ಆಸ್ಟ್ರೇಲಿಯಾ ಓಪನ್: ಜೊಕೊವಿಚ್ ವಿರುದ್ಧ ಸೆಣಸುವ ಸುವರ್ಣಾವಕಾಶ ಕಳೆದುಕೊಂಡ ಪ್ರಜ್ಞೇಶ್ ಗುಣೇಶ್ವರನ್ 
ಕ್ರೀಡೆ

ಆಸ್ಟ್ರೇಲಿಯಾ ಓಪನ್: ಜೊಕೊವಿಚ್ ವಿರುದ್ಧ ಸೆಣಸುವ ಸುವರ್ಣಾವಕಾಶ ಕಳೆದುಕೊಂಡ ಪ್ರಜ್ಞೇಶ್ ಗುಣೇಶ್ವರನ್

ಭಾರತದ ಅಗ್ರ ಶ್ರೇಯಾಂಕಿತ ಟೆನಿಸ್ ಆಟಗಾರ ಪ್ರಜ್ಞೇಶ್ ಗುಣೇಶ್ವರನ್ ಅವರು ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಓಪನ್ ಪುರುಷರ ಸಿಂಗಲ್ಸ್ ಮೊದಲನೇ ಸುತ್ತಿನಲ್ಲಿ ಸೋಲು ಅನುಭವಿಸಿದ್ದಾರೆ. 

ಮೆಲ್ಬೋರ್ನ್: ಭಾರತದ ಅಗ್ರ ಶ್ರೇಯಾಂಕಿತ ಟೆನಿಸ್ ಆಟಗಾರ ಪ್ರಜ್ಞೇಶ್ ಗುಣೇಶ್ವರನ್ ಅವರು ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಓಪನ್ ಪುರುಷರ ಸಿಂಗಲ್ಸ್ ಮೊದಲನೇ ಸುತ್ತಿನಲ್ಲಿ ಸೋಲು ಅನುಭವಿಸಿದ್ದಾರೆ. 

ಆ ಮೂಲಕ ವಿಶ್ವದ ಎರಡನೇ ಶ್ರೇಯಾಂಕಿತ ನೊವಾಕ್ ಜೊಕೊವಿಚ್ ವಿರುದ್ಧ ಸೆಣಸುವ ಅವಕಾಶವನ್ನು ಕಳೆದುಕೊಂಡರು. ಟೂರ್ನಿಯ ಅರ್ಹತಾ ಸುತ್ತಿನ ಕೊನೆಯ ಪಂದ್ಯದಲ್ಲಿ ಸೋಲಿನ ಹೊರತಾಗಿಯೂ 122ನೇ ಶ್ರೇಯಾಂಕಿತ ಪ್ರಜ್ಞೇಶ್ ಗುಣೇಶ್ವರನ್ ಅವರು ಅದೃಷ್ಟದಿಂದ ಪ್ರಧಾನ ಸುತ್ತಿಗೆ ಲಗ್ಗೆ ಇಟ್ಟಿದ್ದರು.  

ಆದರೆ, ವೇಳಾಪಟ್ಟಿಯ ಪರಿಷ್ಕರಿಸಿದ ಪರಿಣಾಮ ಮಂಗಳವಾರ ಬೆಳಗ್ಗೆ ಆಡಿದ್ದ ಮೊದಲ ಸುತ್ತಿನ ಹಣಾಹಣಿಯಲ್ಲಿ ಜಪಾನ್ ನ ವೈಲ್ಡ್ ಕಾರ್ಡ್ ತಾತ್ಸುಮ ಇಟೋ ವಿರುದ್ಧ 4-6, 2-6, 5-7 ಅಂತರದಲ್ಲಿ ಸೋಲು ಅನುಭವಿಸಿದರು. ಒಟ್ಟಾರೆ, ಎರಡು ಗಂಟೆ ಒಂದು ನಿಮಿಷಗಳ ಕಾಲ ನಡೆದ ಸುದೀರ್ಘ ಕಾಳಗದಲ್ಲಿ ಭಾರತದ ಆಟಗಾರನಿಗೆ ನಿರಾಸೆ ಆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT