ಕರ್ನಾಟಕ ತಂಡ (ಸಂಗ್ರಹ ಚಿತ್ರ) 
ಕ್ರೀಡೆ

ರಣಜಿ ಟ್ರೋಫಿ: ಕರ್ನಾಟಕ ಸೆಮಿಫೈನಲ್ ಪ್ರವೇಶ ಬಹುತೇಕ ಖಚಿತ, ಜಮ್ಮು ಮತ್ತು ಕಾಶ್ಮೀರಕ್ಕೆ 331 ರನ್ ಗಳ ಬೃಹತ್ ಗುರಿ

ಪ್ರಸ್ತುತ ನಡೆಯುತ್ತಿರುವ 2019/20ನೇ ಸಾಲಿನ ಸರಣಿ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಸೆಮಿಫೈನಲ್ ಪ್ರವೇಶ ಬಹುತೇಕ ಖಚಿತಪಡಿಸಿಕೊಂಡಿದ್ದು, ಕ್ವಾರ್ಟರ್‌ ಫೈನಲ್‌ ಹಣಾಹಣಿಯಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ 331 ಸವಾಲಿನ ಗುರಿ ನೀಡಿದೆ.

ಜಮ್ಮು: ಪ್ರಸ್ತುತ ನಡೆಯುತ್ತಿರುವ 2019/20ನೇ ಸಾಲಿನ ಸರಣಿ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಸೆಮಿಫೈನಲ್ ಪ್ರವೇಶ ಬಹುತೇಕ ಖಚಿತಪಡಿಸಿಕೊಂಡಿದ್ದು, ಕ್ವಾರ್ಟರ್‌ ಫೈನಲ್‌ ಹಣಾಹಣಿಯಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ 331 ಸವಾಲಿನ ಗುರಿ ನೀಡಿದೆ.

ಇಲ್ಲಿನ ಗಾಂಧಿ ಮೆಮೋರಿಯಲ್ ವಿಜ್ಞಾನ ಕಾಲೇಜಿನಲ್ಲಿ ಐದನೇ ದಿನವಾದ ಇಂದು ಬೆಳಗ್ಗೆ ನಾಲ್ಕು ವಿಕೆಟ್ ಕಳೆದುಕೊಂಡು 245 ರನ್‌ ಗಳೊಂದಿಗೆ ದ್ವಿತೀಯ ಇನಿಂಗ್ಸ್‌ ಮುಂದುವರಿಸಿದ ಕರ್ನಾಟಕ ತಂಡ 106.5 ಓವರ್‌ಗಳಿಗೆ ತನ್ನೆಲ್ಲ ವಿಕೆಟ್‌ ಕಳೆದುಕೊಂಡು 330 ರನ್ ಗಳಿಸಿದ್ದು, ಆತಿಥೇಯ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ 331 ರನ್ ಗುರಿ ನೀಡಿದೆ.

ನಾಲ್ಕನೇ ದಿನ ಅರ್ಧಶತಕ ಸಿಡಿಸಿದ್ದ ಕೆ.ವಿ ಸಿದ್ಧಾರ್ಥ್ ಇಂದು ಕೇವಲ ಎರಡು ರನ್‌ಗಳ ಅಂತರದಲ್ಲಿ ಶತಕ ವಂಚಿತರಾದರು. 177 ಎಸೆತಗಳನ್ನು ಎದುರಿಸಿದ್ದ ಅವರು ಎರಡು ಸಿಕ್ಸರ್ ಹಾಗೂ 10 ಬೌಂಡರಿಯೊಂದಿಗೆ 98 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಶತಕದಂಚಿನಲ್ಲಿ ಅವರು ಅಬಿದ್ ಮುಷ್ತಾಕ್‌ ಅವರಿಗೆ ವಿಕೆಟ್‌ ಒಪ್ಪಿಸಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ಈ ಪಂದ್ಯವನ್ನು ಗೆಲ್ಲಲು ಬಾಕಿ ಉಳಿದಿರುವ ಎರಡು ಸೆಷನ್ ಗಳಲ್ಲಿ 331 ರನ್ ಗಳ ಬೃಹತ್ ಸವಾಲನ್ನು ಮೆಟ್ಟಿ ನಿಲ್ಲಿಬೇಕಿದೆ. ಎರಡೂ ಸೆಷನ್ ಗಳಲ್ಲಿ ಸುಮಾರು 58 ರಿಂದ 68 ಓವರ್ ಗಳನ್ನು ಎಸೆಯುವ ಸಾಧ್ಯತೆ ಇದೆ. ಒಂದು ವೇಳೆ ಪಂದ್ಯ ಡ್ರಾ ಆದರೆ ಆಗ ಮೊದಲ ಇನ್ನಿಂಗ್ಸ್ ಮುನ್ನಡೆ ಆಧಾರದ ಮೇಲೆ ಕರ್ನಾಟಕ ನಿರಾಯಾಸವಾಗಿ ಸೆಮಿಫೈನಲ್ ಪ್ರವೇಶ ಮಾಡಲಿದೆ. ಇದೀಗ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಜಮ್ಮು ಮತ್ತು ಕಾಶ್ಮೀರ ತಂಡ 21 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡಿದ್ದು, ಬಾಕಿ ಇರುವ 9 ವಿಕೆಟ್ ಗಳೊಂದಿಗೆ 310 ರನ್ ಗಳಿಸಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT