ಖ್ಯಾತ ಕುಸ್ತಿಪಟು ವಿನೇಶ್ ಪೋಗಟ್ 
ಕ್ರೀಡೆ

ಪದ್ಮಶ್ರೀ ಗೌರವ ಸಿಗದ್ದಕ್ಕೆ ಖ್ಯಾತ ಕುಸ್ತಿಪಟು ವಿನೇಶ್ ಪೋಗಟ್ ಅಸಮಾಧಾನ

ಈ ಬಾರಿ ಪದ್ಮ ಶ್ರೀ ಪುರಸ್ಕಾರಕ್ಕೆ ತಮ್ಮ ಹೆಸರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡದ್ದಕ್ಕೆ ಖ್ಯಾತ ಕುಸ್ತಿಪಟು ವಿನೇಶ್ ಪೋಗಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ಈ ಬಾರಿ ಪದ್ಮ ಶ್ರೀ ಪುರಸ್ಕಾರಕ್ಕೆ ತಮ್ಮ ಹೆಸರನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡದ್ದಕ್ಕೆ ಖ್ಯಾತ ಕುಸ್ತಿಪಟು ವಿನೇಶ್ ಪೋಗಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಟ್ವಿಟರ್ ನಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿರುವ ವಿನೇಶ್ ಅವರು, ಯಾರಿಗೆ ಪ್ರಶಸ್ತಿ ನೀಡಬೇಕೆಂದು ಯಾರು ನಿರ್ಧರಿಸುತ್ತಾರೆ? ತೀರ್ಪುಗಾರರಲ್ಲಿ ಪ್ರಸ್ತುತ, ಮಾಜಿ ಕ್ರೀಡಾಪಟುಗಳೆಂದು ಇದ್ದಾರೆಯೇ? ಆಯ್ಕೆ ಪ್ರಕ್ರಿಯೆ ಹೇಗೆ ಕೆಲಸ ಮಾಡುತ್ತದೆ? ಏನೇ ಆದರೂ ಕೊನಯಲ್ಲಿ ಎಲ್ಲವೂ ಅನ್ಯಾಯವೆಂದೇ ತೋರುತ್ತದೆ ಎಂದು ಹೇಳಿಕೊಂಡಿದ್ದಾರೆ. 

ಪ್ರತೀ ವರ್ಷ ನಮ್ಮ ಸರ್ಕಾರ ಹಲವು ಕ್ರೀಡಾಪಟುಗಳಿಗೆ ಪುರಸ್ಕಾರ ನೀಡುತ್ತದೆ. ಈ ಪುರಸ್ಕಾರಗಳು ಕ್ರೀಡಾಪಟುಗಳಿಗೆ ತಮ್ಮ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲು ಪ್ರೇರೇಪಣೆ ನೀಡುವಂಥಹದ್ದು, ಆದರೆ, ಕೆಲ ಸಂದರ್ಭದಲ್ಲಿ ಇಂತಹ ಪ್ರಶಸ್ತಿಗಳಿಗೆ ಆಯ್ಕೆ ಮಾಡುವಾಗ ಪ್ರಸಕ್ತ ಸಾಧನೆಗಳು ಮತ್ತು ಕ್ರೀಡಾಕ್ಷೇತ್ರದಲ್ಲಿನ ಇತ್ತೀಚಿನ ಸಾಧನೆಗಳನ್ನು ಪರಿಗಣಿಸದೇ ಇರುವುದನ್ನೂ ಕಾಣಬಹುದು. ಇದು ಅರ್ಹರನ್ನು ಪ್ರತಿಬಾರಿಯೂ ಪ್ರಶಸ್ತಿ ಪಟ್ಟಿಯಿಂದ ಹೊರಗೆ ಇಟ್ಟಂತೆ. ಇದ ಸಂಪ್ರದಾಯವಾಗಿ ನಡೆದುಬಂದಿದೆ. 2020ನೇ ಸಾಲಿನ ಪಟ್ಟಿಯೂ ಇದಕ್ಕೆ ಹೊರತಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT