ಅಥ್ಲೀಟ್ ಗಳೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ಸಂಭಾಷಣೆ 
ಕ್ರೀಡೆ

ಒಲಿಂಪಿಕ್ಸ್ 2021: ಟೋಕಿಯೋದತ್ತ 228 ಅಥ್ಲೀಟ್ ಗಳ ಭಾರತ ತಂಡ, ಮಹತ್ವದ್ದು ಸಾಧಿಸಿ ಎಂದ ಪ್ರಧಾನಿ ಮೋದಿ

ಒಲಿಂಪಿಕ್ಸ್ 2021 ಕ್ರೀಡಾಕೂಟದ ನಿಮಿತ್ತ 228 ಅಥ್ಲೀಟ್ ಗಳ ಭಾರತ ತಂಡ ಟೋಕಿಯೋಗೆ ಹಾರಲಿರುವ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿ ಅಥ್ಲೀಟ್ ಗಳೊಂದಿಗೆ ಸಂಭಾಷಣೆ ನಡೆಸಿ ಶುಭ ಕೋರಿದರು. 

ನವದೆಹಲಿ: ಒಲಿಂಪಿಕ್ಸ್ 2021 ಕ್ರೀಡಾಕೂಟದ ನಿಮಿತ್ತ 228 ಅಥ್ಲೀಟ್ ಗಳ ಭಾರತ ತಂಡ ಟೋಕಿಯೋಗೆ ಹಾರಲಿರುವ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿ ಅಥ್ಲೀಟ್ ಗಳೊಂದಿಗೆ ಸಂಭಾಷಣೆ ನಡೆಸಿ ಶುಭ ಕೋರಿದರು.

ಇದೇ ಜುಲೈ 23ರಿಂದ ಜಪಾನ್ ರಾಜಧಾನಿ ಟೋಕಿಯೋದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದ್ದು, ಹೀಗಾಗಿ ಭಾರತದ 228 ಮಂದಿ ಅಥ್ಲೀಟ್ ಗಳ ತಂಡ ಜಪಾನ್ ತೆರಳಲು ಸಜ್ಜಾಗಿ ನಿಂತಿವೆ. ಈ ಹಿನ್ನಲೆಯಲ್ಲಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಟೋಕಿಯೊಗೆ ತೆರಳುತ್ತಿರುವ ಭಾರತೀಯ  ಕ್ರೀಡಾಪಟುಗಳೊಂದಿಗೆ ಮಂಗಳವಾರ ಸಮಾಲೋಚನೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭ ಕೋರಿದರು.

ನಿರೀಕ್ಷೆಗಳಿಂದ ವಿಚಲಿತರಾಗದಿರಿ, ಮಹತ್ವದ್ದು ಸಾಧಿಸಿ ಎಂದ ಪ್ರಧಾನಿ ಮೋದಿ
ವಿಡಿಯೋ ಕಾನ್ಫರೆನ್ಸ್ ಮೂಲಕ ಅಥ್ಲೀಟ್ ಗಳೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, 'ಜಗತ್ತಿನ ಅತ್ಯಂತ ಶ್ರೇಷ್ಠ ಕ್ರೀಡಾ ವೇದಿಕೆಯಲ್ಲಿ ಮಿಂಚಲು ಇಡೀ ಭಾರತವೇ ನಿಮ್ಮ ಬೆನ್ನಿಗೆ ನಿಂತಿದೆ ಎಂದು ಅವರು ಎಲ್ಲರಲ್ಲೂ ವಿಶ್ವಾಸ ತುಂಬಿದರು. ಅಪ್ರತಿಮ ಮಹಿಳಾ ಬಾಕ್ಸರ್ ಎಂ. ಸಿ. ಮೇರಿ ಕೋಮ್, ಬ್ಯಾಡ್ಮಿಂಟನ್  ತಾರೆ ಪಿ.ವಿ. ಸಿಂಧು, ಪ್ರತಿಭಾವಂತ ಶೂಟರ್ ಸೌರಭ್ ಚೌಧರಿ, ಶೂಟರ್‌ ಎಲವೆನಿಲ್ ವಲರಿವನ್ ಮತ್ತು ಅನುಭವಿ ಟೇಬಲ್ ಟೆನಿಸ್ ಆಟಗಾರ ಎ. ಶರತ್ ಕಮಲ್ ಸೇರಿದಂತೆ ಹಲವು ಅಥ್ಲೀಟ್ ಗಳೊಂದಿಗೆ ಪ್ರಧಾನಿ ವರ್ಚುವಲ್ ಸಮಾಲೋಚನೆಯಲ್ಲಿ ಮಾತನಾಡಿದರು. 

‘ನಿರೀಕ್ಷೆಗಳಿಂದ ವಿಚಲಿತರಾಗಬೇಡಿ, ಅತ್ಯುತ್ತಮವಾದದ್ದನ್ನು ಸಾಧಿಸಿ, ಕರೆ ನೀಡಿದ ಮೋದಿ, ಬ್ಯಾಡ್ಮಿಂಟನ್‌ ಆಟಗಾರ್ತಿ ಪಿವಿ ಸಿಂಧು ಅವರ ಕ್ರೀಡಾ ಯಾನವನ್ನು ಪ್ರೋತ್ಸಾಹಿಸಿದ ಅವರ ಪೋಷಕರನ್ನು ಇದೇ ವೇಳೆ ಪ್ರಶಂಸಿಸಿದರು. "ನೀವು ಒಲಿಂಪಿಕ್ಸ್‌ನಿಂದ ಹಿಂತಿರುಗಿದ ನಂತರ ನಾನು ನಿಮ್ಮೊಂದಿಗೆ ಐಸ್‌ಕ್ರೀಮ್  ಸವಿಯುತ್ತೇನೆ" ಎಂದು ಪಿ.ವಿ ಸಿಂಧು ಅವರಿಗೆ ನರೇಂದ್ರ ಮೋದಿ ಭರವಸೆ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT