ಕ್ರೀಡೆ

ಶೂಟರ್ ಅಭಿನವ್ ಬಿಂದ್ರಾ ದೆಹಲಿ ಹಾಫ್ ಮ್ಯಾರಥಾನ್‌ನ ರಾಯಭಾರಿ

Vishwanath S

ನವದೆಹಲಿ: ನವೆಂಬರ್ 29 ರಂದು ರಾಷ್ಟ್ರ ರಾಜಧಾನಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ಏರ್‌ಟೆಲ್ ದೆಹಲಿ ಹಾಫ್ ಮ್ಯಾರಥಾನ್‌ನ 16ನೇ ಆವೃತ್ತಿಯ ರಾಯಭಾರಿಯಾಗಿ ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ ಅವರನ್ನು ಆಯ್ಕೆ ಮಾಡಲಾಗಿದೆ.

ದೆಹಲಿ ಹಾಫ್ ಮ್ಯಾರಥಾನ್‌ನ ಪ್ರವರ್ತಕ ಪ್ರೊಕಾಮ್ ಇಂಟರ್‌ನ್ಯಾಷನಲ್‌ನ ವ್ಯವಸ್ಥಾಪಕ ನಿರ್ದೇಶಕ ಅನಿಲ್ ಸಿಂಗ್ ಗುರುವಾರ ಈ ಕುರಿತು ಮಾಹಿತಿ ನೀಡಿದ್ದಾರೆ. 

ಭಾರತದ ಒಲಿಂಪಿಕ್ ಚಿನ್ನದ ಪದಕ ವಿಜೇತ ಬಿಂದ್ರಾ, 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶದ ಅತ್ಯುನ್ನತ ಕ್ರೀಡಾ ಗೌರವ ರಾಜೀವ್ ಗಾಂಧಿ ಖೇಲ್ ರತ್ನ ಪಡೆದು ಇತಿಹಾಸ ನಿರ್ಮಿಸಿದರು.

SCROLL FOR NEXT