ಜ್ಞಾನೇಂದ್ರೊ ನಿಂಗೊಮ್​​ಬಾಮ್ 
ಕ್ರೀಡೆ

ಹಾಕಿ ಇಂಡಿಯಾ ನೂತನ ಅಧ್ಯಕ್ಷರಾಗಿ ಮಣಿಪುರದ ಜ್ಞಾನೇಂದ್ರೊ ನಿಂಗೊಮ್​​ಬಾಮ್ ಆಯ್ಕೆ

ಮಣಿಪುರದ ಜ್ಞಾನೇಂದ್ರೊ ನಿಂಗೊಮ್​​ಬಾಮ್ ಹಾಕಿ ಇಂಡಿಯಾ (ಎಚ್‌ಐ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಮೊಹಮ್ಮದ್ ಮುಷ್ತಾಕ್ ಅಹ್ಮದ್ ಅವರಿಂದ ಅಧಿಕಾರ ವಹಿಸಿಕೊಂಡರು.

ನವದೆಹಲಿ: ಮಣಿಪುರದ ಜ್ಞಾನೇಂದ್ರೊ ನಿಂಗೊಮ್​​ಬಾಮ್ ಹಾಕಿ ಇಂಡಿಯಾ (ಎಚ್‌ಐ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಮೊಹಮ್ಮದ್ ಮುಷ್ತಾಕ್ ಅಹ್ಮದ್ ಅವರಿಂದ ಅಧಿಕಾರ ವಹಿಸಿಕೊಂಡರು.

ಹಾಕಿ ಇಂಡಿಯಾದ ಕಾಂಗ್ರೆಸ್ ಮತ್ತು ಚುನಾವಣೆಗಳಲ್ಲಿ ಹಿರಿಯ ಉಪಾಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾದ ನಂತರ ಅಹ್ಮದ್ ಫೆಡರೇಶನ್‌ನಲ್ಲಿ ಉಳಿದಿದ್ದಾರೆ. ಅಹ್ಮದ್ ಹಾಕಿ ಇಂಡಿಯಾ ಅಧ್ಯಕ್ಷ ಸ್ಥಾನಕ್ಕೆ ಜುಲೈನಲ್ಲಿ ರಾಜೀನಾಮೆ ಸಲ್ಲಿಸಿದ್ದರು.

ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಆಯಾ ರಾಜ್ಯ ಸರ್ಕಾರಗಳು ವಿಧಿಸಿರುವ ನಿರ್ಬಂಧಗಳಿಂದಾಗಿ ಪ್ರಯಾಣ ಸಾಧ್ಯವಾಗದ ಹಿನ್ನೆಲೆ ಸದಸ್ಯ ಘಟಕಗಳಿಗೆ ವೀಡಿಯೊ ಕಾನ್ಫರೆನ್ಸಿಂಗ್ ಸೌಲಭ್ಯದ ಮೂಲಕ ಸಭೆಗೆ ಪ್ರವೇಶ ಕಲ್ಪಿಸಲಾಗಿತ್ತು. ಈ ಸಮಯ ಅವಿರೋಧವಾಗಿ ಆಯ್ಕೆಯಾದ ಜ್ಞಾನೇಂದ್ರೊ ಈಶಾನ್ಯ ರಾಜ್ಯದಿಂದ ಈ ಹುದ್ದೆಗೆ ಆಯ್ಕೆಯಾದ ಮೊದಲಿಗರೆನಿಸಿದ್ದಾರೆ.

ಎರಡು ವರ್ಷಗಳ ಅವಧಿಗೆ ಆಯ್ಕೆಯಾದ ಜ್ಞಾನೇಂದ್ರೊ ನಿಂಗೊಮ್​​ಬಾಮ್2009-2014ರ ನಡುವೆ ಮಣಿಪುರ ಹಾಕಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಒಂದು ದಶಕಕ್ಕೂ ಹೆಚ್ಚು ಕಾಲ ಹಾಕಿ ಜತೆಗೆ ಸಂಬಂಧ ಹೊಂದಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ತಳಮಟ್ಟದಲ್ಲಿ ಹಾಕಿ ಅಭಿವೃದ್ಧಿಪಡಿಸುವಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಅಹ್ಮದ್ ಅವರ ಅಧಿಕಾರಾವಧಿಯಲ್ಲಿ ಹಾಕಿ ಇಂಡಿಯಾ ಐ 2018 ರಲ್ಲಿ ವಿಶ್ವಕಪ್ ಸೇರಿದಂತೆ ಹಲವಾರು ಪ್ರಮುಖ ಅಂತಾರಾಷ್ಟ್ರೀಯ ಪಂದ್ಯಾವಳಿಗಳನ್ನು ಆಯೋಜಿಸಿತ್ತು. ಮೇ ತಿಂಗಳಲ್ಲಿ ಹಾಕಿ ಇಂಡಿಯಾ ವಿಶೇಷ ಕಾಂಗ್ರೆಸ್ ಅನ್ನು ನಡೆಸಿತು, ಅಲ್ಲಿ ಸಾಂಕ್ರಾಮಿಕ ರೋಗದ ಕಾರಣ ದೇಶಾದ್ಯಂತ ಕ್ರೀಡಾ ಚಟುವಟಿಕೆಗಳನ್ನು ಹಠಾತ್ತನೆ ನಿಲ್ಲಿಸಿದ ನಂತರ ಕಾರ್ಯನಿರ್ವಾಹಕ ಮಂಡಳಿಯ ಸದಸ್ಯರು ಪುರುಷರು ಮತ್ತು ಮಹಿಳಾ ರಾಷ್ಟ್ರೀಯ ತಂಡಗಳ ಒಲಿಂಪಿಕ್ ಸಿದ್ಧತೆಗಳ ಸ್ಥಿತಿಗತಿ ಸಂಬಂಧ ಚರ್ಚೆಯಾಗಿತ್ತು.

"ಹಾಕಿಇಂಡಿಯಾದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜ್ಞಾನೇಂದ್ರೊ ನಿಂಗೋಮ್​​ಬಾಮ್ ಅವರನ್ನು ನಾನು ಅಭಿನಂದಿಸುತ್ತೇನೆ ಮತ್ತು ಅಹ್ಮದ್ ಅವರನ್ನು ಹಿರಿಯ ಉಪಾಧ್ಯಕ್ಷರಾಗಿ ಹೊಸ ಸ್ಥಾನದಲ್ಲಿ ಮತ್ತೆ ಹಾಕಿ ಇಂಡಿಯಾ ಕಾರ್ಯನಿರ್ವಾಹಕ ಮಂಡಳಿಗೆ ಸ್ವಾಗತಿಸುತ್ತೇನೆ" ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಾಜಿಂದರ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂದಿನ ಸಭೆಯಲ್ಲಿ 2021 ರ ರಾಷ್ಟ್ರೀಯ ಚಾಂಪಿಯನ್‌ಶಿಪ್ ಸೇರಿ ಹಲವು ವಿಚಾರದ ಕುರಿತು ಮಹತ್ವದ ಚರ್ಚೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT