ಟೋಕಿಯೊದಲ್ಲಿ ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದ ದೃಶ್ಯ 
ಕ್ರೀಡೆ

ಭಾರತದ ಬಾಕ್ಸರ್ ಸತೀಶ್ ಕುಮಾರ್ ಕ್ವಾರ್ಟರ್ ಫೈನಲ್ ನಲ್ಲಿ ನಿರ್ಗಮನ, ಉಜ್ಬೇಕಿಸ್ತಾನದ ಬಖೋದಿರ್ ಜಲೋವ್ ವಿರುದ್ಧ ಸೋಲು 

ಭರವಸೆ ಮೂಡಿಸಿದ್ದ ಭಾರತದ ಬಾಕ್ಸರ್ ಸತೀಶ್ ಕುಮಾರ್ 91 ಕೆಜಿ ಬಾಕ್ಸಿಂಗ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ್ದಾರೆ.

ಟೋಕಿಯೊ:ಭರವಸೆ ಮೂಡಿಸಿದ್ದ ಭಾರತದ ಬಾಕ್ಸರ್ ಸತೀಶ್ ಕುಮಾರ್ 91 ಕೆಜಿ ಬಾಕ್ಸಿಂಗ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನುಭವಿಸಿದ್ದಾರೆ.

ಭಾನುವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್ 1 ಬಾಕ್ಸರ್ ಉಜ್ಬೇಕಿಸ್ತಾನದ ಬಖೋದಿರ್ ಜಲೋವ್ ವಿರುದ್ಧ ಸತೀಶ್ ಕುಮಾರ್ 0-5 ಅಂತರದಿಂದ ಸೋಲು ಕಂಡು ಆಟದಿಂದ ನಿರ್ಗಮಿಸಿದ್ದಾರೆ.

ಭಾರತದ ಹೆವಿವೇಟ್ ಬಾಕ್ಸರ್ ಸತೀಶ್ ಕುಮಾರ್ ಅವರಿಗೆ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ತಲೆಗೆ ತೀವ್ರ ಗಾಯವಾಗಿ ಹೊಲಿಗೆ ಹಾಕಲಾಗಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾಗವಹಿಸುವುದು ಅನುಮಾನವಾಗಿತ್ತು. ಆದರೆ ವೈದ್ಯರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಇಂದಿನ ಪಂದ್ಯದಲ್ಲಿ ಕೊನೆ ಕ್ಷಣದಲ್ಲಿ ಭಾಗವಹಿಸುವ ನಿರ್ಧಾರ ಕೈಗೊಂಡರು.

ಇದು ಸತೀಶ್ ಕುಮಾರ್ ಗೆ ಚೊಚ್ಚಲ ಒಲಿಂಪಿಕ್ ಗೇಮ್. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT