ರವಿ ದಹಿಯಾ 
ಕ್ರೀಡೆ

ಬೆಳ್ಳಿ ಪದಕ ವಿಜೇತ ರವಿಕುಮಾರ್ ದಹಿಯಾಗೆ 4 ಕೋಟಿ ನಗದು ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಕೊರಳೇರಿಸಿಕೊಂಡ ಕುಸ್ತಿಪಟು ರವಿಕುಮಾರ್ ದಹಿಯಾಗೆ ಹರಿಯಾಣ ಸರ್ಕಾರ ಭಾರಿ ಬಹುಮಾನ ಘೋಷಿಸಿದೆ.

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಕೊರಳೇರಿಸಿಕೊಂಡ ಕುಸ್ತಿಪಟು ರವಿಕುಮಾರ್ ದಹಿಯಾಗೆ ಹರಿಯಾಣ ಸರ್ಕಾರ ಭಾರಿ ಬಹುಮಾನ ಘೋಷಿಸಿದೆ.  

ತಮ್ಮ ರಾಜ್ಯದವರಾದ ರವಿಕುಮಾರ್ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಸಂದರ್ಭದಲ್ಲಿ ಅವರಿಗೆ 4 ಕೋಟಿ ರೂಪಾಯಿ ನಗದು ಬಹುಮಾನ. ಕ್ಲಾಸ್‌ 1 ದರ್ಜೆಯ ಉದ್ಯೋಗ ನೀಡಲಾಗುವುದು ಸರ್ಕಾರ ಪ್ರಕಟಿಸಿದೆ.    

ರಾಜ್ಯದ ಯಾವುದೇ ಭಾಗದಲ್ಲಿ ಶೇ. 50ರಷ್ಟು ರಿಯಾಯಿತಿಯೊಂದಿಗೆ ಒಂದು ಪ್ಲಾಟ್ ನೀಡಲಾಗುವುದು ಎಂದು ಘೋಷಿಸಿದೆ. ಅಲ್ಲದೆ, ರವಿ ಅವರ ಗ್ರಾಮ ನಹ್ರಿಯಲ್ಲಿ ಕುಸ್ತಿ ತರಬೇತಿಗಾಗಿ ಒಳಾಂಗಣ ಕ್ರೀಡಾಂಗಣ ನಿರ್ಮಿಸುವುದಾಗಿ ಹರಿಯಾಣ ಸರ್ಕಾರ ಹೇಳಿದೆ.

ರಜತ ಪದಕ ವಿಜೇತ ರವಿ ಕುಮಾರ್ ದಹಿಯಾ ಅವರ ಸಾಧನೆಗೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ದಹಿಯಾ ಅವರ ಸಾಧನೆ ನೋಡಿ ದೇಶ ಹೆಮ್ಮೆಪಡುತ್ತಿದೆ ಎಂದು ಕೊಂಡಾಡಿದ್ದಾರೆ. ಕಠಿಣ ಪರಿಸ್ಥಿತಿಯಲ್ಲಿ ದೇಶಕ್ಕಾಗಿ ಪದಕ  ಗೆದ್ದು ತಂದ ನಿಜವಾದ ಚಾಂಪಿಯನ್ ಆಗಿದ್ದೀರಿ ಎಂದು ರಾಷ್ಟ್ರಪತಿ ಕೊಂಡಾಡಿದ್ದಾರೆ.

ರವಿಕುಮಾರ್ ದಹಿಯಾ ಅದ್ಭುತ ಕುಸ್ತಿಪಟು ಎಂದು ಪ್ರಧಾನಿ ಕೊಂಡಾಡಿದ್ದು, ಅವರ  ಸ್ಫೂರ್ತಿದಾಯಕ ಪ್ರದರ್ಶನ   ಮಹತ್ವದ್ದು ಎಂದು ಉಲ್ಲೇಖಿಸಿದ್ದಾರೆ. ಬೆಳ್ಳಿ ಗೆದ್ದ ರವಿ ಅವರಿಗೆ ಸೆಲೆಬ್ರಿಟಿಗಳು ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Hormuz ಜಲಸಂಧಿಯಲ್ಲಿ ಮಹಾ ಸಂಘರ್ಷ: Iran 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ; 'ಕಠಿಣ ಪ್ರತೀಕಾರ'ದ ಶಪಥ ಮಾಡಿದ ಟೆಹ್ರಾನ್!

Bigg Boss Kannada 13: ದೊಡ್ಮನೆಗೆ ಬರೋ ಕಂಟೆಸ್ಟೆಂಟ್‌ಗಳು ಇವರೇ ನೋಡಿ!

100 ದಿನಗಳ ಹೊಸ್ತಿಲಲ್ಲಿ ಡಿಕೆಶಿ ಸರ್ಕಾರ: ಸಾಧನೆಗಳ ಪಟ್ಟಿ ಹಿಡಿದು ಕಾಂಗ್ರೆಸ್ ಅಖಾಡಕ್ಕೆ, ‘ಯು-ಟರ್ನ್’ ಅಸ್ತ್ರದೊಂದಿಗೆ ವಿಪಕ್ಷಗಳ ಕೌಂಟರ್‌..!

ಖಾಸಗಿ ವಲಯಕ್ಕೆ ಪ್ರಮುಖ ಕಾರ್ಯಗಳ ವರ್ಗಾವಣೆ: ವರದಿಗಳ ಬಗ್ಗೆ ಸ್ಪಷ್ಟನೆಗೆ 9 ಇಸ್ರೋ ಉದ್ಯೋಗಿ ಸಂಘಗಳ ಒತ್ತಾಯ!

ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ SBI Good News : 12,000 ಸಿಬ್ಬಂದಿ ನೇಮಕ, 250 ಶಾಖೆ ತೆರೆಯುವುದಾಗಿ ಘೋಷಣೆ