ಕ್ರೀಡೆ

ತಂಡದಲ್ಲಿ ಹೆಚ್ಚು ದಲಿತ ಆಟಗಾರರಿದ್ದರು ಆದ್ದರಿಂದ ಭಾರತಕ್ಕೆ ಸೋಲು: ಹಾಕಿ ತಾರೆಯ ಬಗ್ಗೆ ಜಾತಿ ನಿಂದನೆ!

ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡ ಸೆಮಿ ಫೈನಲ್ ನಲ್ಲಿ ಪರಾಭವಗೊಂಡ ಬೆನ್ನಲ್ಲೇ ಕೆಲವು ಕಿಡಿಗೇಡಿಗಳು ಸ್ಟಾರ್ ಸ್ಟ್ರೈಕರ್ ವಂದನಾ ಕಟಾರಿಯಾ ಅವರ ನಿವಾಸದೆದುರು ಜಾತಿಗೆ ಸಂಬಂಧಿಸಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ.

ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡ ಸೆಮಿ ಫೈನಲ್ ನಲ್ಲಿ ಪರಾಭವಗೊಂಡ ಬೆನ್ನಲ್ಲೇ ಕೆಲವು ಕಿಡಿಗೇಡಿಗಳು ಸ್ಟಾರ್ ಸ್ಟ್ರೈಕರ್ ವಂದನಾ ಕಟಾರಿಯಾ ಅವರ ನಿವಾಸದೆದುರು ಜಾತಿಗೆ ಸಂಬಂಧಿಸಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. 

ಮೇಲ್ವರ್ಗದ ಇಬ್ಬರು ವ್ಯಕ್ತಿಗಳು ಹರಿದ್ವಾರದ ರೋಷ್ನಾಬಾದ್ ಗ್ರಾಮದಲ್ಲಿನ ವಂದನಾ ಕಟಾರಿಯಾ ಅವರ ನಿವಾಸದ ಎದುರು ನಿಂತು ಜಾತಿಯ ನಿಂದನೆ ಮಾಡಿದ್ದಾರೆ. 

ವಂದನಾ ಕಟಾರಿಯಾ ಕುಟುಂಬ ಸದಸ್ಯರನ್ನು ಅವಹೇಳನ ಮಾಡುವುದಕ್ಕೆ ನಿಂತ ಕಿಡಿಗೇಡಿಗಳು ಪಟಾಕಿ ಹೊಡೆದು ಅವರನ್ನು ಟೀಕಿಸಿದ್ದಾರೆ. 

ವಂದನಾ ಅವರ ಕುಟುಂಬ ಸದಸ್ಯರು ನೀಡಿರುವ ಮಾಹಿತಿಯ ಪ್ರಕಾರ, "ಭಾರತದ ಸೋಲಿಗೆ ಮಹಿಳಾ ತಂಡದಲ್ಲಿ ಹೆಚ್ಚು ಮಂದಿ ದಲಿತ ಆಟಗಾರರು ಇದ್ದಿದ್ದೇ ಕಾರಣ" ಎಂದು ಹೇಳಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ವರದಿಗಳ ಪ್ರಕಾರ, ಈ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. 

ವಂದನಾ ಅವರ ಸಹೋದರ ಶೇಖರ್ ಮಾತನಾಡಿ, " ಸೋಲಿನಿಂದ ಬೇಸರಗೊಂಡಿದ್ದೆವು, ಆದರೆ ತಂಡ ಉತ್ತಮ ಹೋರಟ ನಡೆಸಿತ್ತು. ಆ ಬಗ್ಗೆ ನಮಗೆ ಹೆಮ್ಮೆ ಇದೆ. ಆದರೆ ಪಂದ್ಯದ ಬೆನ್ನಲ್ಲೇ ಜೋರು ಧ್ವನಿಗಳು ನಮಗೆ ಕೇಳಿಸಿತು. ನಮ್ಮ ಮನೆಯ ಎದುರು ಪಟಾಕಿ ಹೊಡೆಯಲಾಗುತ್ತಿತ್ತು. ನಾವು ಹೊರಗೆ ಹೋಗಿ ನೋಡುತ್ತಿದ್ದಂತೆಯೇ ನಮ್ಮದೇ ಗ್ರಾಮದಲ್ಲಿರುವ ಮೇಲ್ವರ್ಗದ ಇಬ್ಬರು ವ್ಯಕ್ತಿಗಳು ನಮ್ಮ ಮನೆಯ ಮುಂದೆ ಕುಣಿಯುತ್ತಿದ್ದರು. ವಂದನಾ ಅವರ ಕುಟುಂಬ ಸದಸ್ಯರು ಆಚೆ ಬರುತ್ತಿದ್ದಂತೆಯೇ ಜಾತಿ ನಿಂದನೆ ಪ್ರಾರಂಭಿಸಿದರು. ಈ ಸಂಬಂಧ ಶೇಖರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. "ದಲಿತರು ಹೆಚ್ಚಾಗಿದ್ದ ಕಾರಣ ಹಾಕಿ ತಂಡ ಸೋತಿತು, ಹಾಕಿಯಷ್ಟೇ ಅಲ್ಲದೇ, ಎಲ್ಲಾ ಕ್ರೀಡೆಗಳಿಂದಲೂ ದಲಿತರನ್ನು ದೂರ ಇಡಬೇಕು ಎಂದು ಹೇಳಿ ಬಟ್ಟೆ ತೆಗೆದು ಕುಣಿಯಲು ಪ್ರಾರಂಭಿಸಿದರು, ಅದು ಜಾತಿ ನಿಂದನೆಯಾಗಿತ್ತು" ಎಂದು ದೂರಿನಲ್ಲಿ ಆರೋಪಿಸಲಾಗಿದೆ. 

ದೂರಿನ ಆಧಾರದಲ್ಲಿ ಎಫ್ಐಆರ್ ನ್ನು ಇನ್ನಷ್ಟೇ ದಾಖಲಿಸಬೇಕಿದೆ. ಎಸ್ ಹೆಚ್ ಒ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಕರಣದ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ದೂರು ಸ್ವೀಕರಿಸಲಾಗಿದ್ದು ತನಿಖೆಗೆ ಆದೇಶಿಸಿದ್ದೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?