Covid: India may miss Olympic qualifier relays 
ಕ್ರೀಡೆ

ಕೋವಿಡ್: ಭಾರತಕ್ಕೆ ಒಲಿಂಪಿಕ್ ಅರ್ಹತೆ ಕಲ್ಪಿಸುವ ವಿಶ್ವ ಅಥ್ಲೆಟಿಕ್ಸ್ ರಿಲೇ ಕನಸಿಗೂ ಕುತ್ತು!

ಭಾರತದಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಲಂಪಿಕ್ ಗೆ ಅರ್ಹತೆ ಕಲ್ಪಿಸುವ ವಿಶ್ವ ಅಥ್ಲೆಟಿಕ್ಸ್ ರಿಲೇ ಕನಸಿಗೂ ಕುತ್ತು ಬಂದಿದೆ. 

ನವದೆಹಲಿ: ಭಾರತದಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಲಂಪಿಕ್ ಗೆ ಅರ್ಹತೆ ಕಲ್ಪಿಸುವ ವಿಶ್ವ ಅಥ್ಲೆಟಿಕ್ಸ್ ರಿಲೇ ಕನಸಿಗೂ ಕುತ್ತು ಬಂದಿದೆ. 

ಪೋಲ್ಯಾಂಡ್ ನಲ್ಲಿ ಮೇ.1 ಹಾಗೂ 2 ರಂದು ವಿಶ್ವ ಅಥ್ಲೆಟಿಕ್ಸ್ ರಿಲೇ ನಡೆಯಲಿದ್ದು ಕೋವಿಡ್-19 ಹೆಚ್ಚಾಗುತ್ತಿರುವ ಕಾರಣದಿಂದಾಗಿ ಭಾರತದಿಂದ ಆಂಸ್ಟರ್ಡ್ಯಾಮ್ ಗೆ ವಿಮಾನ ಸಂಪರ್ಕ ಸ್ಥಗಿತಗೊಂಡಿದೆ. ಈ ಕಾರಣದಿಂದಾಗಿ ಸ್ಟಾರ್ ಅಥ್ಲೀಟ್ ಗಳಾದ ಹಿಮಾದಾಸ್ ಹಾಗೂ ಡುಟಿ ಚಂದ್ ಅವರು ಒಲಂಪಿಕ್ ಗೆ ಅರ್ಹತೆ ಕಲ್ಪಿಸುವ ಕ್ರೀಡಾ ಕೂಟದಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗುವುದಿಲ್ಲ. 

ಮಹಿಳೆಯರ 4x100m ಹಾಗೂ ಪುರುಷರ ವಿಭಾಗದ 4x400m ತಂಡಗಳು ಆಂಸ್ಟರ್ಡ್ಯಾಮ್ ಗೆ  ಕೆಎಲ್ಎಂ ವಿಮಾನದಲ್ಲಿ ಗುರುವಾರ ಬೆಳಗಿನ ಜಾವ  ತೆರಳಬೇಕಿತ್ತು. ಆದರೆ ಡಚ್ ಸರ್ಕಾರ ಭಾರತದಿಂದ ಬರುವ ವಿಮಾನಗಳನ್ನು ಸೋಮವಾರದ ಸಂಜೆಯಿಂದಲೇ ಸ್ಥಗಿತಗೊಳಿಸಿದೆ. 

ಭಾರತೀಯ ಅಥ್ಲೆಟಿಕ್ಸ್ ಫೆಡರೇಶನ್ ಪೋಲ್ಯಾಂಡ್ ಗೆ ತೆರಳುವುದಕ್ಕೆ ಯುರೋಪ್ ನ ಮೂಲಕ ಪರ್ಯಾಯ ವಿಮಾನ ವ್ಯವಸ್ಥೆ ಮಾಡುವುದಕ್ಕೆ ಯತ್ನಿಸುತ್ತಿದೆ. ನಮ್ಮ ತಂಡ  ಕ್ರೀಡಾ ಕೂಟದಲ್ಲಿ ಭಾಗವಹಿಸಲು ಸಾಧ್ಯವಾಗುವುದರ ಬಗ್ಗೆ ಅನುಮಾನಗಳಿವೆ, ಭಾರತದಿಂದ ವಿಮಾನಗಳನ್ನು ಹಲವಾರು ಯುರೋಪಿಯನ್ ರಾಷ್ಟ್ರಗಳು ನಿರ್ಬಂಧಿಸಿವೆ.  ಆದ್ದರಿಂದ ಭಾರತೀಯ ತಂಡ ಭಾಗವಹಿಸುವುದು ಅನುಮಾನವಾಗಿದೆ ಎಂದು ಹಿರಿಯ ಎಎಫ್ಐ ಅಧಿಕಾರಿಯೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT