ಟೆನ್ನಿಸ್ ಆಟಗಾರ್ತಿ ಅಂಕಿತಾ ರೈನಾ 
ಕ್ರೀಡೆ

ಟೋಕಿಯೊ ಒಲಿಂಪಿಕ್ಸ್: ಭಾರತದ 19 ಅಥ್ಲೀಟ್ ಗಳು, ಆರು ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗಿ

ಕೋವಿಡ್-19 ಸಾಂಕ್ರಾಮಿಕದ ನಡುವೆ ಜಪಾನಿನ ರಾಜಧಾನಿ ಟೋಕಿಯೊದ ರಾಷ್ಟ್ರೀಯ ಮೈದಾನದಲ್ಲಿ ಇಂದು ಸಂಜೆ ನಡೆಯಲಿರುವ ಒಲಿಂಪಿಕ್ಸ್ 2020 ಉದ್ಘಾಟನಾ ಸಮಾರಂಭದಲ್ಲಿ ಭಾರತದಿಂದ 25 ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಟೋಕಿಯೊ: ಕೋವಿಡ್-19 ಸಾಂಕ್ರಾಮಿಕದ ನಡುವೆ ಜಪಾನಿನ ರಾಜಧಾನಿ ಟೋಕಿಯೊದ ರಾಷ್ಟ್ರೀಯ ಮೈದಾನದಲ್ಲಿ ಇಂದು ಸಂಜೆ ನಡೆಯಲಿರುವ ಒಲಿಂಪಿಕ್ಸ್ 2020 ಉದ್ಘಾಟನಾ ಸಮಾರಂಭದಲ್ಲಿ ಭಾರತದಿಂದ 25 ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಆಟಗಾರರ ಪಟ್ಟಿಯಲ್ಲಿ ಅಂಕಿತಾ ರೈನಾ ಸೇರ್ಪಡೆಯಾಗುತ್ತಿದ್ದಾರೆ. ಟೆಬಲ್ ಟೆನ್ನಿಸ್ ತಂಡದ ಮಾನಿಕಾ ಬಾತ್ರಾ ಮತ್ತು ಶರತ್ ಕಮಲ್ ಪಾಲ್ಗೊಳ್ಳುತ್ತಿಲ್ಲ ಎಂದು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಟ್ವಿಟರ್ ನಲ್ಲಿ ಖಚಿತಪಡಿಸಿದ್ದಾರೆ.

ಆರು ಭಾರತೀಯ ಅಧಿಕಾರಿಗಳೊಂದಿಗೆ ಅಮಿತ್, ಅಶಿಶ್ ಕುಮಾರ್, ಮೆರಿ ಕೋಮ್ ಸೇರಿದಂತೆ 8 ಬಾಕ್ಸರ್ ಗಳು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಟೆಬಲ್ ಟೆನ್ನಿಸ್ ಆಟಗಾರರಾದ ಶರತ್ ಕಮಲ್ ಮತ್ತು ಮಾನಿಕಾ ಬಾತ್ರಾ ಅವರು ಪಾಲ್ಗೊಳ್ಳುತ್ತಿಲ್ಲ, ಟೆನ್ನಿಸ್ ನಿಂದ ಅಂಕಿತಾ ಅವರನ್ನು ಸೇರ್ಪಡೆ ಮಾಡಲಾಗಿದೆ ಎಂದು ರಾಜೀವ್ ಮೆಹ್ತಾ ಟ್ವೀಟ್ ಮಾಡುವ ಮೂಲಕ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಭಾರತದ ಪ್ರತಿನಿಧಿಗಳ ಪಟ್ಟಿಯನ್ನು ತಿಳಿಸಿದ್ದಾರೆ.

ಈ ಮಧ್ಯೆ ಭಾರತೀಯ ಹಾಕಿ ತಂಡದ ನಾಯಕ ಮನ್ ಪ್ರೀತ್ ಸಿಂಗ್, ಮೇರಿಕೋಮ್, ಅರ್ಚರ್, ಶೂಟರ್ಸ್ ಮತ್ತು ಶಟ್ಲರ್ ಗಳೊಂದಿಗೆ ಧ್ವಜ ಹಿಡಿಯಲಿದ್ದಾರೆ. ಮನ್ ಪ್ರೀತ್ ಸಿಂಗ್ ಹೊರತುಪಡಿಸಿದಂತೆ ಇತರ ಭಾರತದ ಹಾಕಿ ಆಟಗಾರರು ಟೋಕಿಯೊ 2020 ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿಲ್ಲ. ಉದ್ಘಾಟನಾ ಸಮಾರಂಭದಲ್ಲಿ ಗೈರಾಗುವವರು ತಮ್ಮ ಕ್ರೀಡೆಗಳು ನಡೆಯುವ ದಿನದಂದು ಪಾಲ್ಗೊಳ್ಳಲಿದ್ದಾರೆ.

18 ಕ್ರೀಡೆಗಳಿಂದ ಒಟ್ಟಾರೇ 127 ಭಾರತೀಯ ಕ್ರೀಡಾಪಟುಗಳು ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಬಾರಿ ಭಾರತದಿಂದ ಅತ್ಯಂತ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳು ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT