ಕಿರಣ್ ರಿಜಿಜು 
ಕ್ರೀಡೆ

ರಾಷ್ಟ್ರೀಯ ಕ್ರೀಡಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ಜೂ.22ಕ್ಕೆ ಮುಂದೂಡಿಕೆ: ಸ್ವಯಂ ನಾಮ ನಿರ್ದೇಶನಕ್ಕೆ ಅವಕಾಶ

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್ 22ರವರೆಗೆ ಮುಂದೂಡಲಾಗಿದೆ. ಕೋವಿಡ್-19 ಲಾಕ್ ಡೌನ್ ಮಧ್ಯೆ ಬೇರೆಯವರಿಂದ ಶಿಫಾರಸು ಪಡೆಯುವುದು ಕಷ್ಟವೆಂದು ಕ್ರೀಡಾಪಟುಗಳು ಸ್ವ ನಾಮ ನಿರ್ದೇಶನ ಮಾಡಿಕೊಳ್ಳಬಹುದು ಎಂದು ಕ್ರೀಡಾ ಇಲಾಖೆ ತಿಳಿಸಿದೆ.

ನವದೆಹಲಿ: ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಜೂನ್ 22ರವರೆಗೆ ಮುಂದೂಡಲಾಗಿದೆ. ಕೋವಿಡ್-19 ಲಾಕ್ ಡೌನ್ ಮಧ್ಯೆ ಬೇರೆಯವರಿಂದ ಶಿಫಾರಸು ಪಡೆಯುವುದು ಕಷ್ಟವೆಂದು ಕ್ರೀಡಾಪಟುಗಳು ಸ್ವ ನಾಮ ನಿರ್ದೇಶನ ಮಾಡಿಕೊಳ್ಳಬಹುದು ಎಂದು ಕ್ರೀಡಾ ಇಲಾಖೆ ತಿಳಿಸಿದೆ.

ನಾಮನಿರ್ದೇಶನ ಪ್ರಕ್ರಿಯೆಗೆ ನಿನ್ನೆ ಕೊನೆಯ ದಿನವಾಗಿತ್ತು. ಆದರೆ ಲಾಕ್ ಡೌನ್ ಕಾರಣದಿಂದ ಕ್ರೀಡಾಪಟುಗಳಿಗೆ ನಾಮ ನಿರ್ದೇಶನ, ಅಧಿಕಾರಿಗಳಿಂದ ಶಿಫಾರಸು ಮಾಡಿಕೊಳ್ಳಲು ಕಷ್ಟವಾಗುತ್ತಿರುವುದಿಂದ ದಿನಾಂಕ ಮುಂದೂಡಿ ಶಿಫಾರಸು ಪ್ರಕ್ರಿಯೆಗೆ ವಿನಾಯ್ತಿ ನೀಡಲಾಗಿದೆ.

ಈ ವರ್ಷ ಇ ಮೇಲ್ ಮೂಲಕ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಫೆಡರೇಶನ್, ಕ್ರೀಡಾ ಮಂಡಳಿ, ಮಾಜಿ ಪ್ರಶಸ್ತಿ ಪುರಸ್ಕೃತರ ಶಿಫಾರಸು ಪತ್ರಗಳನ್ನು ಹೊಂದಿದ್ದರೆ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಶಸ್ತಿಗಳಲ್ಲಿ, ರಾಜೀವ್ ಗಾಂಧಿ ಖೇಲ್ ರತ್ನವನ್ನು ಪ್ರತಿವರ್ಷ ಆಗಸ್ಟ್ 29ಕ್ಕೆ ನೀಡಲಾಗುತ್ತದೆ. ಅಂದು ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ಹುಟ್ಟಿದ ದಿನ, ಅದೇ ದಿನವನ್ನು ರಾಷ್ಟ್ರೀಯ ಕ್ರೀಡಾ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT