿ ರಾಷ್ಟ್ರೀಯ ಮಟ್ಟದ ಹಾಕಿ ಆಟಗಾರ ಹಾಗೂ ಆತನ ಸ್ನೇಹಿತ ಗುಂಡಿಗೆ ಬಲಿಯಾಗಿದ್ದಾರೆ.

ಪಂಜಾಬ್‌ ರಾಜ್ಯ ವಿದ್ಯುತ್‌ ಕಾರ್ಪೋರೇಷನ್‌ ಲಿಮಿಟೆಡ್‌ನ ಉದ್ಯೋಗಿಗಳಾಗಿರುವ ಅರ್ಮಿಕ್‌ ಸಿಂಗ್‌ ಹಾಗೂ ಸಿಮ್ರಾನ್‌ಜಿತ್‌ ಸಿಂಗ್‌ ಗುಂಡಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ.

ಉಪಾಹಾರ ಗೃಹದಲ್ಲಿ ಮೃತರು ಹಾಗೂ ಮನೋಜ್ ಕುಮಾರ್ ಮತ್ತು ಅವರ ಮಗನೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ತಂದೆ ಮಗ ಸೇರಿಕೊಂಡು ಅರ್ಮಿಕ್‌ ಸಿಂಗ್‌ ಹಾಗೂ ಸಿಮ್ರಾನ್‌ಜಿತ್‌ ಸಿಂಗ್‌ ಅವರನ್ನು ಥಳಿಸಿದ್ದಾರೆ.

ಈ ಘಟನೆಯ ಬಳಿಕ ಆಕ್ರೋಶಗೊಂಡ ಮನೋಜ್‌, ಮನೆಗೆ ತೆರಳಿ ರೈಫಲ್‌ ತಂದು ಅರ್ಮಿಕ್‌ ಸಿಂಗ್‌ ಹಾಗೂ ಸಿಮ್ರಾನ್‌ಜಿತ್‌ ಸಿಂಗ್‌ಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಐಪಿಸಿ ಸೆಕ್ಷನ್‌ 302ರ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT