ಸಂಜಿತಾ ಚಾನು 
ಕ್ರೀಡೆ

ಡೋಪಿಂಗ್ ಪ್ರಕರಣದಲ್ಲಿ ಆರೋಪಮುಕ್ತ ಹಿನ್ನೆಲೆ: 2018ರ ಅರ್ಜುನ ಪ್ರಶಸ್ತಿ ಪಡೆಯಲಿರುವ ಸಂಜಿತಾ ಚಾನು

ಉದ್ದೀಪನ ಮದ್ದು ಸೇವನೆ ಕಳಂಕದಿಂದ ಮುಕ್ತವಾದ ಎರಡು ಬಾರಿಯ ಕಾಮನ್ವೆಲ್ತ್ ಗೋಲ್ಡ್ ಮೆಡಲಿಸ್ಟ್  ಸಂಜಿತಾ ಚಾನು ಅಂತಿಮವಾಗಿ 2018ರಿಂದ ತಡೆಹಿಡಿಯಲ್ಪಟ್ಟಿದ್ದ ಅರ್ಜುನ ಪ್ರಶಸ್ತಿಯನ್ನು ಪಡೆದುಕೊಳ್ಳಲಿದ್ದಾರೆ. 

ನವದೆಹಲಿ: ಉದ್ದೀಪನ ಮದ್ದು ಸೇವನೆ ಕಳಂಕದಿಂದ ಮುಕ್ತವಾದ ಎರಡು ಬಾರಿಯ ಕಾಮನ್ವೆಲ್ತ್ ಗೋಲ್ಡ್ ಮೆಡಲಿಸ್ಟ್  ಸಂಜಿತಾ ಚಾನು ಅಂತಿಮವಾಗಿ 2018ರಿಂದ ತಡೆಹಿಡಿಯಲ್ಪಟ್ಟಿದ್ದ ಅರ್ಜುನ ಪ್ರಶಸ್ತಿಯನ್ನು ಪಡೆದುಕೊಳ್ಳಲಿದ್ದಾರೆ. 2018ರಲ್ಲಿ ಚಾನು ಅವರಿಗೆ ಅರ್ಜುನ ಪ್ರಶಸ್ತಿ ನೀಡುವುದಾಗಿ  ಕ್ರೀಡಾ ಸಚಿವಾಲಯದ ಮೂಲವೊಂದು ದೃಢಪಡಿಸಿತ್ತು. ಆದರೆ ಉದ್ದೀಪನ ಮದ್ದು ಸೇವನೆ ಪ್ರಕರಣದಲ್ಲಿ ಸಿಕ್ಕ ಪರಿಣಾಮ ಆಕೆಗೆ ಪ್ರಶಸ್ತಿ ನೀಡಬಾರದೆಂದು ದೆಹಲಿ ಹೈಕೋರ್ಟ್ ಆದೇಶಿಸಿದ್ದು ಪ್ರಶಸ್ತಿ ಪ್ರಧಾನ ತಡೆಹಿಡಿಯಲಾಗಿತ್ತು.

"ಸಂಜಿತಾ ಚಾನು ಅಂತಾರಾಷ್ಟ್ರೀಯ ಒಕ್ಕೂಟದ ಎಲ್ಲಾ ಡೋಪಿಂಗ್ ಆರೋಪಗಳಿಂದ ಮುಕ್ತರಾಗಿದ್ದಾರೆ, ಆದ್ದರಿಂದ ನಾವು ದೆಹಲಿ ಹೈಕೋರ್ಟ್ ಆದೇಶಕ್ಕೆ ಬದ್ಧರಾಗಿ ಅರ್ಜುನ ಪ್ರಶಸ್ತಿಗೆ ಪರಿಗಣಿಸುತ್ತೇವೆ"ಎಂದು ಸಚಿವಾಲಯದ ಮೂಲ ಪಿಟಿಐಗೆ ತಿಳಿಸಿದೆ. 2017 ರ ಅರ್ಜುನ ಪ್ರಶಸ್ತಿಗಾಗಿ ಅವರನ್ನು ಕಡೆಗಣಿಸಿದ ನಂತರ, ಚಾನು ದೆಹಲಿ ಹೈಕೋರ್ಟ್ ಮುಂದೆ ರಿಟ್ ಅರ್ಜಿ ಸಲ್ಲಿಸಿದ್ದರು. ಅವರನ್ನು ಪ್ರಶಸ್ತಿಗೆ  ಶಿಫಾರಸು ಮಾಡಿದವರ ಪಟ್ಟಿಯಿಂದ ಹೊರಗಿಡುವ ನಿರ್ಧಾರವನ್ನು ಚಾನು ಪ್ರಶ್ನಿಸಿದ್ದರು.

ಇದೀಗ ಹದಿನೈದು ದಿನಗಳ ಹಿಂದಷ್ಟೇ ಸಂಜಿತಾ ಚಾನು ಅವರ ಮೇಲಿದ್ದ ಉದ್ದೀಪನ ಮದ್ದು ಸೇವನೆ ಪ್ರಕರಣವನ್ನು ಅಂತಾರಾಷ್ಟ್ರೀಯ ವೇಟ್‌ಲಿಫ್ಟಿಂಗ್‌ ಫೆಡರೇಷನ್‌ (ಐಡಬ್ಲ್ಯುಎಫ್‌) ಕೈಬಿಟ್ಟಿದ್ದು, ಸಂಜಿತಾ ಚಾನು ಅವರ ಮೇಲಿನ ಆರೋಪ ‘ದೃಢೀಕೃತವಲ್ಲ’ ಎಂದು ಹೇಳಿತ್ತು.ವಿಶ್ವ ಉದ್ದೀಪನ ಮದ್ದು ಸೇವನೆ ತಡೆ ಘಟಕದ (ವಾಡಾ) ಶಿಫಾರಸಿನ ಆಧಾರದ ಮೇಲೆ ಐಡಬ್ಲ್ಯುಎಫ್‌ ಈ ನಿರ್ಧಾರಕ್ಕೆ ಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT