ರವಿ ದಹಿಯಾ 
ಕ್ರೀಡೆ

ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿಕುಮಾರ್ ದಹಿಯಾ

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪುರುಷರ ಫ್ರೀಸ್ಟೈಲ್ 57 ಕೆಜಿ ಫೈನಲ್‌ನಲ್ಲಿ ಕುಸ್ತಿಪಟು ರವಿ ದಹಿಯಾ ಆರ್‌ಒಸಿಯ ಜಾವೂರ್ ಉಗೆವ್ ವಿರುದ್ಧ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿರು. 

ಟೋಕಿಯೊ: ಚಿನ್ನದ ಪದಕದ ಕನಸು ಹೆಚ್ಚಿಸಿದ ಭಾರತದ ಸ್ಟಾರ್ ಕುಸ್ತಿ ಪಟು ರವಿಕುಮಾರ್ ದಹಿಯಾ ಅವರು ಟೋಕಿಯೊ ಒಲಿಂಪಿಕ್ಸ್ ಕ್ರೀಡಾ ಕೂಟದ ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದು, ರಜತ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಗುರುವಾರ ನಡೆದ ಚಿನ್ನದ ಪದಕದ ಕಾದಾಟದಲ್ಲಿ ರವಿಕುಮಾರ್ 4-7 ರಿಂದ ರಷ್ಯಾದ ಒಲಿಂಪಿಕ್ ಸಮಿತಿಯ ಜಾವೂರ್ ಯುಗೆವ್ ವಿರುದ್ಧ ಸೋಲು ಕಂಡರು. ಅಲ್ಲದೆ ರಜತ ಪದಕವನ್ನು ತಮ್ಮದಾಗಿಸಿಕೊಂಡರು.

ರವಿ ಅವರ ಈ ಸಾಧನೆಯಿಂದ ಭಾರತ ಕ್ರೀಡಾ ಕೂಟದಲ್ಲಿ ಎರಡನೇ ಬೆಳ್ಳಿ ಪದಕ ಗೆದ್ದು ಕೊಂಡಿದೆ. ರವಿ ಅವರು ಈ ಬೆಳ್ಳಿಯೊಂದಿಗೆ ಲಂಡನ್ ಒಲಿಂಪಿಕ್ ಬೆಳ್ಳಿ ವಿಜೇತ ಸುಶೀಲ್ ಕುಮಾರ್ ಸಾಧನೆಯನ್ನು ಸರಿಗಟ್ಟಿದರು ಆದರೆ 2008ರ ಒಲಿಂಪಿಕ್ಸ್ ನಲ್ಲಿ ಅಭಿನವ್ ಬಿಂದ್ರಾ ಅವರ ಚಿನ್ನದ ಪದಕ ಗೆದ್ದ ಸಾಧನೆಯನ್ನು ಸರಿಗಟ್ಟಲು ಸಾಧ್ಯವಾಗಲಿಲ್ಲ.

ಭಾರತೀಯ ಕುಸ್ತಿಪಟು ರವಿ ಯುಗೇವ್ ವಿರುದ್ಧ ಎಚ್ಚರಿಕೆಯಿಂದ ಆಟ ಆರಂಭಿಸಿದರು ಆದರೆ ರಷ್ಯಾದ ಕುಸ್ತಿಪಟು ಮೊದಲ ಎರಡು ಅಂಕಗಳನ್ನು ಗಳಿಸುವಲ್ಲಿ ಯಶಸ್ವಿಯಾದರು. ರವಿ ಮರಳಿ ಎರಡು ಅಂಕಗಳನ್ನು ಪಡೆದು ಪಂದ್ಯವನ್ನು 2-2ರಲ್ಲಿ ಸಮಬಲಗೊಳಿಸಿದರು.

ಯುಗಾವ್ ಎರಡು ಅಂಕಗಳನ್ನು ಪಡೆದು 7-4ರ ಮುನ್ನಡೆ ಸಾಧಿಸಿದರು. ಪಟುದೇಳಲು ರವಿ ತನ್ನ ಅತ್ಯುತ್ತಮ ಪ್ರಯತ್ನ ಮಾಡಿದರು ಆದರೆ ಯುಗೇವ್ ತನ್ನ ರಕ್ಷಣೆಯನ್ನು ಬಲವಾಗಿ ಇಟ್ಟುಕೊಂಡರು. ಮತ್ತು ರವಿಗೆ ಅಂಕಗಳನ್ನು ನೀಡಲಿಲ್ಲ. ಪಂದ್ಯದ ಕೊನೆಯಲ್ಲಿ, ರಷ್ಯಾದ ಕುಸ್ತಿಪಟು ಚಿನ್ನದ ಪದಕವನ್ನು ಗೆದ್ದರು ಮತ್ತು ರವಿ ತನ್ನ ಚೊಚ್ಚಲ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಡಬೇಕಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT