ಭಾರತ ಮಹಿಳಾ ಹಾಕಿ ತಂಡ 
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್‌ಗೆ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರ ಅಭಿನಂದನೆ

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳೆಯರ ಹಾಕಿ ತಂಡವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ. 

ಬೆಂಗಳೂರು: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳೆಯರ ಹಾಕಿ ತಂಡವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ. 

ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 1-0 ಅಂತರ ಗೋಲುಗಳಿಂದ ಮಣಿಸಿ ಭಾರತ ಮಹಿಳೆಯರ ಹಾಕಿ ತಂಡ ಸೆಮಿಫೈನಲ್ ಗೆ ಪ್ರವೇಶಿಸಿದೆ. ಭಾರತ ಮಹಿಳೆಯರ ಹಾಕಿ ತಂಡದ ಈ ಅಭೂತಪೂರ್ವ ಸಾಧನೆಗೆ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದನೆ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಒಲಂಪಿಕ್ಸ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಸೆಮಿಫೈನಲ್ ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತೀಯ ಮಹಿಳಾ ಹಾಕಿ ತಂಡದ ಎಲ್ಲ ಪ್ರತಿಭಾನ್ವಿತ ಹೆಣ್ಣು ಮಕ್ಕಳಿಗೆ ನಾನು ಹೃತ್ಪೂರ್ವಕವಾಗಿ ಅಭಿನಂದಿಸುವೆ. ಟೋಕಿಯೋ ಒಲಿಂಪಿಕ್ಸ್ ಭಾರತೀಯರಿಗೆ ನಿಜಕ್ಕೂ ಸ್ಮರಣೀಯ ಎಂದು ಟ್ವೀಟಿಸಿದ್ದಾರೆ.

ಇನ್ನು ನಿನ್ನೆ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ಪುರುಷರ ಹಾಕಿ ತಂಡ ಗ್ರೇಟ್ ಬ್ರಿಟನ್ ವಿರುದ್ಧ 3-1 ಗೋಲುಗಳಿಂದ ಮಣಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಈ ವೇಳೆ ಟ್ವೀಟ್ ಮಾಡಿ ಅಭಿನಂದಿಸಿದ್ದ ರಾಜ್ಯಪಾಲರು ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದ ಪುರುಷರ ಹಾಕಿ ವಿಭಾಗದಲ್ಲಿ ಕ್ವಾರ್ಟರ್‌ಫೈನಲ್ ನಲ್ಲಿ ಗೆಲುವು ಸಾಧಿಸಿ, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ ತಂಡಕ್ಕೆ ಹೃದಯ ಪೂರ್ವಕ ಅಭಿನಂದನೆಗಳು. ಭಾರತ ತಂಡವು ಅಂತಿಮ ಪಂದ್ಯದಲ್ಲಿ ಗೆದ್ದು, ಕ್ರೀಡಾ ಲೋಕದಲ್ಲಿ ಭಾರತದ ಕೀರ್ತಿ ಪತಾಕೆ ಎತ್ತಿ ಹಿಡಿಯಲಿ ಎಂದು ಎಲ್ಲಾ ಭಾರತೀಯರ ಪರವಾಗಿ ಆಶಿಸುತ್ತೇನೆ ಎಂದು ಟ್ವೀಟಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT