ಪಿ.ವಿ. ಸಿಂಧು 
ಕ್ರೀಡೆ

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಪಿ.ವಿ. ಸಿಂಧು ಸೇರಿ 25 ಭಾರತೀಯ ಆಟಗಾರರು ಭಾಗಿ

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಇಂದು ಹುಯೆಲ್ವಾದಲ್ಲಿರುವ ಕ್ಯಾರೊಲಿನಾ ಮರಿನ್ ಸ್ಪೋರ್ಟ್ಸ್ ಪ್ಯಾಲೇಸ್ ನಲ್ಲಿ ಪ್ರಾರಂಭವಾಗಲಿದೆ. ಇದರಲ್ಲಿ ಪಿ. ವಿ. ಸಿಂಧು ನಾಯಕತ್ವದಲ್ಲಿ ಭಾರತದ 25 ಆಟಗಾರರು ಭಾಗವಹಿಸುತ್ತಿದ್ದಾರೆ. 

ಹುಯೆಲ್ವಾ/ ಸ್ಪೇನ್: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಇಂದು ಹುಯೆಲ್ವಾದಲ್ಲಿರುವ ಕ್ಯಾರೊಲಿನಾ ಮರಿನ್ ಸ್ಪೋರ್ಟ್ಸ್ ಪ್ಯಾಲೇಸ್ ನಲ್ಲಿ ಪ್ರಾರಂಭವಾಗಲಿದೆ. ಇದರಲ್ಲಿ ಪಿ.ವಿ. ಸಿಂಧು ನಾಯಕತ್ವದಲ್ಲಿ ಭಾರತದ 25 ಆಟಗಾರರು ಭಾಗವಹಿಸುತ್ತಿದ್ದಾರೆ. 

ಎರಡು ಬಾರಿ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದಿರುವ ಪಿ.ವಿ. ಸಿಂಧು ಹಾಲಿ ಚಾಂಪಿಯನ್ ಕೂಡಾ ಆಗಿದ್ದಾರೆ. 2019ರಲ್ಲಿ ಇವರು ಬಾಸೆಲ್ ನಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ನಂತರ ಅವರು ಭಾರತದ ಮೊದಲ ವಿಶ್ವ ಚಾಂಪಿಯನ್ ಎನಿಸಿಕೊಂಡಿದ್ದರು. ಈ ಸ್ಪರ್ಧೆಯಲ್ಲಿ ಭಾಗವಹಿಸುವುದರ ಮೂಲಕ ಸಿಂಧು ಗರಿಷ್ಠ 6 ಪದಕಗಳನ್ನು ಗೆಲ್ಲುವ ಮೊದಲ ಮಹಿಳಾ ಆಟಗಾರ್ತಿಯಾಗುವ ಅವಕಾಶ ಪಡೆದಿದ್ದಾರೆ. ಪಿ. ವಿ. ಸಿಂಧು ಹಾಗೂ ಚೀನಾದ ಜೆಂಗ್ ನಿಂಗ್ 5-5 ಪದಕಗಳನ್ನು ಹೊಂದಿರುವ ಹಿರಿಮೆಯಿದೆ.

ಈ ಮಧ್ಯೆ ಮೂರು ಬಾರಿಯ ಚಾಂಪಿಯನ್ ಮತ್ತು ಸ್ಥಳೀಯ ಆಟಗಾರ್ತಿ ಕೆರೂಲಿನಾ ಮರಿನ್ ಹಾಗೂ 2017ರ ವಿಜೇತ ನೊಜೊಮಿ ಒಕುಹರಾ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದಾರೆ. ಅಲ್ಲದೇ, ಭಾರತದ ಸೈನಾ ನೆಹ್ವಾಲ್ ಗಾಯದ ಸಮಸ್ಯೆಯಿಂದ ಮೊದಲ ಬಾರಿಗೆ ಚಾಂಪಿಯನ್ ಶಿಪ್ ನಿಂದ ಹೊರಗುಳಿಯುತ್ತಿದ್ದಾರೆ. ಈ ಟೂರ್ನಿಯಲ್ಲಿ ಪಿ. ವಿ. ಸಿಂಧು ಮೊದಲ ಸುತ್ತಿನಲ್ಲಿ ಬೈ ಪಡೆದುಕೊಂಡಿದ್ದು, ಎರಡನೇ ಸುತ್ತಿನಲ್ಲಿ ಮಾರ್ಟಿನಾ ರೆಪಿಸ್ಕಾ ಅವರನ್ನು ಎದುರಿಸಲಿದ್ದಾರೆ.

ಪುರುಷರ ಸಿಂಗಲ್ಸ್ ನಲ್ಲಿ 12ನೇ ಶ್ರೇಯಾಂಕದ ಕಿಡಂಬಿ ಶ್ರೀಕಾಂತ್ ಅವರು ಮೊದಲ ಪಂದ್ಯದಲ್ಲಿ ಸ್ಪೇನ್ ನ ಪಾಬ್ಲೊ ಅಬಿಯಾನ್ ಮತ್ತು ಕಂಚಿನ ಪದಕ ವಿಜೇತ ಬಿ ಸಾಯಿ ಪ್ರಣೀತ್, ನೆದರ್ ಲ್ಯಾಂಡ್ಸ್ ನ ಮಾರ್ಕ್ ಕೆಲ್ಜೊ ವಿರುದ್ಧ ಸೆಣಸಲಿದ್ದಾರೆ. ಮಾಜಿ ನಂಬರ್ 10 ಆಟಗಾರ ಎಚ್ ಎಸ್ ಪ್ರಣಯ್ ಅವರು ಲಾಂಗ್ ಆಂಗಸ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಭಾರತದ 11 ಜೋಡಿಗಳು ಡಬಲ್ಸ್ ನಲ್ಲಿ ಭಾಗವಹಿಸುತ್ತಿವೆ. 50 ದೇಶಗಳ ಒಟ್ಟು 337 ಆಟಗಾರರು ಈ ಚಾಂಪಿಯನ್ ಶಿಪ್ ನಲ್ಲಿ ಸ್ಪರ್ಧಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT