ಹರೇಂದ್ರ ಸಿಂಗ್ 
ಕ್ರೀಡೆ

ಅಮೆರಿಕಾ ಪುರುಷರ ತಂಡದ ಮುಖ್ಯ ಕೋಚ್ ಆಗಿ ಭಾರತದ ಹಿರಿಯ ಹಾಕಿ ತರಬೇತುದಾರ ಹರೇಂದ್ರ ಸಿಂಗ್ ಆಯ್ಕೆ

ಭಾರತದ ಮಾಜಿ ಹಾಕಿ ತರಬೇತುದಾರ ಹರೇಂದ್ರ ಸಿಂಗ್ ಅವರನ್ನು ಯುಎಸ್ ಪುರುಷರ ಹಾಕಿ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

ಕೊಲರಾಡೋ: ಭಾರತದ ಮಾಜಿ ಹಾಕಿ ತರಬೇತುದಾರ ಹರೇಂದ್ರ ಸಿಂಗ್ ಅವರನ್ನು ಯುಎಸ್ ಪುರುಷರ ಹಾಕಿ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

2012 ರಲ್ಲಿ ದ್ರೋಣಾಚಾರ್ಯ ಪ್ರಶಸ್ತಿ ಪಡೆದಿದ್ದ ಸಿಂಗ್, 2017 ರಿಂದ 2018 ರವರೆಗೆ ಭಾರತದ ಹಿರಿಯ ಪುರುಷರ ಹಾಕಿ ತಂಡದ ಮುಖ್ಯ ಕೋಚ್ ಆಗಿ ಸೇವೆ ಸಲ್ಲಿಸಿದರು. ಇದಕ್ಕೂ ಮುನ್ನ ಅವರು ಸ್ವಲ್ಪ ಸಮಯದವರೆಗೆ ಭಾರತೀಯ ಮಹಿಳಾ ತಂಡದ ಉಸ್ತುವಾರಿ ವಹಿಸಿದ್ದರು.

"ಯು.ಎಸ್. ಪುರುಷರ ರಾಷ್ಟ್ರೀಯ ತಂಡಕ್ಕೆ ತರಬೇತುದಾರರಾಗುವ ಈ ಉತ್ತಮ ಅವಕಾಶಕ್ಕಾಗಿ ಧನ್ಯವಾದಗಳು" ಎಂದು ಸಿಂಗ್ ಟೀಮ್ ಯುಎಸ್ಎ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಆಟಗಾರರಿಗೆ ಅವರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಕಂಡುಕೊಳ್ಳಲು ಸಾಧನಗಳನ್ನು ಒದಗಿಸುವ ನನ್ನ ಅನುಭವದೊಂದಿಗೆ ಈ ಪ್ರಯಾಣವನ್ನು ಪ್ರಾರಂಭಿಸಲು ನಾನು ಉತ್ಸುಕನಾಗಿದ್ದೇನೆ. " ಎಂದು ಅವರು ಹೇಳಿದರು. 

ಭಾರತೀಯ ಪುರುಷರ ತಂಡದೊಂದಿಗೆ ಸಿಂಗ್ ಅವರ ಮೊದಲ ಹುದ್ದೆ 2018 ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿದ್ದು ಮಸ್ಕತ್ ನ ಒಮನ್ ನಲ್ಲಿ ಅವರು ತಂಡವು ಚಿನ್ನದ ಪದಕ ಗೆಲ್ಲುವಂತೆ ಮಾಡಿದ್ದರು. ಭುವನೇಶ್ವರದಲ್ಲಿ ನಡೆದ 2018 ರ ಪುರುಷರ ವಿಶ್ವಕಪ್‌ನಲ್ಲಿ ಭಾರತವನ್ನು ಐದನೇ ಸ್ಥಾನಕ್ಕೆ ಕೊಂಡೊಯ್ದರು. 2018 ರ ಏಷ್ಯನ್ ಕ್ರೀಡಾಕೂಟದಲ್ಲಿ ಪುರುಷರ ತಂಡವು ಕಂಚಿನ ಪದಕ, 2018 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬೆಳ್ಳಿ ಪದಕ ಗೆದ್ದಿದೆ.

ಇದಲ್ಲದೆ 2017 ರ ಏಷ್ಯಾಕಪ್‌ನಲ್ಲಿ ಚಿನ್ನದ ಪದಕ ಗೆಲ್ಲಲು ಸಿಂಗ್ ಭಾರತೀಯ ಮಹಿಳಾ ತಂಡಕ್ಕೆ ಮಾರ್ಗದರ್ಶನ ನೀಡಿದ್ದರು. ಅವರು ದೇಶದ ಕಿರಿಯ ರಾಷ್ಟ್ರೀಯ ತಂಡಗಳಿಗೆ ತರಬೇತಿ ನೀಡುವ ವ್ಯಾಪಕ ಅನುಭವ ಹೊಂದಿದ್ದಾರೆ ಮತ್ತು 2016 ರ ಪುರುಷರ ಜೂನಿಯರ್ ವಿಶ್ವಕಪ್‌ನಲ್ಲಿ ಭಾರತವನ್ನು ಚಿನ್ನದ ಪದಕ ಗಳಿಸಲು ಮಾರ್ಗದರ್ಶಕರಾಗಿದ್ದರು. ಒಟ್ಟಾರೆಯಾಗಿ, ಸಿಂಗ್ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಪಂದ್ಯಾವಳಿಗಳಲ್ಲಿ ಎಂಟು ಚಿನ್ನದ ಪದಕಗಳು, ಐದು ಬೆಳ್ಳಿ ಮತ್ತು ಒಂಬತ್ತು ಕಂಚಿನ ಪದಕಗಳನ್ನು ಪಡೆದಿದ್ದಾರೆ ಮತ್ತು ಕಿರಿಯ ಮತ್ತು ಹಿರಿಯ ರಾಷ್ಟ್ರೀಯ ತಂಡಗಳ ನಡುವೆ 350 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಪಂದ್ಯಗಳಿಗೆ ತರಬೇತುದಾರರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT