ಪ್ರಧಾನಿ ಮೋದಿ, ಮಹಿಳಾ ಹಾಕಿ ತಂಡ 
ಕ್ರೀಡೆ

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಮಾತನಾಡುವಾಗ ಕಣ್ಣೀರಿಟ್ಟ ಭಾರತೀಯ ಮಹಿಳಾ ಹಾಕಿ ತಂಡ- ವಿಡಿಯೋ

ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕದಿಂದ ವಂಚಿತರಾದ ಭಾರತೀಯ ಮಹಿಳಾ ಹಾಕಿ ತಂಡ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡುವಾಗ ಕಣ್ಣೀರಿಟ್ಟಿದ್ದಾರೆ.  ಸ್ಫೂರ್ತಿದಾಯಕ ಪ್ರದರ್ಶನಕ್ಕಾಗಿ ತಂಡವನ್ನು ಶ್ಲಾಘಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಆಟಗಾರ್ತಿಯರನ್ನು ಪ್ರೋತ್ಸಾಹಿಸಿದ್ದಾರೆ.

ನವದೆಹಲಿ: ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕದಿಂದ ವಂಚಿತರಾದ ಭಾರತೀಯ ಮಹಿಳಾ ಹಾಕಿ ತಂಡ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡುವಾಗ ಕಣ್ಣೀರಿಟ್ಟಿದ್ದಾರೆ. ಸ್ಫೂರ್ತಿದಾಯಕ ಪ್ರದರ್ಶನಕ್ಕಾಗಿ ತಂಡವನ್ನು ಶ್ಲಾಘಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಆಟಗಾರ್ತಿಯರನ್ನು ಪ್ರೋತ್ಸಾಹಿಸಿದರು.

ಟೋಕಿಯೊದಲ್ಲಿ ಶುಕ್ರವಾರ ನಡೆದ ಕಂಚಿನ ಪದಕದ ಪ್ಲೇ-ಆಫ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ವಿರುದ್ಧ 3-4 ಅಂತರದಲ್ಲಿ ಸೋತ ನಂತರ ಪ್ರಧಾನಿ ನರೇಂದ್ರ ಮೋದಿ ಫೋನ್ ಮೂಲಕ ತಂಡದೊಂದಿಗೆ ಮಾತನಾಡಿದರು. ನಿಜವಾಗಿಯೂ ಎಲ್ಲರೂ ಚೆನ್ನಾಗಿ ಆಡಿದ್ದೀರಿ.  ಕಳೆದ ಐದು ವರ್ಷಗಳಲ್ಲಿ  ಎಲ್ಲವನ್ನೂ ಬಿಟ್ಟು, ಕ್ರೀಡೆಗಾಗಿ ಬೆವರು ಸುರಿಸಿದ್ದೀರಿ. ನಿಮ್ಮ ಕಠಿಣ ಪರಿಶ್ರಮ ಮತ್ತು ಬೆವರಿನಿಂದ ಪದಕ ಪಡೆಯಲು ಆಗಲಿಲ್ಲ  ಆದರೆ ಇದು ದೇಶದ ಕೋಟ್ಯಂತರ ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಿದ್ದೀರಿ. ತರಬೇತುದಾರ ಹಾಗೂ ಎಲ್ಲರನ್ನು ಅಭಿನಂದಿಸುವುದಾಗಿ ಪ್ರಧಾನಿ ಮೋದಿ ಹೇಳಿದರು.

ತಂಡದ ಪ್ರಯತ್ನವನ್ನು ಮೋದಿ ಶ್ಲಾಘಿಸಿದ್ದರಿಂದ ಆಟಗಾರರು ಕಣ್ಣೀರನ್ನು ತಡೆಯಲು ಆಗಲಿಲ್ಲ. ವಂದನಾ ಕಟಾರಿಯಾ ಮತ್ತು ಸಲೀಮಾ ಟೆಟೆ ಅವರ ಕಾರ್ಯಕ್ಷಮತೆಯನ್ನು ಮೋದಿ ಕೊಂಡಾಡಿದರು. ವಂದನಾ ಸೇರಿದಂತೆ ಪ್ರತಿಯೊಬ್ಬರು ಉತ್ತಮ ಪ್ರದರ್ಶನ ತೋರಿದ್ದೀರಿ. ಸಲೀಮಾ ಸೇರಿದಂತೆ ಪ್ರತಿಯೊಬ್ಬರು ಬ್ರಿಲಿಯಂಟ್ ಎಂದು ಹೇಳಿದ ಮೋದಿ, ಧೀರ್ಘ ಮೌನದ ನಂತರ ಅಳದಂತೆ ಆಟಗಾರರಿಗೆ ಹೇಳಿದರು.  ನಿಮ್ಮ ಬಗ್ಗೆ ಇಡೀ ದೇಶ ಹೆಮ್ಮೆ ಪಡುತ್ತಿದೆ. ಅಳುವುದನ್ನು ನಿಲ್ಲಿಸಿ, ನಿಮ್ಮ ಪ್ರಯತ್ನದಿಂದ ಹಲವು ವರ್ಷಗಳ ನಂತರ ಭಾರತದ ಹಾಕಿಗೆ ಮಾನ್ಯತೆ ಸಿಕ್ಕಿದೆ ಎಂದು ಹೇಳುವ ಮೂಲಕ ಪ್ರಧಾನಿ ಆತ್ಮಸ್ಥೈರ್ಯ ಮೂಡಿಸಿದರು.

ಪಂದ್ಯದ ವೇಳೆ ಗಾಯಗೊಂಡಿದ್ದ ನವ್ ನೀತ್ ಕೌರ್ ಬಗ್ಗೆಯೂ ಪ್ರಧಾನಿ ವಿಚಾರಿಸಿದರು. ಪ್ರೋತ್ಸಾಹಕ್ಕಾಗಿ ಪ್ರಧಾನಿ ಮೋದಿಗೆ ನಾಯಕಿ ರಾಣಿ ರಾಂಪಲ್ ಧನ್ಯವಾದ ಸಲ್ಲಿಸಿದರು. ಮುಖ್ಯ ತರಬೇತುದಾರ ಸ್ಜೊರ್ಡ್ ಮರಿಜ್ನೆ ಅವರ ಪ್ರಯತ್ನಗಳನ್ನು ಸಹ ಪ್ರಧಾನಿ ಮೋದಿ ಶ್ಲಾಘಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT