ಭಾರತ ಮಹಿಳಾ ಹಾಕಿ ತಂಡ 
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್‌ಗೆ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರ ಅಭಿನಂದನೆ

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳೆಯರ ಹಾಕಿ ತಂಡವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ. 

ಬೆಂಗಳೂರು: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳೆಯರ ಹಾಕಿ ತಂಡವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ. 

ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 1-0 ಅಂತರ ಗೋಲುಗಳಿಂದ ಮಣಿಸಿ ಭಾರತ ಮಹಿಳೆಯರ ಹಾಕಿ ತಂಡ ಸೆಮಿಫೈನಲ್ ಗೆ ಪ್ರವೇಶಿಸಿದೆ. ಭಾರತ ಮಹಿಳೆಯರ ಹಾಕಿ ತಂಡದ ಈ ಅಭೂತಪೂರ್ವ ಸಾಧನೆಗೆ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದನೆ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಒಲಂಪಿಕ್ಸ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಸೆಮಿಫೈನಲ್ ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತೀಯ ಮಹಿಳಾ ಹಾಕಿ ತಂಡದ ಎಲ್ಲ ಪ್ರತಿಭಾನ್ವಿತ ಹೆಣ್ಣು ಮಕ್ಕಳಿಗೆ ನಾನು ಹೃತ್ಪೂರ್ವಕವಾಗಿ ಅಭಿನಂದಿಸುವೆ. ಟೋಕಿಯೋ ಒಲಿಂಪಿಕ್ಸ್ ಭಾರತೀಯರಿಗೆ ನಿಜಕ್ಕೂ ಸ್ಮರಣೀಯ ಎಂದು ಟ್ವೀಟಿಸಿದ್ದಾರೆ.

ಇನ್ನು ನಿನ್ನೆ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ಪುರುಷರ ಹಾಕಿ ತಂಡ ಗ್ರೇಟ್ ಬ್ರಿಟನ್ ವಿರುದ್ಧ 3-1 ಗೋಲುಗಳಿಂದ ಮಣಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಈ ವೇಳೆ ಟ್ವೀಟ್ ಮಾಡಿ ಅಭಿನಂದಿಸಿದ್ದ ರಾಜ್ಯಪಾಲರು ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದ ಪುರುಷರ ಹಾಕಿ ವಿಭಾಗದಲ್ಲಿ ಕ್ವಾರ್ಟರ್‌ಫೈನಲ್ ನಲ್ಲಿ ಗೆಲುವು ಸಾಧಿಸಿ, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ ತಂಡಕ್ಕೆ ಹೃದಯ ಪೂರ್ವಕ ಅಭಿನಂದನೆಗಳು. ಭಾರತ ತಂಡವು ಅಂತಿಮ ಪಂದ್ಯದಲ್ಲಿ ಗೆದ್ದು, ಕ್ರೀಡಾ ಲೋಕದಲ್ಲಿ ಭಾರತದ ಕೀರ್ತಿ ಪತಾಕೆ ಎತ್ತಿ ಹಿಡಿಯಲಿ ಎಂದು ಎಲ್ಲಾ ಭಾರತೀಯರ ಪರವಾಗಿ ಆಶಿಸುತ್ತೇನೆ ಎಂದು ಟ್ವೀಟಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ...

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

SCROLL FOR NEXT