ಮೋದಿ 
ಕ್ರೀಡೆ

ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ಸಿದ್ಧತೆಗಳನ್ನು ಪರಿಶೀಲಿಸಿದ ಪಿಎಂ ಮೋದಿ

50 ದಿನಗಳಲ್ಲಿ ಪ್ರಾರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್‌ಗಾಗಿ ಭಾರತದ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಹಾಕಿಸುವುದು, ತರಬೇತಿ ಸೌಲಭ್ಯಗಳು ಸೇರಿದಂತೆ ನಮ್ಮ ಕ್ರೀಡಾಪಟುಗಳ ಪ್ರತಿಯೊಂದು ಅಗತ್ಯವನ್ನು ಮೊದಲ ಆದ್ಯತೆಯಾಗಿ ಪೂರೈಸಲಾಗುವುದು ಎಂದು ಹೇಳಿದರು.

ನವದೆಹಲಿ: 50 ದಿನಗಳಲ್ಲಿ ಪ್ರಾರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್‌ಗಾಗಿ ಭಾರತದ ಸಿದ್ಧತೆಗಳನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಹಾಕಿಸುವುದು, ತರಬೇತಿ ಸೌಲಭ್ಯಗಳು ಸೇರಿದಂತೆ ನಮ್ಮ ಕ್ರೀಡಾಪಟುಗಳ ಪ್ರತಿಯೊಂದು ಅಗತ್ಯವನ್ನು ಮೊದಲ ಆದ್ಯತೆಯಾಗಿ ಪೂರೈಸಲಾಗುವುದು ಎಂದು ಹೇಳಿದರು.

ಕ್ರೀಡೆ ನಮ್ಮ ರಾಷ್ಟ್ರೀಯ ಹೃದಯಭಾಗವಾಗಿದೆ. ನಮ್ಮ ಯುವಕರು ಕ್ರೀಡೆಯ ಪ್ರಬಲ ಮತ್ತು ರೋಮಾಂಚಕ ಸಂಸ್ಕೃತಿಯನ್ನು ರಚಿಸುತ್ತಿದ್ದಾರೆ ಎಂದು ಮೋದಿ ಹೇಳಿದರು. ಜುಲೈನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾರತದ ಒಲಿಂಪಿಕ್ಸ್ ತಂಡವನ್ನು ಸಂಪರ್ಕಿಸಿ ಅವರನ್ನ ಪ್ರೋತ್ಸಾಹಿಸಲು ಮತ್ತು ಸಮಪ್ತ ಭಾರತೀಯರ ಪರವಾಗಿ ಹಾರೈಸುತ್ತೇನೆ ಎಂದರು. 

ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ನಮ್ಮ ಯುವ ಕ್ರೀಡಾಪಟುಗಳಿಗೆ 135 ಕೋಟಿ ಭಾರತೀಯರ ಹಾರೈಕೆ ಸದ ಇರಲಿದೆ. ಜಾಗತಿಕ ವೇದಿಕೆಯಲ್ಲಿ ಮಿಂಚುತ್ತಿರುವ ಪ್ರತಿಯೊಬ್ಬ ಕ್ರೀಡಾಪಟುಗಳಿಗೆ, ಇನ್ನೂ ಒಂದು ಸಾವಿರ ಕ್ರೀಡೆಗಳನ್ನು ತೆಗೆದುಕೊಳ್ಳಲು ಪ್ರೇರಣೆ ನೀಡಲಾಗುವುದು ಎಂದರು. 

ಟೋಕಿಯೋ ಒಲಿಂಪಿಕ್ಸ್‌ಗಾಗಿ ಭಾರತದ ಸಿದ್ಧತೆಗಳನ್ನು ಪರಿಶೀಲಿಸುವ ಸಭೆಯ ಅಧ್ಯಕ್ಷತೆ ವಹಿಸಿದ್ದ ಮೋದಿ ಅವರಿಗೆ 11 ಕ್ರೀಡಾ ವಿಭಾಗಗಳಲ್ಲಿ ಒಟ್ಟು 100 ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ. ಇನ್ನು 25 ಕ್ರೀಡಾಪಟುಗಳು ಅರ್ಹತೆ ಪಡೆಯುವ ಸಾಧ್ಯತೆಯಿದೆ ಎಂದು ತಿಳಿಸಲಾಯಿತು.

ಜುಲೈ 23ರಿಂದ ಟೋಕಿಯೊ ಒಲಿಂಪಿಕ್ಸ್ ಪ್ರಾರಂಭವಾಗಲಿದೆ. ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವಾಗ ಕ್ರೀಡಾಪಟುಗಳನ್ನು ಪ್ರೇರೇಪಿಸುವುದು ಮತ್ತು ಅವರ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಬಗ್ಗೆಯೂ ವಿಶೇಷ ಗಮನ ನೀಡಲಾಗುವುದು. ಇದಕ್ಕಾಗಿ ಸ್ಪರ್ಧೆಯ ಅವಧಿಯಲ್ಲಿ ಅವರ ಪೋಷಕರು ಮತ್ತು ಕುಟುಂಬ ಸದಸ್ಯರೊಂದಿಗೆ ನಿಯಮಿತವಾಗಿ ವೀಡಿಯೊ ಕಾನ್ಫರೆನ್ಸ್ ಆಯೋಜಿಸಲಾಗುವುದು  ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮರ್ಶೆ ಸಭೆಯಲ್ಲಿ, ಮುಂಬರುವ ಆಟಗಳಿಗೆ ಕಾರ್ಯಾಚರಣೆಯ ಸಿದ್ಧತೆಯ ವಿವಿಧ ಅಂಶಗಳ ಕುರಿತು ಅಧಿಕಾರಿಗಳು ಪ್ರಸ್ತುತ ಪಡಿಸಿದರು. ಸಾಂಕ್ರಾಮಿಕ ರೋಗದ ನಡುವೆ ಕ್ರೀಡಾಪಟುಗಳಿಗೆ ನಿರಂತರ ತರಬೇತಿಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಕೈಗೊಂಡ ವಿವಿಧ ಕ್ರಮಗಳು, ಒಲಿಂಪಿಕ್ ಕೋಟಾ ಗೆಲ್ಲಲು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸುವುದು, ಕ್ರೀಡಾಪಟುಗಳಿಗೆ ಲಸಿಕೆ ಹಾಕುವುದು ಮತ್ತು ಅವರಿಗೆ ಕಸ್ಟಮೈಸ್ ಮಾಡಿದ ಬೆಂಬಲವನ್ನು ನೀಡುವ ಬಗ್ಗೆ ಮೋದಿ ಅವರಿಗೆ ತಿಳಿಸಲಾಯಿತು.

ಮೆಗಾ ಕ್ರೀಡಾಕೂಟಕ್ಕಾಗಿ ಟೋಕಿಯೊಗೆ ಪ್ರಯಾಣಿಸುವ ಪ್ರತಿಯೊಬ್ಬ ಅರ್ಹ ಮತ್ತು ಸಂಭಾವ್ಯ ಕ್ರೀಡಾಪಟು, ಸಹಾಯಕ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಆದಷ್ಟು ಬೇಗ ಲಸಿಕೆ ಹಾಕಬೇಕು ಎಂದು ಅವರು ನಿರ್ದೇಶಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT