ಒಡಿಶಾ ಸರ್ಕಾರದಿಂದ 10 ವರ್ಷ ಹಾಕಿ ಪ್ರಾಯೋಜಕತ್ವ 
ಕ್ರೀಡೆ

ಟೋಕಿಯೊ ಒಲಂಪಿಕ್ಸ್ ಯಶಸ್ಸು: ಭಾರತ ಹಾಕಿ ತಂಡಕ್ಕೆ ಮತ್ತೆ 10 ವರ್ಷಗಳ ಕಾಲ ಒಡಿಶಾ ಸರ್ಕಾರ ಪ್ರಾಯೋಜಕತ್ವ

ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು ಯಶಸ್ಸು ಸಾಧಿಸಿದ್ದು, ಈ ಯಶಸ್ಸಿನ ಬೆನ್ನಲ್ಲೇ ಒಡಿಶಾ ಸರ್ಕಾರ ಇನ್ನು 10 ವರ್ಷಗಳ ಕಾಲ ಪ್ರಾಯೋಜಕತ್ವ ವಿಸ್ತರಿಸಲು ನಿರ್ಧರಿಸಿದೆ.

ಭುವನೇಶ್ವರ: ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳು ಯಶಸ್ಸು ಸಾಧಿಸಿದ್ದು, ಈ ಯಶಸ್ಸಿನ ಬೆನ್ನಲ್ಲೇ ಒಡಿಶಾ ಸರ್ಕಾರ ಇನ್ನು 10 ವರ್ಷಗಳ ಕಾಲ ಪ್ರಾಯೋಜಕತ್ವ ವಿಸ್ತರಿಸಲು ನಿರ್ಧರಿಸಿದೆ.

ಈ ಕುರಿತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮಂಗಳವಾರ ಘೋಷಣೆ ಮಾಡಿದ್ದು, ಸದ್ಯ ಪ್ರಾಯೋಜಕತ್ವದ ಅವಧಿ 2023ರವರೆಗೂ ಇದ್ದು, ಅಲ್ಲಿಂದ 10 ವರ್ಷಗಳ ಕಾಲ ಪ್ರಾಯೋಜಕತ್ವ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಹಾಕಿ ಇಂಡಿಯಾ ಜತೆಗಿನ ಒಪ್ಪಂದವನ್ನು ಮುಂದುವರಿಸಲಿದ್ದು,  ಭಾರತ ಪುರುಷರ ಹಾಗೂ ಮಹಿಳಾ ಹಾಕಿ ತಂಡಗಳ ಆಟಗಾರರನ್ನು ಸನ್ಮಾನಿಸಿ ಮಾತನಾಡಿದ ಅವರು, ಹಾಕಿಯಲ್ಲಿ ಗತವೈಭವ ಮರುಕಳಿಸಬೇಕು ಎಂದು ಹಾರೈಸಿದರು.

ಸನ್ಮಾನ ಸಮಾರಂಭಕ್ಕೂ ಮುನ್ನ ಮೊದಲು ಎರಡು ತಂಡಗಳಿಗೂ ಭರ್ಜರಿ ಸ್ವಾಗತ ನೀಡಲಾಯಿತು. ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಿಂದ ಹೋಟೆಲ್‌ವರೆಗೂ ಆಟಗಾರರನ್ನು ಮೆರವಣಿಗೆ ಮೂಲಕ ಕರೆತರಲಾಯಿತು. ಒಡಿಶಾ ಸರ್ಕಾರ 2018ರ ಫೆಬ್ರವರಿಯಿಂದ ಎರಡು ತಂಡಗಳಿಗೆ  ಪ್ರಾಯೋಜಕತ್ವ ವಹಿಸಿಕೊಂಡಿದೆ. ಐದು ವರ್ಷಗಳಿಗೆ ಅವಧಿಗೆ 140 ಕೋಟಿ ರೂಪಾಯಿಗೆ ಹಾಕಿ ಇಂಡಿಯಾ ಜತೆ ಒಪ್ಪಂದ ಮಾಡಿಕೊಂಡಿತ್ತು. ಒಲಿಂಪಿಕ್ಸ್‌ನಲ್ಲಿ 41 ವರ್ಷಗಳ ಬಳಿಕ ಭಾರತ ಪುರುಷರ ಹಾಕಿ ತಂಡ ಕಂಚಿನ ಪದಕ ಜಯಿಸಿ ಐತಿಹಾಸಿಕ ಸಾಧನೆ ಮಾಡಿದರೆ, ಮಹಿಳಾ ತಂಡ 4ನೇ ಸ್ಥಾನ  ಪಡೆದಿತ್ತು.

ಇದರ ಬೆನ್ನಲ್ಲೇ ಎರಡು ತಂಡಗಳ ಆಟಗಾರರಿಗೆ ನವೀನ್ ಪಟ್ನಾಯಕ್ ತಲಾ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡಿದರೆ, ತಂಡದ ಸಹಾಯಕ ಸಿಬ್ಬಂದಿಗೆ ತಲಾ 5 ಲಕ್ಷ ರೂಪಾಯಿ ನೀಡಿದರು. ಅಲ್ಲದೆ, ಹಾಕಿ ಇಂಡಿಯಾಗೆ 50 ಲಕ್ಷ ರೂಪಾಯಿ ಸಹಾಯಧನ ಘೋಷಿಸಿದರು. ಭಾರತ ತಂಡ ಕಂಚಿನ ಪದಕ ಜಯಿಸಿರುವುದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಉಡುಗೊರೆ ಎಂದು ನಾಯಕ ಮನ್‌ಪ್ರೀತ್ ಸಿಂಗ್ ಇದೇ ವೇಳೆ ಸ್ಮರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

26/11 ದಾಳಿಯ ನಂತರ ಪ್ರತೀಕಾರ ತಡೆದವರು ಯಾರು ಎಂಬುದನ್ನು ಕಾಂಗ್ರೆಸ್ ದೇಶಕ್ಕೆ ತಿಳಿಸಬೇಕು: ಪ್ರಧಾನಿ ಮೋದಿ

ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಔರಂಗಜೇಬ್ ಆಡಳಿತದಡಿ ಮಾತ್ರ India ಅಖಂಡವಾಗಿತ್ತು; ಭಾರತದೊಂದಿಗೆ ಯುದ್ಧದ ಸಾಧ್ಯತೆ ನಿಜ: ಪಾಕಿಸ್ತಾನ ರಕ್ಷಣಾ ಸಚಿವ

ತಾನು ಯಾವತ್ತಿಗೂ ವಿಮರ್ಶಾತೀತ ಎಂದೆಣಿಸುವುದರಲ್ಲಿ ಯಾವ ನ್ಯಾಯವಿದೆ? (ತೆರೆದ ಕಿಟಕಿ)

ಬೌದ್ಧ ಹಬ್ಬದ ವೇಳೆ ತನ್ನದೇ ಜನರ ಮೇಲೆ ಮ್ಯಾನ್ಮಾರ್ ಸೇನೆ ದಾಳಿ: ಬಾಂಬ್ ಸ್ಫೋಟಿಸಿ ಮಕ್ಕಳು ಸೇರಿ 40 ಮಂದಿ ಹತ್ಯೆ!

SCROLL FOR NEXT