ಶೂಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದ ಅವನಿ ಲೇಖರ 
ಕ್ರೀಡೆ

ಟೋಕಿಯೊ ಪ್ಯಾರಲಿಂಪಿಕ್ಸ್: ಮಹಿಳೆಯರ 10 ಮೀ. ಶೂಟಿಂಗ್ ನಲ್ಲಿ ಅವನಿ ಲೆಖಾರಾಗೆ ಚಿನ್ನದ ಪದಕ

ಈ ಬಾರಿಯ ಪ್ಯಾರಲಿಂಪಿಕ್ ನಲ್ಲಿ ಸಹ ಭಾರತ ಇತಿಹಾಸ ಸೃಷ್ಟಿಸಿದೆ. ಇಂದು ಬೆಳಗ್ಗೆ ಮುಗಿದ ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಪಂದ್ಯದಲ್ಲಿ 19 ವರ್ಷದ ಅವನಿ ಲೆಖಾರಾ ಚಿನ್ನದ ಪದಕ ಗಳಿಸಿದ್ದಾರೆ.

ಟೋಕಿಯೊ: ಈ ಬಾರಿಯ ಪ್ಯಾರಲಿಂಪಿಕ್ ನಲ್ಲಿ ಸಹ ಭಾರತ ಇತಿಹಾಸ ಸೃಷ್ಟಿಸಿದೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಅವನಿ ಲೆಖಾರಾ ಅವರು ಮಹಿಳೆಯರ ೧೦ ಮೀಟರ್ ಏರ್ ರೈಫಲ್ ಶೂಟಿಂಗ್‌ನಲ್ಲಿ ಸ್ವರ್ಣ ಪದಕ ಗಳಿಸಿದ್ದಾರೆ. ಈ ಮೂಲಕ ಭಾರತಕ್ಕೆ ಪ್ಯಾರಾಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗಳಿಸಿದ ಮೊದಲ ಮಹಿಳೆಯಾಗಿದ್ದಾರೆ.

ಪ್ಯಾರಲಿಂಪಿಕ್ ನಲ್ಲಿ ಇದುವರೆಗೆ ಚಿನ್ನ ಗೆದ್ದ ಭಾರತೀಯ ಆಟಗಾರರಲ್ಲಿ ಅವನಿ ಲೆಖಾರಾ ನಾಲ್ಕನೆಯವರಾಗಿದ್ದಾರೆ. 19 ವರ್ಷದ ಅವನಿ ಒಟ್ಟು 249.6 ಅಂಕಗಳನ್ನು ಗಳಿಸುವ ಮೂಲಕ ಪ್ಯಾರಲಿಂಪಿಕ್ ಇತಿಹಾಸದಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಈ ಹಿಂದಿನ ಪ್ಯಾರಲಿಂಪಿಕ್ ನಲ್ಲಿ ಭಾರತದ ಕ್ರೀಡಾಪಟುಗಳಾದ ಈಜುಗಾರ ಮುರಳಿಕಾಂತ್ ಪೆಟ್ಕರ್(1972ರಲ್ಲಿ), ಜಾವೆಲಿನ್ ಥ್ರೋವರ್ ದೇವೇಂದ್ರ ಜಾಜರಿಯಾ(2004 ಮತ್ತು 2016ರಲ್ಲಿ) ಮತ್ತು ಹೈಜಂಪ್ ನಲ್ಲಿ 2016ರಲ್ಲಿ ತಂಗವೇಲು ಮರಿಯಪ್ಪನ್ ಚಿನ್ನದ ಪದಕ ಗಳಿಸಿದ್ದರು.

ಎಸ್ ಎಚ್ 1 ರೈಫಲ್ ವಿಭಾಗದಲ್ಲಿ  ಅವನಿ ಲೆಖಾರಾ ಗನ್ ನ್ನು ಕೈಗಳಿಂದ ಬಂದೂಕನ್ನು ಹಿಡಿದುಕೊಳ್ಳಲು ಸಮರ್ಥರಾಗಿದ್ದರು. ಪ್ಯಾರಲಿಂಪಿಕ್ ನಲ್ಲಿ ಕ್ರೀಡಾಪಟುಗಳು ತಮ್ಮ ಕಾಲುಗಳಲ್ಲಿ ದುರ್ಬಲತೆ ಹೊಂದಿರುವವರು ಕುಳಿತುಕೊಂಡು ಸಾಧ್ಯವಾದವರು ನಿಂತುಕೊಂಡು ಸ್ಪರ್ಧಿಸುತ್ತಾರೆ. 

ಪ್ರಧಾನಿ ಪ್ರಶಂಸೆ: ಇವರ ಅದ್ವಿತೀಯ ಸಾಧನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಅವನಿ ಲೆಖಾರಾ ಅಸಾಧಾರಣ ಪ್ರದರ್ಶನ ತೋರಿದ್ದೀರಿ. ನಿಮ್ಮ ಶ್ರಮದಿಂದ ದೇಶಕ್ಕೆ ಚಿನ್ನ ತಂದುಕೊಟ್ಟಿದ್ದೀರಿ... ಶೂಟಿಂಗ್ ಬಗೆಗೆ ನಿಮಗಿರುವ ಉತ್ಸಾಹದಿಂದ ಇದು ಸಾಧ್ಯವಾಗಿದೆ. ಭಾರತೀಯ ಕ್ರೀಡೆಗಳಿಗೆ ಇದು ನಿಜಕ್ಕೂ ವಿಶೇಷ ಕ್ಷಣ, ಮುಂದಿನ ನಿಮ್ಮ ಪ್ರಯತ್ನಗಳಿಗೆ ಶುಭ ಹಾರೈಕೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT