ಕಿಡಂಬಿ ಶ್ರೀಕಾಂತ್ 
ಕ್ರೀಡೆ

BWF World Championships: ಇತಿಹಾಸ ಬರೆದ ಕಿಡಂಬಿ ಶ್ರೀಕಾಂತ್, ಲಕ್ಷ್ಯ ಸೇನ್ ಸೋಲಿಸಿ ಫೈನಲ್ ಗೆ ಲಗ್ಗೆ!

ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಇತಿಹಾಸ ಬರೆದಿದ್ದು, ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಷಟ್ಲರ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ನವದೆಹಲಿ: ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಇತಿಹಾಸ ಬರೆದಿದ್ದು, ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಷಟ್ಲರ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ಹುಯೆಲ್ವಾದಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸುವ ಮೂಲಕ ಕಿಡಂಬಿ ಶ್ರೀಕಾಂತ್ ಈ ಸಾಧನೆ ಮಾಡಿದ ಮೊದಲ ಭಾರತೀಯ ಷಟ್ಲರ್ ಎಂಬ ಇತಿಹಾಸ ನಿರ್ಮಿಸಿದ್ದಾರೆ. ಸೆಮಿ ಫೈನಲ್ ನಲ್ಲಿ ಕಿಡಂಬಿ ಶ್ರೀಕಾಂತ್ ಅವರು ಲಕ್ಷ್ಯ ಸೇನ್ ಅವರನ್ನು ಸೋಲಿಸಿ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಲಕ್ಷ್ಯ ಸೇನ್ ರನ್ನು ಶ್ರೀಕಾಂತ್ ಅವರು, 21-17, 17-17, 21-14 ನೇರ ಸೆಟ್ ಗಳ ಅಂತರದಲ್ಲಿ ಮಣಿಸಿ ಭರ್ಜರಿಯಾಗಿ ಫೈನಲ್ ಪ್ರವೇಶಿಸಿದರು. ಒಂದು ಹಂತದಲ್ಲಿ 4-8 ರಿಂದ ಹಿನ್ನಡೆಯಲ್ಲಿದ್ದ ಶ್ರೀಕಾಂತ್ ಬಳಿಕ ಅದ್ಭುತ ಕಮ್ ಬ್ಯಾಕ್ ಮಾಡಿ ಇಡೀ ಪಂದ್ಯದ ಮೇಲೆ ಪ್ರಬಲ ಹಿಡಿತ ಸಾಧಿಸಿದರು.  ಮೂರನೇ ಗೇಮ್ ಅನ್ನು 21-17 ರಲ್ಲಿ ಮುನ್ನಡೆ ಸಾಧಿಸಲು ಅವರು ಬಹಳಷ್ಟು ಶ್ರಮವಹಿಸಬೇಕಾಯಿತು. ಅಂತಿಮವಾಗಿ ಪಂದ್ಯ ಗೆಲ್ಲುವ ಮೂಲಕ ಶ್ರೀಕಾಂತ್ ಇತಿಹಾಸ ನಿರ್ಮಿಸಿದ್ದಾರೆ.

ಡಿಸೆಂಬರ್ 19 ರಂದು ನಡೆಯಲಿರುವ ಪುರುಷರ ಸಿಂಗಲ್ಸ್ ಫೈನಲ್ ನಲ್ಲಿ ಶ್ರೀಕಾಂತ್ ಪ್ರಶಸ್ತಿಗಾಗಿ ಸೆಣಸಲಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ, ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!